Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯ ಏಳು ಪರೀಕ್ಷಾ ಕೇಂದ್ರದಲ್ಲಿ ಜೂನ್ 30 ರಂದು ನಡೆಯಲಿರುವ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.

    Click Here

    Call us

    Click Here

    ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಟಿ.ಇ.ಟಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

    ಶಿಕ್ಷಕರಾ ಅರ್ಹತಾ ಪರೀಕ್ಷೆಯು ಜೂನ್ 30 ರಂದು ಜಿಲ್ಲೆಯ ಏಳು ಪರೀಕ್ಷಾ ಕೇಂದ್ರದಲ್ಲಿ ನಡೆಯುತ್ತಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ಕುಡಿಯುವ  ನೀರಿನ ವ್ಯವಸ್ಥೆ, ವಿದ್ಯುತ್‌ಚ್ಛಕ್ತಿಯಿಂದ ಬೆಳಕಿನ ವ್ಯವಸ್ಥೆ ಸೇರಿದಂತೆ ಮತ್ತಿತರ ಸೌಲಭ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದರು.

    ಜಿಲ್ಲೆಯಲ್ಲಿ ಮೊದಲ ಅಧಿವೇಶನ ಬೆಳಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ನಡೆಯಲಿದ್ದು, ಒಟ್ಟು 960 ಅಭ್ಯರ್ಥಿಗಳು ಹಾಗೂ ಅಪರಾಹ್ನ 2 ರಿಂದ 4.30 ರ ವರೆಗೆ ಎರಡನೇ ಅಧಿವೇಶನ ನಡೆಯಲಿದ್ದು, ಒಟ್ಟು 1653 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

    ಪರೀಕ್ಷಾ ಕೇಂದ್ರಗಳಿಗೆ ಅಭ್ಯರ್ಥಿ ಸೇರಿದಂತೆ ಯಾರೊಬ್ಬರಿಗೂ ಮೊಬೈಲ್, ಬ್ಲೂಟೂತ್ ಸೇರಿದಂತೆ ಮತ್ತಿತರ ಯಾವುದೇ ಎಲೆಕ್ಟಾನಿಕ್ ಉಪಕರಣಗಳನ್ನು ಕೊಂಡೊಯ್ಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದ ಅವರು, ಪ್ರತಿಯೊಂದು ಪರೀಕ್ಷಾ ಕೊಠಡಿಗೂ ಸಿ.ಸಿ.ಟಿ.ವಿ ಆಳವಡಿಸಬೇಕು ಎಂದು ಸೂಚನೆ ನೀಡಿದರು.

    Click here

    Click here

    Click here

    Call us

    Call us

    ಪರೀಕ್ಷೆ ನಡೆಯುವ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ ಎಂದ ಅವರು, ಪರೀಕ್ಷಾ ಅವಧಿಯಲ್ಲಿ ಸಮಯ ಪರಿಪಾಲನೆ ಅತೀ ಮುಖ್ಯವಾಗಿರುವ ಹಿನ್ನೆಲೆ, ಪರೀಕ್ಷಾ ಕೊಠಡಿಯಲ್ಲಿ ಗೋಡೆ ಗಡಿಯಾರವನ್ನು ತಪ್ಪದೇ ಅಳವಡಿಸಬೇಕು. ಪರೀಕ್ಷಾ ಸಮಯದಲ್ಲಿ ಯಾವುದೇ  ಅವ್ಯವಹಾರ ನಡೆಯದಂತೆ ಎಚ್ಚರವಹಿಸಬೇಕು ಎಂದು ಸೂಚನೆ ನೀಡಿದರು.

    ಪರೀಕ್ಷಾ ಕೇಂದ್ರದ ಸುತ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ, ಸೂಕ್ತ ಆರೋಗ್ಯ ತಪಾಸಣಾ ವ್ಯವಸ್ಥೆ ಸೇರಿದಂತೆ ಮತ್ತಿತರ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲು ಸೂಚನೆ ನೀಡಲಾಯಿತು. ಪರೀಕ್ಷಾ ಗೌಪ್ಯ ಸಾಮಾಗ್ರಿಗಳನ್ನು ಜಿಲ್ಲಾ ಖಜಾನೆಯಿಂದ ಪಡೆದು ಪರೀಕ್ಷಾ ಕೆಂದ್ರಗಳಿಗೆ ಸಾಗಿಸುವಾಗ ಹಾಗೂ ಪರೀಕ್ಷಾ ಕೇಂದ್ರಗಳಿಂದ ಗೌಪ್ಯ ಸಾಮಾಗ್ರಿಗಳನ್ನು ಪಡೆದು ಸಾಗಿಸುವಾಗ ಸಶಸ್ತ್ರ ಭದ್ರತಾ ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು.

    ಈ ಸಾಮಾಗ್ರಿಗಳನ್ನು ಜಿಲ್ಲಾ ಖಜಾನೆಯಿಂದ ಅಭಿರಕ್ಷಿಸಿ ಇಡಬೇಕೆಂದರು. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಗೆ ಪರೀಕ್ಷೆ ಆರಂಭಕ್ಕೂ ಮುನ್ನಾ ಅರ್ಧ ಗಂಟೆ ಮುಂಚಿತವಾಗಿ ಪ್ರವೇಶ ಪಡೆಯಬೇಕು. ಪ್ರವೇಶ ದ್ವಾರ ಹಾಗೂ ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮುನ್ನಾ ಅಭ್ಯರ್ಥಿಗಳನ್ನು ತಪಾಸಣೆ ಮಾಡಬೇಕು ಎಂದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಡಿಡಿಪಿಐ ಗಣಪತಿ ಕೆ, ಜಿಲ್ಲಾ ಖಜಾನಾಧಿಕಾರಿ ಗೋಪಾಲಸ್ವಾಮಿ, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೆದುಳು ನಿಷ್ಕ್ರಿಯಗೊಂಡ 76ನೇ ವಯಸ್ಸಿನ ಗಂಗೊಳ್ಳಿಯ ಮಹಿಳೆಯ ಅಂಗಾಂಗ ದಾನ, ಸಾವಿನಲ್ಲೂ ಸಾರ್ಥಕತೆ

    07/07/2026

    ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

    07/07/2026

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026
    Leave A Reply Cancel Reply

    eleven + twelve =

    Call us

    Click Here

    Call us

    Call us

    Call us
    Highest Viewed Recently
    • ಸಿಎಂಎ ಯುಎಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿ
    • ಕೋಟ ಅಮೃತೇಶ್ವರೀ ದೇಗುಲದಲ್ಲಿ ದುರ್ಗಾಹೋಮ
    • ಮೆದುಳು ನಿಷ್ಕ್ರಿಯಗೊಂಡ 76ನೇ ವಯಸ್ಸಿನ ಗಂಗೊಳ್ಳಿಯ ಮಹಿಳೆಯ ಅಂಗಾಂಗ ದಾನ, ಸಾವಿನಲ್ಲೂ ಸಾರ್ಥಕತೆ
    • ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ
    • ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.