Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರೋಟರಿ ವಲಯ ಕ್ರೀಡಾಕೂಟ: ಬಹುಮಾನ ವಿತರಣೆ
    ಕುಂದಾಪ್ರದ್ ಸುದ್ಧಿ

    ರೋಟರಿ ವಲಯ ಕ್ರೀಡಾಕೂಟ: ಬಹುಮಾನ ವಿತರಣೆ

    Updated:04/11/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಕ್ರೀಡೆಗಳು ಬದುಕಿನಲ್ಲಿ ಹೊಸ ಚೈತನ್ಯ ಮೂಡಿಸುವ ಜೊತೆಗೆ ನಮ್ಮ ಕೌಶಲ್ಯವನ್ನು ವೃದ್ಧಿಸುತ್ತದೆ. ನಮ್ಮೊಳಗಿನ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ಅವಕಾಶ ಕ್ರೀಡಾಕೂಟದಿಂದ ದೊರೆಯುವುದರಿಂದ ರೋಟರಿ ವಲಯದ ಸದಸ್ಯರ ನಡುವಿನ ಭಾಂದವ್ಯ ವೃದ್ಧಿಸುವ ಸಲುವಾಗಿ ವಲಯ ಕ್ರೀಡೋತ್ಸವವನ್ನು ಆಯೋಜಿಸಲಾಗಿದೆ. ಎಲ್ಲ ಸದಸ್ಯರ ಉತ್ಸಾಹದ ಭಾಗವಹಿಸುವಿಕೆಯಿಂದ ಕ್ರೀಡಾಕೂಟ ಯಶಸ್ವಿಯಾಗಲು ಸಾಧ್ಯವಾಗಿದೆ ಎಂದು ರೋಟರಿ ಅಸಿಸ್ಟೆಂಟ್ ಗವರ್ನರ್ ಸತೀಶ್ ಎನ್. ಶೇರೆಗಾರ್ ಹೇಳಿದರು.

    Click Here

    Call us

    Click Here

    ಅವರು ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ರೋಟರಿ ವಲಯ 1ರ ಸದಸ್ಯರಿಗೆ ಏರ್ಪಡಿಸಿದ ರೋಟರಿ ವಲಯ ಕ್ರೀಡಾಕೂಟದ ಅಂಗವಾಗಿ ಕುಂದಾಪುರದ ಆರ್ಶೀವಾದ ಹಾಲ್‌ನಲ್ಲಿ ಆಯೋಜಿಸಿದ ಬಹುಮಾನ ವಿತರಣೆ ಸಮಾರಂಭದಲ್ಲಿ ಮಾತನಾಡಿದರು.

    ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅಧ್ಯಕ್ಷತೆವಹಿಸಿದ್ದರು. ಸಹನಾ ಡೆವಲಪರ‍್ಸ್‌ನ ನಿರ್ದೇಶಕ ಸುರೇಂದ್ರ ಶೆಟ್ಟಿ ಬಹುಮಾನ ವಿತರಿಸಿದರು. ವಲಯದ ಕಾರ್ಯದರ್ಶಿ ಸುದರ್ಶನ್ ಕೆ. ಎಸ್., ಕ್ರೀಡಾಕೂಟ ಸಂಯೋಜಕ ರವಿರಾಜ್ ಶೆಟ್ಟಿ, ಕ್ರೀಡಾಕೂಟ ಸಂಚಾಲಕ ರಂಜಿತ್ ಶೆಟ್ಟಿ, ರೋಟರಿ ಕುಂದಾಪುರ ಕಾರ್ಯದರ್ಶಿ ಸಂತೋಷ ಕೋಣಿ ಉಪಸ್ಥಿತರಿದ್ದರು. ರೋಟರಿ ಸದಸ್ಯರಾದ ರಾಘವೇಂದ್ರಚರಣ ನಾವಡ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ರೋಟರಿ ಜೋನಲ್ ಲೆಫ್ಟಿನೆಂಟ್ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ ವಂದಿಸಿದರು.

    ಕ್ರೀಡಾಕೂಟಕ್ಕೆ ಚಾಲನೆ : ರೋಟರಿ ಕ್ಲಬ್ ಕುಂದಾಪುರದ ಆತಿಥ್ಯದಲ್ಲಿ ಬೆಳಿಗ್ಗೆ ಕುಂದಾಪುರದ ಗಾಂಧಿ ಮೈದಾನದಲ್ಲಿ ಬಲೂನ್ ಹಾರಿ ಬಿಡುವ ಮೂಲಕ ರೋಟರಿ ವಲಯದ ಕ್ರೀಡಾಕೂಟಕ್ಕೆ ರೋಟರಿ ಅಸಿಸ್ಟೆಂಟ್ ಗವರ್ನರ್ ಸತೀಶ್ ಎನ್. ಶೇರೆಗಾರ್ ಚಾಲನೆ ನೀಡಿದರು. ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು, ವಲಯದ ಕಾರ್ಯದರ್ಶಿ ಸುದರ್ಶನ್ ಕೆ. ಎಸ್., ಕ್ರೀಡಾಕೂಟ ಸಂಯೋಜಕ ರವಿರಾಜ್ ಶೆಟ್ಟಿ, ಕ್ರೀಡಾಕೂಟ ಸಂಚಾಲಕ ರಂಜಿತ್ ಶೆಟ್ಟಿ, ರೋಟರಿ ಜೋನಲ್ ಲೆಫ್ಟಿನೆಂಟ್‌ಗಳಾದ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ, ಗಜೇಂದ್ರ ಶೆಟ್ಟಿ, ಶ್ಯಾಮರಾಜ್ ಭಟ್, ಮಂಜುನಾಥ ಮಹಾಲೆ, ರೋಟರಿ ಅಸಿಸ್ಟೆಂಟ್ ಗವರ್ನರ್‌ಗಳಾದ ಮೊಳಹಳ್ಳಿ ಗಣೇಶ ಶೆಟ್ಟಿ, ಅಭಿನಂದನ ಶೆಟ್ಟಿ, ಎಂ. ಎನ್. ಅಡಿಗ, ರೋಟರಿ ಸದಸ್ಯರಾದ ಶ್ರೀಪಾದ ಉಪಾಧ್ಯಾಯ, ಸತೀಶ್ ಕೋಟ್ಯಾನ್, ಪ್ರದೀಪ ವಾಜ್, ಕೆ. ಆರ್. ನಾಯ್ಕ್, ಮುತ್ತಯ್ಯ ಶೆಟ್ಟಿ ವಲಯದ13 ರೋಟರಿ ಕ್ಲಬ್‌ನ ಅಧ್ಯಕ್ಷರುಗಳು, ತೀರ್ಪುಗಾರರಾದ ನಾರಾಯಣ ಶೆಟ್ಟಿ ಮಾರ್ಕೋಡು, ಸುರೇಶ್ ಎಂ, ಬಿ. ಬಿ. ಗಾಂವ್ಕರ್, ಎಂ. ಬಿ. ಲಮಾಣಿ, ಕೇಶುಬಾಯ್ ರಾಥೋಡ್ ರೋಟರಿ ಕುಂದಾಪುರ ಕಾರ್ಯದರ್ಶಿ ಸಂತೋಷ ಕೋಣಿ ಇನ್ನಿತರರು ಉಪಸ್ಥಿತರಿದ್ದರು. ರೋಟರಿ ಸದಸ್ಯರಾದ ರಾಘವೇಂದ್ರಚರಣ ನಾವಡ ಕಾರ್ಯಕ್ರಮ ನಿರ್ವಹಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025
    Leave A Reply Cancel Reply

    twenty + 9 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.