ಉಪ್ಪುಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ: ನೂತನ ಕೊಠಡಿಯ ಉದ್ಘಾಟನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಉಪ್ಪುಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕೊಠಡಿಯ ಉದ್ಘಾಟನಾ ಸಮಾರಂಭ ಸೋಮವಾರದಂದು ನಡೆಯಿತು.

Call us

Click Here

ಉಪ್ಪುಂದ ಮಾದಯ್ಯ ಶೆಟ್ರಮನೆ ಮೂಲ ಸ್ಥಾನದ  ಸಿದ್ದಮ್ಮ ಮಾದಯ್ಯ ಶೆಟ್ರ ಸ್ಮರಣಾರ್ಥ ಮಕ್ಕಳು ಸುಮಾರು 9.5 ಲಕ್ಷದ ವೆಚ್ಚದಲ್ಲಿ ಸುಸಜ್ಜಿತವಾದ ಶಾಲಾ ಕೊಠಡಿಯನ್ನು ಸಿದ್ದಮ್ಮ ಮಾದಯ್ಯ ಶೆಟ್ರ ಪುತ್ರರಾದ ಯು. ಸೀತಾರಾಮ ಶೆಟ್ಟಿ ಅವರು ದೀಪ ಬೆಳಗಿಸುವುದರ ಮೂಲಕ  ಹಸ್ತಾಂತರಿಸಿ ಶುಭಾ ಹಾರೈಸಿದರು.

ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೋಹನಚಂದ್ರ, ಮಾಜಿ ಪಂಚಾಯತ್ ಉಪಾಧ್ಯಕ್ಷರಾದ ದಿವಾಕರ ಶೆಟ್ಟಿ, ಗುತ್ತಿಗೆದಾರರಾದ ಪ್ರಭಾಕರ ಶೆಟ್ಟಿ, ರವಿರಾಜ್ ಶೆಟ್ಟಿ ಹಾಗೂ ಎಸ್.ಡಿ.ಎಮ್.ಸಿ. ಸದಸ್ಯರು, ಶಾಲಾ ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು ಇನ್ನಿತರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಭಾ ಅಧ್ಯಕ್ಷತೆಯನ್ನು ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ರಾಧಾಕೃಷ್ಣ ಮಲ್ಯ ವಹಿಸಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ ವೆಂಕಪ್ಪ ಉಪ್ಪಾರ ಇವರು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು, ಶಿಕ್ಷಕರಾದ ಸುಧಾಕರ ದೇವಾಡಿಗ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕರಾದ ನಾಗರಾಜ ಇವರು ವಂದಿಸಿದರು .

Click here

Click here

Click here

Click Here

Call us

Call us

Leave a Reply