Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಮೃದ್ಧಿ ಮಹಾಮೇಳ ನಾಳೆ ಕೊನೆಯ ದಿನ ಮೊದಲ ಎರಡು ದಿನವೂ ಉತ್ತಮ ಜನ ಸ್ಪಂದನೆ
    alvas nudisiri

    ಸಮೃದ್ಧಿ ಮಹಾಮೇಳ ನಾಳೆ ಕೊನೆಯ ದಿನ ಮೊದಲ ಎರಡು ದಿನವೂ ಉತ್ತಮ ಜನ ಸ್ಪಂದನೆ

    Updated:17/06/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ:
    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ವಿದ್ಯಾಗಿರಿಯ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ ವೇದಿಕೆಯಲ್ಲಿ ನಡೆಯುತ್ತಿರುವ ‘ಸಮೃದ್ಧಿ-ಹಲಸು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಹಾಗೂ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾಮೇಳದ ಎರಡನೇ ದಿನವೂ ಉತ್ತಮ ಜನಸ್ಪಂದನೆ ದೊರೆಯಿತು. ಮೂರು ದಿನಗಳ ಮೇಳದಲ್ಲಿ ಒಟ್ಟು 287 ಸ್ಟಾಲ್‌ಗಳನ್ನು ಪಾಲ್ಗೊಂಡಿದ್ದು, ಮೊದಲ ದಿನ 15,000ದಷ್ಟು ಜನರು ಪಾಲ್ಗೊಂಡರೆ, ಎರಡನೇ ದಿನ ಶನಿವಾರ 20,000ಕ್ಕೂ ಅಧಿಕ ಜನ ಆಗಮಿಸಿದರು.

    Click Here

    Call us

    Click Here

    ಕೇರಳದ ಪಾಲಕ್ಕಾಡ್‌ನಿಂದ ಆಗಮಿಸಿದ್ದ, ಜಯಚಂದ್ರ  ವಿವಿಧ ಬಗೆಯ  ತರಕಾರಿ ಬೀಜಗಳ ಸ್ಟಾಲ್ ತೆರೆದಿದ್ದು, ತರಹೇವಾರಿ ಬೀಜಗಳ ಸಂಗ್ರಹ ಅವರ ಬಳಿಯಲ್ಲಿತ್ತು. 6 ತರಹದ ಅಲಸಂಡೆಯ ಬೀಜ, 3 ತರಹದ ಬೆಂಡೆಯ ಬೀಜ, 6 ತರಹದ ಬದನೆಯ ಬೀಜಗಳು ಲಭ್ಯವಿರುವುದಲ್ಲದೇ,  ಒಟ್ಟು 60 ಬಗೆಯ ತರಕಾರಿ, ಹೂವು ಹಣ್ಣುಗಳ ಬೀಜಗಳು ವ್ಯಾಪಾರಕ್ಕೆ ಲಭ್ಯವಿದ್ದವು. ಚಿಕ್ಕ ಪ್ಯಾಕೆಟ್‌ನಲ್ಲಿ ಲಭ್ಯವಿದ್ದ ಬೀಜಗಳಿಗೆ 20ರೂ ಮುಖಬೆಲೆಯಾದರೆ, 3 ಪೊಟ್ಟಣಗಳಿಗೆ 50 ರೂಪಾಯಿ ನಿಗದಿಪಡಿಸಿದ್ದರು. 

    ಸೂರ್ಯ ಕಾಂತಿ, ಜೀನಿಯಾ, ಬಾಲ್ಸಮ್, ಮಾರಿಗೋಲ್ಡ್ ಸೇರಿದಂತೆ 6 ಬಗೆಯ ಹೂವಿನ ಬೀಜಗಳು ಲಭ್ಯವಿದ್ದವು. ಕಳೆದ ಮೂರು ದಶಕಗಳಿಂದ ಈ ವ್ಯಾಪಾರ ಮಾಡುತ್ತಿರುವ ಜಯಚಂದ್ರ ಮೇಳದ ಮೊದಲ ಎರಡುದಿನ ಉತ್ತಮ ವ್ಯಾಪಾರವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

    ಆಳ್ವಾಸ್ ಕೃಷಿ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಸಂಪೂರ್ಣವಾಗಿ ಸಾವಯವಾಗಿ ತಯಾರಿಸಿದ್ದ ಜೀವಾಮೃತ, ಬೀಜಾಮೃತ ಮತ್ತು ಪಂಚಗವ್ಯಗಳಿಗೆ ಉತ್ತಮ ಬೇಡಿಕೆ ಕಂಡುಬಂತು.  ಪ್ರಕೃತಿಯಿಂದ ಸಿಗುವ ವಸ್ತುಗಳನ್ನ ಬಳಸಿಕೊಂಡು ಕೃಷಿಕರಿಗೆ ಉಪಯುಕ್ತವಾಗುವ  ದ್ರವ್ಯಗಳನ್ನು ತಯಾರಿಸಿಲಾಗಿತ್ತು.

    ನಾಳೆ ಸಮೃದ್ಧಿ ಮಹಾಮೇಳದ ಕೊನೆ ದಿನ:
    ಮೂರು ದಿನಗಳ ಕಾಲ ನಡೆಯಲಿರುವ ಮಹಾಮೇಳ ನಾಳೆ ಕೊನೆಗೊಳ್ಳಲಿದ್ದು, ಭಾನುವಾರ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಎರಡು ದಿನಗಳಲ್ಲಿ ಹೆಚ್ಚಿನ ಎಲ್ಲಾ ಸ್ಟಾಲ್‌ಗಳಿಗೆ ಉತ್ತಮ ವ್ಯಾಪಾರವಾಗಿದ್ದು, ಸಂಸ್ಥೆಯ ವತಿಯಿಂದ ಎಲ್ಲಾ ವ್ಯವಸ್ಥೆಯನ್ನು ವ್ಯಾಪಾರಸ್ಥರಿಗೆ ಹಾಗೂ ಮೇಳದಲ್ಲಿ ಪಾಲ್ಗೊಳ್ಳುವ ಸಾರ್ವಜನಿಕರಿಗೆ ಮಾಡಲಾಗಿತ್ತು. ಆಳ್ವಾಸ್ ಇಂಜಿನಿಯರಿಂಗ್  ಕೃಷಿ ವಿಭಾಗದ  ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ವಿವಿಧ ವಿಭಾಗಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಕಾಲೇಜಿನ ಎನ್‌ಸಿಸಿಯ 100ಕ್ಕೂ ಅಧಿಕ ಕೆಡೆಟ್‌ಗಳು ಮೇಳದಲ್ಲಿ ಸಹಕರಿಸಿದ್ದಾರೆ. ಪ್ರಕೃತಿಯು ಮೇಳದ ಸಫಲತೆಗೆ ಸಹಕರಿಸುತ್ತಿದ್ದು, ಮಳೆಯ ಸಮಸ್ಯೆ ಎರಡು ದಿನವು ಕಾಡಲಿಲ್ಲ. 

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025

    ನಾವುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣೆ

    17/12/2025

    ಧನ್ವಿ ಮರವಂತೆ ಅವರಿಗೆ ರಾಜ್ಯಮಟ್ಟದ ಬಾಲಗೌರವ ಪ್ರಶಸ್ತಿ ಪ್ರದಾನ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.