Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ‘ಜಗನ್ಮೋಹನ ಹಾಗೂ ಶೋಭಾಯಮಾನ’ ನೂತನ ಕಾಲೇಜು ಸಂಕೀರ್ಣ ಹಾಗೂ ವಸತಿ ನಿಲಯಗಳ ಉದ್ಘಾಟನೆ
    alvas nudisiri

    ‘ಜಗನ್ಮೋಹನ ಹಾಗೂ ಶೋಭಾಯಮಾನ’ ನೂತನ ಕಾಲೇಜು ಸಂಕೀರ್ಣ ಹಾಗೂ ವಸತಿ ನಿಲಯಗಳ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ:
    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ವಿದ್ಯಾಗಿರಿಯ ಜಗಜ್ಯೋತಿ ಬಸವೇಶ್ವರ ವೃತ್ತದ, ಜ್ಞಾನಯೋಗಿ ಸರ್ವಜ್ಞ ಆವರಣದಲ್ಲಿ ನೂತನವಾಗಿ ನಿರ್ಮಾಣವಾದ ಕಾಲೇಜು ಸಂಕೀರ್ಣ ಹಾಗೂ ವಿದ್ಯಾರ್ಥಿನಿ ವಸತಿ ನಿಲಯದ ಉದ್ಘಾಟನಾ ಸಮಾರಂಭ ನಡೆಯಿತು.

    Click Here

    Call us

    Click Here

    ನೂತನ ಕಾಲೇಜು ಸಂಕೀರ್ಣ-‘ಜಗನ್ಮೋಹನ’ದ ಉದ್ಘಾಟನೆಯನ್ನು ಕರ್ನಾಟಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮಖ್ಯ ಆಯುಕ್ತ ಪಿಜಿಆರ್ ಸಿಂಧ್ಯ, ಉದ್ಯಮಿ ಕೆ. ಶ್ರೀಪತಿ ಭಟ್ ನೆರವೇರಿಸಿದರು. 

    ಡಾ. ಎಂ ಮೋಹನ ಆಳ್ವರ ಧರ್ಮಪತ್ನಿ ದಿ. ಶೋಭಾ ಆಳ್ವರ ನೆನಪಿಗಾಗಿ ನೂತನ ವಸತಿ ನಿಲಯಕ್ಕೆ ‘ಶೋಭಾಯಮಾನ’ ಎಂದು ಹೆಸರಿಡಲಾಗಿದ್ದು, ಇದರ ಉದ್ಘಾಟನೆಯನ್ನು ಲಲಿತ ರಾಮಣ್ಣ ಶೆಟ್ಟಿ ಮತ್ತು ಜಯಶ್ರೀ ಅಮರನಾಥ್ ಶೆಟ್ಟಿ ನೇರವೇರಿಸಿದರು.

    ‘ಜಗನ್ಮೋಹನ’ದ ವಿಶೇಷತೆಗಳು:
    ಅತ್ಯಾಧುನಿಕ ವ್ಯವಸ್ಥೆಯನ್ನೊಳಗೊಂಡ ನೂತನ ಕಾಲೇಜು ಕಟ್ಟಡ- ‘ಜಗನ್ಮೋಹನ’ದಲ್ಲಿ 68 ತರಗತಿ ಕೊಠಡಿಗಳಿದ್ದು, 3 ಭೌತಶಾಸ್ತ್ರದ ಲ್ಯಾಬ್, 3 ರಸಾಯಶಾಸ್ತ್ರದ ಲ್ಯಾಬ್, 2 ಜೀವಶಾಸ್ತ್ರದ ಲ್ಯಾಬ್ ಹಾಗೂ ಒಂದು ಸುಸಜ್ಜಿತ ಕಂಪ್ಯೂಟರ್ ಲ್ಯಾಬ್‌ನ್ನು ಹೊಂದಿದೆ. ವಿಶಾಲವಾದ ಸ್ಟಡಿಹಾಲ್‌ನ್ನು ಹೊಂದಿರುವ ಈ ಕಟ್ಟಡ, ಪ್ರತಿಧ್ವನಿ ಮುಕ್ತ ವ್ಯವಸ್ಥೆಯನ್ನು ಹೊಂದಿದೆ. ಪ್ರಶಾಂತ ಪರಿಸರದ ನಡುವೆ, ವಿಶಾಲವಾದ ಹೂದೋಟ, ಸುಂದವಾದ ವಾಕಿಂಗ್ ಟ್ರ್ಯಾಕ್, ಕಟ್ಟಡದ ಒಳಭಾಗದಲ್ಲಿ ಅಮೃತಶಿಲೆಯಿಂದ ನಿರ್ಮಿಸಿದ ಭಗವಾನ್ ಮಹಾವೀರನ ಮೂರ್ತಿ ಮನಸ್ಸಿಗೆ ಆಹ್ಲಾದಕರ ವಾತವರಣವನ್ನು ಒದಗಿಸುತ್ತದೆ.

    ಶೋಭಾಯಮಾನ ವಸತಿ ನಿಲಯ:
    ಶೋಭಾಯಮಾನ ವಸತಿ ನಿಲಯವು ಆಧುನಿಕ ಕಾಲದ ಎಲ್ಲಾ ವ್ಯವಸ್ಥೆಯನ್ನು ಒಳಗೊಂಡ ಸುಸಜ್ಜಿತ ವಸತಿ ಗೃಹವಾಗಿದೆ. 600 ವಿದ್ಯಾರ್ಥಿನಿಯರಿಗೆ ವಸತಿಯನ್ನು ಒದಗಿಸಬಲ್ಲ ಈ ಹಾಸ್ಟೆಲ್, ಎಲ್‌ ಆಕಾರದಲ್ಲಿ ನಿರ್ಮಾಣಗೊಂಡಿದೆ. ವಿದ್ಯಾರ್ಥಿಗಳ ಅನುಕೂಲಕ್ಕನುಗುಣವಾಗಿ ಹಾಸ್ಟೆಲ್‌ನ ರೂಮ್‌ಗಳನ್ನು ನಿರ್ಮಿಸಲಾಗಿದ್ದು, ಪ್ರತೀ ರೂಮ್ ಅಟ್ಯಾಚೆಡ್ ಬಾತ್‌ರೂಮ್ ವ್ಯವಸ್ಥೆಯನ್ನು ಒಳಗೊಂಡಿದೆ.

    Click here

    Click here

    Click here

    Call us

    Call us

    ಎರಡು ಅತ್ಯಾಕರ್ಷಕ ಡೈನಿಂಗ್ ಹಾಲ್‌ಗಳಿದ್ದು, ಒಂದೇ ಕಿಚನ್‌ನಿಂದ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಇಲ್ಲೂ ವಿಶಾಲವಾದ ಸ್ಟಡಿ ಹಾಲ್‌ನ್ನು ನಿರ್ಮಿಸಲಾಗಿದ್ದು, ವಿದ್ಯಾರ್ಥಿಗಳು ಸದಾ ಕಾಲ ಈ ವ್ಯವಸ್ಥೆಯನ್ನು ಉಪಯೋಗಿಬಹುದಾಗಿದೆ.  24 ಗಂಟೆಗಳ ಸಿಸಿಟಿವಿ ಕಣ್ಗಾವಲಿರುವ ಈ ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿರಿಗಳು, ವೈದ್ಯಕೀಯ ತಂಡ, ಆಪ್ತ ಸಲಹೆಗಾರರು, ವಾರ್ಡನ್‌ಗಳು ಸದಾ ಸೇವೆಯಲ್ಲಿ ನಿರತರಾಗಿರುತ್ತಾರೆ.

    ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ, ಉದ್ಯಮಿ ಶ್ರೀಪತಿ ಭಟ್, ಮೀನಾಕ್ಷಿ ಆಳ್ವ, ಟ್ರಸ್ಟಿಗಳಾದ ವಿವೇಕ್ ಆಳ್ವ, ಡಾ. ವಿನಯ್ ಆಳ್ವ, ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕರು, ಶಿಕ್ಷಕೇತರ ವೃಂದದವರು ಪಾಲ್ಗೊಂಡರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಪವಿತ್ರ ಎ.ವಿ. ಅವರಿಗೆ ಪಿಎಚ್‌ಡಿ ಪದವಿ ಪ್ರದಾನ

    03/02/2026
    Leave A Reply Cancel Reply

    2 + seventeen =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.