Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಯೋಗಬಂಧು ಸಂಜೀವಣ್ಣ ನಿಧನ
    ಅಮಾಸೆಬೈಲು

    ಕುಂದಾಪುರ: ಯೋಗಬಂಧು ಸಂಜೀವಣ್ಣ ನಿಧನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ: 
    ಕುಂದಾಪುರದಲ್ಲಿ ಯೋಗಬಂಧು ಸಂಜೀವಣ್ಣ ಎಂದೇ ಖ್ಯಾತರಾಗದ್ದ ಸಂಜೀವ (61) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

    Click Here

    Call us

    Click Here

    ಮೂಲತಃ ಉಡುಪಿಯ ಹೆರಂಜೆ ನಿವಾಸಿ ಪ್ರಸ್ತುತ ಕುಂದಾಪುರದವರಾದ ಸಂಜೀವ ಅವರು ಕುಂದಾಪುರ ಆದರ್ಶ ಆಸ್ಪತ್ರೆಯಲ್ಲಿ ವ್ಯವಸ್ಥಾಪಕರಾಗಿದ್ದರು. ಕಳೆದ 37 ವರ್ಷಗಳಿಂದ ಬ್ರಹ್ಮಾವರ ಹಾಗೂ ಕುಂದಾಫುರದಲ್ಲಿ ಉಚಿತ ಯೋಗ ತರಬೇತಿ ನೀಡುತ್ತಿದ್ದರು.

    ಮಣಿಪಾಲದಲ್ಲಿ ವೈದ್ಯಕೀಯ ದಾಖಲೆಗಳ ತಜ್ಞ ಕೋರ್ಸ್‌ ಮುಗಿಸಿ ಅಲ್ಲಿಯೇ 2 ವರ್ಷ ದುಡಿದಿದ್ದ ಅವರು ಮುಂದೆ ಕುಂದಾಪುರದ ಆದರ್ಶ ಆಸ್ಪತ್ರೆಯಲ್ಲಿ ವೃತ್ತಿ ಆರಂಭಿಸಿದ್ದರು. ಈ ನಡುವೆ ಮುಂಬೈಯಲ್ಲಿ ಕ್ಯಾಂಟೀನ್‌ ಒಂದರಲ್ಲಿ ಕೆಲಸಕ್ಕಿದ್ದರು. ಕೆಲಸದ ವೇಳೆ ಶುರುವಾದ ಬೆನ್ನುನೋವು ಅವರನ್ನು ಹೈರಾಣಾಗಿಸಿತು. ಧರ್ಮಸ್ಥಳದಲ್ಲಿ ಆಗ ತಾನೆ ಆರಂಭವಾಗಿದ್ದ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ದಾಖಲಾಗಿ ಅಲ್ಲಿನ ಚಿಕಿತ್ಸೆಯಿಂದ ಬೆನ್ನು ನೋವು ಮಾಯವಾಗಿತ್ತು. ಅನಂತರ 3 ವರ್ಷ ಸಾಧಕರಾಗಿ ದಾಖಲಾಗಿ ಪ್ರಕೃತಿ ಚಿಕಿತ್ಸೆಯ ಪ್ರಯೋಜನ ಪಡೆದು ಆರೋಗ್ಯ ವೃದ್ಧಿಸಿಕೊಂಡರು. ಸಮಾನ ಮನಸ್ಕರನ್ನೂ ಅಲ್ಲಿಗೆ ಕರೆದೊಯ್ಯುತ್ತಿದ್ದರು.

    1992ರಲ್ಲಿ ಬ್ರಹ್ಮಾವರದಲ್ಲಿ ಯೋಗ ತರಗತಿ ಆರಂಭಿಸಿದರು. ಶಾಲಾ ಮಕ್ಕಳಿಗೆ ಪ್ರತಿ ರವಿವಾರ ತರಬೇತಿ ನೀಡುತ್ತಿದ್ದರು. 1993ರಲ್ಲಿ ಯೋಗ ಬಂಧು ಸಂಸ್ಥೆ ಸ್ಥಾಪಿಸಿ ಯೋಗ ಶಿಬಿರಗಳನ್ನು ಆರಂಭಿಸಿದರು. 2016ರ ವರೆಗೆ ಬ್ರಹ್ಮಾವರದಲ್ಲಿ ತರಗತಿ ನಡೆಸಿದರು. ಕುಂದಾಪುರ ಬಾಲಭವನದಲ್ಲಿ 25 ವರ್ಷಗಳಿಂದ ಬೆಳಗ್ಗೆ 5.45ರಿಂದ 7.15ರವರೆಗೆ ಪ್ರತಿನಿತ್ಯ ಯೋಗ ತರಬೇತಿ ನೀಡುತ್ತಿದ್ದರು. ಸಾರ್ವಜನಿಕ ಸಂಘ ಸಂಸ್ಥೆಗಳ ಜತೆಗೂಡಿ ಈವರೆಗೆ ಹಲವಾರು ಶಿಬಿರಗಳನ್ನು ನಡೆಸಿದ್ದಾರೆ. ಕುಂದಾಪುರ ತಾಲೂಕಿನ ವಿವಿಧೆಡೆ ನಡೆದ ಜನಜಾಗೃತಿ ವೇದಿಕೆಯ ಮದ್ಯ ವರ್ಜನ ಶಿಬಿರಗಳಲ್ಲೂ ಉಚಿತ ಯೋಗ ತರಬೇತಿ ನೀಡಿದ್ದಾರೆ. ಅವರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿ ಗೌರವಗಳು ಸಂದಿದ್ದವು.

    ಸಂಜೀವಣ್ಣ ಅವರು ಮಡದಿ, ಓರ್ವ ಪುತ್ರ, ಕುಟುಂಬ ವರ್ಗ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಾರಕೂರು ಬಂಡೀಮಠ ಶ್ರೀಮಹಾಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕ್ಷೇತ್ರ ನಾಗರಡಿಯಲ್ಲಿ ಮಕರ ಸಂಕ್ರಾಂತಿ ಉತ್ಸವ

    14/01/2026

    ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ: ಬಹುಮಾನ ವಿತರಣಾ ಸಮಾರಂಭ

    14/01/2026

    ಬೈಂದೂರು ಉತ್ಸವ -2026ರ ಅಂಗವಾಗಿ ಗುಜ್ಜಾಡಿಯಲ್ಲಿ ಗ್ರಾಮೋತ್ಸವ

    14/01/2026
    Leave A Reply Cancel Reply

    2 × one =

    Call us

    Click Here

    Call us

    Call us

    Call us
    Highest Viewed Recently
    • ಪ್ರಾಥಮಿಕ ಚಿಕಿತ್ಸೆಯ ಅರಿವು ಚಿಕ್ಕ ಮಕ್ಕಳಿಗೂ ಅತ್ಯವಶ್ಯ: ಡಾ. ಕೀರ್ತಿ
    • ಬಾರಕೂರು ಬಂಡೀಮಠ ಶ್ರೀಮಹಾಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕ್ಷೇತ್ರ ನಾಗರಡಿಯಲ್ಲಿ ಮಕರ ಸಂಕ್ರಾಂತಿ ಉತ್ಸವ
    • ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ: ಬಹುಮಾನ ವಿತರಣಾ ಸಮಾರಂಭ
    • ಕರ್ನಾಟಕ ಜಾನಪದ ಅಕಾಡೆಮಿಯ ಫೆಲೋಶಿಪ್: ಅರ್ಜಿ ಆಹ್ವಾನ
    • ಬೈಂದೂರು ಉತ್ಸವ -2026ರ ಅಂಗವಾಗಿ ಗುಜ್ಜಾಡಿಯಲ್ಲಿ ಗ್ರಾಮೋತ್ಸವ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.