Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಿವಶಾಂತಿ ಲಯನ್ಸ್ ಕ್ಲಬ್ ಹುಣಸೆಮಕ್ಕಿ – ಮೊಳಹಳ್ಳಿ ನೂತನ ಪದಾಧಿಕಾರಿಗಳ ಪದಗ್ರಹಣ
    ಊರ್ಮನೆ ಸಮಾಚಾರ

    ಶಿವಶಾಂತಿ ಲಯನ್ಸ್ ಕ್ಲಬ್ ಹುಣಸೆಮಕ್ಕಿ – ಮೊಳಹಳ್ಳಿ ನೂತನ ಪದಾಧಿಕಾರಿಗಳ ಪದಗ್ರಹಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಶಿವಶಾಂತಿ ಲಯನ್ಸ್ ಕ್ಲಬ್ ಹುಣಸೆಮಕ್ಕಿ – ಮೊಳಹಳ್ಳಿ ಇದರ ಪದಗ್ರಹಣ ಸಮಾರಂಭವು ಹೊಂಬಾಡಿಯ ಕುಲಾಲ ಸಭಾಭವನದಲ್ಲಿ ಜರುಗಿತು.

    Click Here

    Call us

    Click Here

    ಕಾರ್ಯಕ್ರಮದಲ್ಲಿ ಲಯನ್ಸ್ ಜಿಲ್ಲಾ ಉಪ ಗವರ್ನರ್ ಸಪ್ನಾ ಸುರೇಶ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪದಗ್ರಹಣ ಸಮಾರಂಭವನ್ನು ನೆರವೇರಿಸಿ, ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.

    ಜಿಲ್ಲಾ ಅಂಬಾಸಡರ್ ಅರುಣ್ ಹೆಗ್ಡೆ ಯವರ ಉಪಸ್ಥಿತಿಯಲ್ಲಿ, ನಿಕಟ ಪೂರ್ವ ಅಧ್ಯಕ್ಷರಾದ ರತ್ನಾಕರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ, ಜಿಲ್ಲೆ 317C ಇದರ ಪ್ರಾಂತ್ಯ ಅಧ್ಯಕ್ಷರಾದ ಸೋಮನಾಥ ಹೆಗ್ಡೆ ಹಾಗೂ ವಲಯ ಅಧ್ಯಕ್ಷರಾದ ವಸಂತ್ ಕುಮಾರ್ ಶೆಟ್ಟಿ, ಪ್ರಾಂತ್ಯ ಕಾರ್ಯದರ್ಶಿ ಆನಂದ ಶೆಟ್ಟಿ, ವಲಯ ಕಾರ್ಯದರ್ಶಿ ಪಟ್ಟಾಭಿರಾಮ ಭಟ್ ಮೊದಲಾದವರು ಭಾಗವಹಿಸಿದ್ದರು.

    ಪ್ರಸ್ತುತ ಸಾಲಿನ ನೂತನ ಅಧ್ಯಕ್ಷರಾಗಿ ಮೋಹನ್ ದಾಸ್ ಶೆಟ್ಟಿ ನಿಡ್ಲಾಡಿ, ಕಾರ್ಯದರ್ಶಿಯಾಗಿ ಉದಯಕುಮಾರ್ ಶೆಟ್ಟಿ ಹಾಗೂ ಖಜಾಂಜಿಯಾಗಿ ದಯಾನಂದ್ ಪದಗ್ರಹಿತರಾದರು. ಕ್ಲಬ್ ನ ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಶೆಟ್ಟಿ ಹಾಗೂ ಶಂಕರ್ ಹೆಗ್ಡೆಯವರು ಅಧಿಕಾರ ಸ್ವೀಕರಿಸಿದರು.

    ಈ ಸಮಾರಂಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ವೆಯಲ್ಲಿ ವೈದ್ಯಾಧಿಕಾರಿಗಳಾದ ಮತ್ತು” ವೈದ್ಯ ಶ್ರೇಷ್ಠ ” ಪ್ರಶಸ್ತಿ ಭಾಜನರಾದ ಡಾ. ರಾಜೇಶ್ವರಿ ಇವರನ್ನು ಸತ್ಕರಿಸಿ ಗೌರವಿಸಲಾಯಿತು. ಉಡುಪಿಯ ಜ್ಞಾನ ಸುಧಾ ಕಾಲೇಜಿನ ವಿದ್ಯಾರ್ಥಿನಿ ರೋಶಿನಿ ಎಂ ಪಿ ಇವಳು ಪಿಯು ತರಗತಿಯಲ್ಲಿ ಅತಿ ಹೆಚ್ಚು ಅಂಕಗಳಿಸಿ ರಾಜ್ಯದಲ್ಲಿ 6ನೇ ಸ್ಥಾನ ಗಳಿಕೆಗಾಗಿ ಆಕೆಯನ್ನು ಸತ್ಕಾರಿಸಲಾಯಿತು.

    Click here

    Click here

    Click here

    Call us

    Call us

    ಸರಕಾರಿ ಪದವಿಪೂರ್ವ ಕಾಲೇಜು, ಬಿದ್ಕಲ್ ಕಟ್ಟೆಯ ಪ್ರೌಢಶಾಲಾ ವಿಭಾಗದ ಎಸ್ ಎಸ್ ಎಲ್ ಸಿ ತರಗತಿಯಲ್ಲಿ ಅತ್ಯಧಿಕ ಅಂಕ ಗಳಿಸಿ ರಾಜ್ಯದಲ್ಲಿ 7ನೇ ಸ್ಥಾನಗಳಿಕೆಗಾಗಿ ಧನುಶ್ರೀ ಇವಳನ್ನು ಗೌರವಿಸಲಾಯಿತು.

    ಲಯನ್ಸ್ ನ ಹಿರಿಯ ಸದಸ್ಯರಾದ ಲ. ಸುಬ್ಬಣ್ಣ ಶೆಟ್ಟಿ ಇವರು ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಪ್ರೀತೇಶ್ ಹಾಗೂ ಪ್ರತಿಕ್ಷ ವಿದ್ಯಾಭ್ಯಾಸದಲ್ಲಿ ತೋರಿದ ವಿಶೇಷ ಸಾಧನೆಗಾಗಿ ಸಹಾಯಧನವಿತ್ತು ಗೌರವಿಸಿದರು. ನೂತನ ಅಧ್ಯಕ್ಷರಾದ ಲ. ಮೋಹನ್ ದಾಸ್ ಶೆಟ್ಟಿ ಇವರು ಸಂಕಷ್ಟಗಳಿಂದ ಅನಿತಾ ಹಾಗೂ ವಸಂತಿ ಇವರಿಗೆ ಸಹಾಯಧನವಿತ್ತು ಸಂತೈಸಿದರು.

    ಹಿರಿಯ ಸದಸ್ಯರಾದ ಯು. ರತ್ನಾಕರ್ ಶೆಟ್ಟಿ, ಬಾಲಕೃಷ್ಣ ಹೆಗ್ಡೆ, ಕೆ. ಎನ್. ಚಂದ್ರಶೇಖರ್ ಶೆಟ್ಟಿ, ಶಂಭುಶಂಕರ್ ಶೆಟ್ಟಿ, ಕ್ಯಾಬಿನೆಟ್ ಸದಸ್ಯರಾದ ದಿನಪಾಲ ಶೆಟ್ಟಿ, ಪ್ರಭಾಕರ ಶೆಟ್ಟಿ, ಅನಿಲ್ ಕುಮಾರ ಶೆಟ್ಟಿ, ರಾಜೀವ ಶೆಟ್ಟಿ, ಚಂದ್ರ ಕುಲಾಲ್, ಸುರೇಂದ್ರ ಶೆಟ್ಟಿ, ಪ್ರಶಾಂತ್ ಇಂಜಿನಿಯರ್, ಸರಸ್ವತಿ ಡಿ. ಶೆಟ್ಟಿ, ಶಶಿಕಲಾ ಎಂ. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಕರುಣಾಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವೃದ್ಧೆ ನಾಪತ್ತೆ

    19/12/2025

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ವೃದ್ಧೆ ನಾಪತ್ತೆ
    • ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.