Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಳವಾಗಿದ್ದ 12 ಮೊಬೈಲ್‌ಗಳನ್ನು ಪತ್ತೆಹಚ್ಚಿ ಮಾಲೀಕರಿಗೆ ಹಸ್ತಾಂತರಿಸಿದ ಕುಂದಾಪುರ ಪೊಲೀಸರು
    ಊರ್ಮನೆ ಸಮಾಚಾರ

    ಕಳವಾಗಿದ್ದ 12 ಮೊಬೈಲ್‌ಗಳನ್ನು ಪತ್ತೆಹಚ್ಚಿ ಮಾಲೀಕರಿಗೆ ಹಸ್ತಾಂತರಿಸಿದ ಕುಂದಾಪುರ ಪೊಲೀಸರು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಎ.1 ರಿಂದ ಜೂ.10ರ ತನಕ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಕಳೆದುಕೊಂಡಿದ್ದ 1.20 ಲಕ್ಷ ರೂ. ಮೌಲ್ಯದ ಒಟ್ಟು 12 ಮೊಬೈಲ್‌ ಫೋನ್‌ಗಳನ್ನು ಸಿಇಐಆರ್ ಪೋರ್ಟೆಲ್ ಮೂಲಕ ಪತ್ತೆಹಚ್ಚಿ ವಶಪಡಿಸಿಕೊಂಡಿದ್ದ ಕುಂದಾಪುರ ಪೊಲೀಸರು, ಆ ಮೊಬೈಲ್‌ಗಳನ್ನು ಕುಂದಾಪುರ ಠಾಣೆಯಲ್ಲಿ ಅದರ ಮಾಲೀಕರಿಗೆ ಹಸ್ತಾಂತರಿಸಿದ್ದರು.

    Click Here

    Call us

    Click Here

    ಕುಂದಾಪುರ ಪೊಲೀಸ್ ಠಾಣೆಯಲ್ಲಿ ಈವರೆಗೆ ಒಟ್ಟು 65 ಮೊಬೈಲ್‌ಗಳನ್ನು ಸಿಇಐಆರ್ ತಂತ್ರಾಂಶದ ಮೂಲಕ ಪತ್ತೆಹಚ್ಚಿ ಅದರ ಮಾಲೀಕರಿಗೆ ಈಗಾಗಲೇ ನೀಡಲಾಗಿರುತ್ತದೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಅರುಣ್ ಕೆ ಐಪಿಎಸ್‌ರವರ ಮಾರ್ಗದರ್ಶನದಲ್ಲಿ ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಿದ್ಧಲಿಂಗಪ್ಪ, ಹಾಗೂ ಪರಮೇಶ್ವರ ಹೆಗಡೆರವರ ಮತ್ತು ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಬೆಳ್ಳಿಯಪ್ಪರವರ ನಿರ್ದೇಶನದಂತೆ ಕುಂದಾಪುರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಯು.ಬಿ. ನಂದಕುಮಾರ್‌ರವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಠಾಣಾ ಉಪನಿರೀಕ್ಷಕರಾದ ವಿನಯ್ ಎಂ ಕೊರ್ಲಹಳ್ಳಿ, ಪ್ರಸಾದ್ ಕುಮಾರ್ ಕೆ  ಹಾಗೂ ಸಿಬ್ಬಂದಿಯವರಾದ ಸಿದ್ದಪ್ಪ ಸಕನಳ್ಳಿ, ಮಾರುತಿ ನಾಯ್ಕ ತಾಂತ್ರಿಕ ಸಿಬ್ಬಂದಿ ಅಶ್ವಿನ್ ಕುಮಾರ್‌ ಅವರು ಭಾಗವಹಿಸಿದ್ದರು.

     ಈ ಬಾರಿ ಮೊಬೈಲ್‌ಗಳನ್ನು ಹಾವೇರಿ, ಗದಗ, ಮಂಗಳೂರು, ದಾವಣಗೆರೆ, ಕಾರವಾರ ಹಾಗೂ ಮತ್ತಿತರ ಕಡೆಗಳಿಂದ ಸ್ವಾಧೀನಪಡಿಸಿಕೊಳ್ಳಲಾಗಿದೆ.

    ಸಾರ್ವಜನಿಕರು ಕಳೆದುಕೊಂಡ ಮೊಬೈಲ್ ಫೋನನ್ನು ಸಿಇಐಆರ್ (Central Equipment Identity Register) ಪೋರ್ಟೆಲಿನಲ್ಲಿ ನಮೂದಿಸಿದ್ದಲ್ಲಿ ಪೊಲೀಸರು ಪತ್ತೆ ಮಾಡಲು ಅನುಕೂಲವಾಗುತ್ತದೆ ಅಲ್ಲದೇ ಸಾರ್ವಜನಿಕರು ಕಳೆದುಕೊಂಡ ಮೊಬೈಲ್ ಫೋನ್‌ಗಳ ದುರ್ಬಳಕೆಯನ್ನು ತಡೆಗಟ್ಟಲು ಸಹಕಾರಿಯಾಗುತ್ತದೆ. ಆದುದರಿಂದ ಸಾರ್ವಜನಿಕರು ಕಳೆದುಕೊಂಡ ಮೊಬೈಲ್‌ ಫೋನ್‌ಗಳ ವಿವರಗಳನ್ನು CEIR Portal ನಲ್ಲಿ ದಾಖಲಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಅರುಣ್ ಕೆ ಐಪಿಎಸ್‌ರವರು ತಿಳಿಸಿರುತ್ತಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    19/12/2025

    ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ

    19/12/2025

    ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.