Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಜಿಲ್ಲಾ ಯುವ ಕವಿ ಸಮ್ಮಿಲನ: ಪುಟ್ಟಣ್ಣ ಕುಲಾಲ್ ಯುವ ಕವಿ ಪ್ರಶಸ್ತಿ ಪ್ರದಾನ
    ಕುಂದಾಪ್ರದ್ ಸುದ್ಧಿ

    ಉಡುಪಿ ಜಿಲ್ಲಾ ಯುವ ಕವಿ ಸಮ್ಮಿಲನ: ಪುಟ್ಟಣ್ಣ ಕುಲಾಲ್ ಯುವ ಕವಿ ಪ್ರಶಸ್ತಿ ಪ್ರದಾನ

    Updated:05/11/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ: ಇಲ್ಲಿನ ಕುಂದಪ್ರಭ ಪತ್ರಿಕೆ,  ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ (ರಿ) ಮಂಗಳೂರು, ಆಕಾಶವಾಣಿ ಮಂಗಳೂರು, ಕುಂದಾಪುರ ಸರಕಾರಿ ಪ.ಪೂ.ಕಾಲೇಜಿನ ಸಹಯೋಗದೊಂದಿಗೆ ಲಕ್ಷ್ಮಿ ನರಸಿಂಹ ಕಲಾಮಂದಿರದಲ್ಲಿ ಉಡುಪಿ ಜಿಲ್ಲಾ ಯುವ ಕವಿ ಸಮ್ಮೆಳನ ಹಾಗೂ ಪುಟ್ಟಣ್ಣ ಕುಲಾಲ್ ಯುವ ಕವಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು. ಸಮಾರಂಭವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಅಂಬಾತನಯ ಮುದ್ರಾಡಿ ಮಾತನಾಡಿ, ಸತತ ಅಧ್ಯಯನಶೀಲತೆಯಿಂದ ಉತ್ತಮ ಕವಿತೆ ಮೂಡಿ ಬರಲು ಸಾಧ್ಯ. ಒಳ್ಳೆಯ ಭಾಷೆಯನ್ನು ಬಳಸುವ ಮೂಲಕ ಉತ್ತಮ ಕೃತಿಗಳನ್ನು ಮೂಡಿಸಲು ಸಾಧ್ಯವಿದೆ ಎಂದರು.

    Click Here

    Call us

    Click Here

    ಅಧ್ಯಕ್ಷತೆ ವಹಿಸಿದ್ದ ಮಂಗಳೂರಿನ ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ ರಿ. ಇದರ ಅಧ್ಯಕ್ಷ ಡಾ| ಅಣ್ಣಯ್ಯ ಕುಲಾಲ್ ಮಾತನಾಡಿ, ಮಾನಸಿಕ ಸ್ಥಿಮಿತವನ್ನು ಕಾಯ್ದುಕೊಳ್ಳಲು ಸಾಹಿತ್ಯ ಮಹತ್ತರ ಪಾತ್ರ ವಹಿಸುತ್ತದೆ. ಬೇರೆ ಭಾಷೆಯ ತಿರುಳನ್ನು ಕನ್ನಡಕ್ಕೆ ತರುವ ಪ್ರಯತ್ನ ಮಾಡಬೇಕು ಒಟ್ಟಾರೆ ಕನ್ನಡವನ್ನು ಕಟ್ಟುವ ಕಾರ್ಯ ನಡೆಯಬೇಕು ಎಂಬ ಆಶಯ ವ್ಯಕ್ತಪಡಿಸಿದರು. ಮುಖ್ಯ ಅತಿಥಿಯಾಗಿ ಕುಂದಾಪುರ ಸರಕಾರಿ ಪ.ಪೂ.ಕಾಲೇಜಿನ ಪ್ರಾಂಶುಪಾಲ ಸುಬ್ರಹ್ಮಣ್ಯ ಜೋಷಿ ಉಪಸ್ಥಿತರಿದ್ದರು.

    ಯುವ ಕವಿ ಸಮ್ಮಿಲನ ಹಾಗೂ ಕವಿಗೋಷ್ಟಿಯಲ್ಲಿ ಸರ್ವತಾ ಅಡಿಗ ಮಣೂರು, ಅಲ್ತಾರು ನಾಗರಾಜ, ಕೀರ್ತನಾ ಶೆಟ್ಟಿ, ಶೇಖರ ದೇವಾಡಿಗ ಮೊಗೇರಿ, ಗೀತಾ ಹೆಗ್ಡೆ, ಆದಿತ್ಯ ಪ್ರಸಾದ ಪಾಂಡೇಲು, ರಕ್ಷಿತ್, ಡ್ರೀಮಾ ಡಿ.ಸೋಜಾ, ವಿದ್ಯಾವತಿ ಕೆಂಚನೂರು, ಆನಂದ ಅಜೆಕಾರು ಅವರುಗಳು ತಮ್ಮ ಸ್ವರಚಿತ ಕವನ ವಾಚಿಸಿದರು.

    ಪುಟ್ಟಣ್ಣ ಕುಲಾಲ್ ಯುವ ಕವಿ ಪ್ರಶಸ್ತಿ ಪ್ರದಾನ:
    ಯುವ ಕವಿ ಅಲ್ತಾರು ನಾಗರಾಜ್ ಅವರು ಈ ಬಾರಿಯ ಪುಟ್ಟಣ್ಣ ಕುಲಾಲ್ ಯುವ ಕವಿ ಪ್ರಶಸ್ತಿಗೆ ಭಾಜನರಾದರು. ಅವರಿಗೆ ಪುಟ್ಟಣ್ಣ ಕುಲಾಲ್ ಯುವ ಕವಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಆಕಾಶವಾಣಿಯ ಸದಾನಂದ ಹೊಳ್ಳ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕುಂದಾಪುರದ ಶ್ರೀ ದೇವಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ|ಭವಾನಿ ಆರ್. ರಾವ್ ಇದ್ದರು.

    ಕುಂದಪ್ರಭದ ಯು.ಎಸ್.ಶೆಣೈ ಸ್ವಾಗತಿಸಿದರು. ಲೇಖಕ ಕೋ.ಶಿವಾನಂದ ಕಾರಂತ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ವಿಶ್ವನಾಥ ಕರಬ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Click Here

    Call us

    Call us

    Puttanna kulal award1 Puttanna kulal award3

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025
    Leave A Reply Cancel Reply

    1 × four =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.