ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಜು.4: ಭಾರಿ ಮಳೆ ಹಿನ್ನೆಲೆಯಲ್ಲಿ ಬೈಂದೂರು, ಕುಂದಾಪು, ಹೆಬ್ರಿ ಹಾಗೂ ಕಾರ್ಕಳ ತಾಲೂಕಿನ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜು ತನಕದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ನಿರಂತರ ಮಳೆಯಾಗುತ್ತಿರುವುದರಿಂದ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಆಯಾ ತಾಲೂಕುಗಳ ತಹಶಿಲ್ದಾರರು ರಜೆ ಘೋಷಿಸಿದ್ದಾರೆ.