Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸೋಮೇಶ್ವರ ಗುಡ್ಡ ಜರಿತ: ದೊಂಬೆ – ಪಡುವರಿ ಮಾರ್ಗ ಸಂಚಾರ, ದೇಗುಲದ ಆವರಣಕ್ಕೆ ಆಪತ್ತು
    ಊರ್ಮನೆ ಸಮಾಚಾರ

    ಸೋಮೇಶ್ವರ ಗುಡ್ಡ ಜರಿತ: ದೊಂಬೆ – ಪಡುವರಿ ಮಾರ್ಗ ಸಂಚಾರ, ದೇಗುಲದ ಆವರಣಕ್ಕೆ ಆಪತ್ತು

    Updated:17/07/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು,ಜು.17:
    ಖಾಸಗಿ ರೆಸಾರ್ಟ್‌ನ ದಾರಿಗಾಗಿ ಸೋಮೇಶ್ವರದ ಗುಡ್ಡದ ಮೇಲೆ ರಸ್ತೆ ನಿರ್ಮಿಸುತ್ತಿರುವುದರಿಂದ, ಗುಡ್ಡ ಜರಿತ ಉಂಟಾಗಿದ್ದು ದೊಂಬೆ ಮಾರ್ಗದ ಸಂಚಾರ ಹಾಗೂ ಸೋಮೇಶ್ವರ ದೇಗುಲದ ಆವರಣಕ್ಕೆ ಆಪತ್ತು ತಂದೊಡ್ಡಿದೆ.

    Click Here

    Call us

    Click Here

    ಬೈಂದೂರು ಫಾರೆಸ್ಟ್ ಐಬಿಗೆ ತಾಕಿಕೊಂಡಿರುವ ಖಾಸಗಿ ಜಾಗದಲ್ಲಿ ರೆಸಾರ್ಟ್ ನಿರ್ಮಿಸಲಾಗುತ್ತಿದ್ದು, ಅದಕ್ಕೆ ನೇರ ರಸ್ತೆ ನಿರ್ಮಿಸುವ ಉದ್ದೇಶದಿಂದ ಬೈಂದೂರು ಪಡುವರಿಯಿಂದ ದೊಂಬೆಗೆ ತೆರಳುವ ಮಾರ್ಗದ ಬಲಭಾಗದಲ್ಲಿ ಗುಡ್ಡಕ್ಕೆ ಅಡ್ಡಲಾಗಿ ಖಾಸಗಿ ರಸ್ತೆ ನಿರ್ಮಿಸಲಾಗುತ್ತಿದೆ. ಕಳೆದ ಒಂದೂವರೆ ವರ್ಷದಿಂದ ಈ ಕಾಮಗಾರಿ ಪ್ರಗತಿಯಲ್ಲಿದ್ದು, ರಿವಿಟ್‌ಮೆಂಟ್ ಕಟ್ಟಿ ರಸ್ತೆ ನಿರ್ಮಾಣ ಕಾಮಗಾರಿ ಮುಂದುವರಿಸಲಾಗಿತ್ತು. ಕೆಲವು ದಿನಗಳಿಂದ ಮಳೆಯಾಗುತ್ತಿರುವುದರಿಂದ ಕಾಮಗಾರಿ ನಡೆಯುತ್ತಿರುವ ಭಾಗದಲ್ಲಿ ಗುಡ್ಡ ಸಂಪೂರ್ಣ ಜರಿದಿದ್ದು, ಮೇಲ್ಭಾಗದ ರೆಸಾರ್ಟ್ ಸಹಿತ ಕುಸಿದು ಬೀಳುವ ಸಾಧ್ಯತೆ ಇದೆ.

    ದೊಂಬೆ ಭಾಗದ ಸಾರ್ವಜನಿಕರ ಪ್ರಮುಖ ಸಂಪರ್ಕ ಮಾರ್ಗದ ಬಲಭಾಗದಲ್ಲಿಯೇ ಗುಡ್ಡ ಕುಸಿತ ಉಂಟಾಗಿರುವುದರಿಂದ ದಾರಿಯನ್ನು ಹಾದುಹೋಗುವವರಿಗೆ ಪ್ರಾಣಭೀತಿ ಎದುರಾಗಿದೆ. ಶಾಲಾ ವಾಹನಗಳು, ಸರಕಾರಿ ಬಸ್ ಸಹಿತ ನೂರಾರು ವಾಹನಗಳು, ಪಾದಾಚಾರಿಗಳು ನಿತ್ಯವೂ ಇದೇ ಮಾರ್ಗವನ್ನು ಅವಲಂಭಿಸಿದ್ದಾರೆ.

    ಸಾರ್ವಜನಿಕರ ಆಕ್ಷೇಪ, ದೊಂಬೆ ರಸ್ತೆ ಬಂದ್:
    ಗುಡ್ಡ ಕಡಿದು ರಸ್ತೆ ನಿರ್ಮಿಸುವುದು ಅಪಾಯಕಾರಿ ನಿರ್ಧಾರವೆಂದು ಸ್ಥಳೀಯರು ಪಟ್ಟಣ ಪಂಚಾಯತಿಗೆ ಹಲವು ಭಾರಿ ದೂರು ನೀಡಿದ್ದರೂ ಅಧಿಕಾರಿಗಳು ಸ್ಪಂದಿಸದಿರುವುದು ಬೆಳಕಿಗೆ ಬಂದಿದೆ. ಪಟ್ಟಣ ಪಂಚಾಯತ್‌ ಮೌನ ವಹಿಸಿರುವುದೇ ಅಪಾಯಕ್ಕೆ ಕಾರಣ ಎಂದು ಸಾರ್ವಜನಿಕರು ದೂರಿದ್ದಾರೆ. ಸೇಡಿಮಣ್ಣಿನಿಂದ ಕೂಡಿದ ಗುಡ್ಡ ಜರಿಯುವ ಬಗ್ಗೆ ಒತ್ತಿನಣೆಯಲ್ಲಿ ನಡೆದ ಘಟನೆಗಳೇ ಸಾಕ್ಷಿಯಾಗಿದ್ದು, ಆ ಬಳಿಕವೂ ಅವೈಜ್ಞಾನಿಕ ಕಾಮಗಾರಿಗೆ ಅವಕಾಶ ನೀಡಿದ್ದಾದರೂ ಹೇಗೆ ಎಂದು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ನಡುವೆ ಕಾಟಾಚಾರಕ್ಕೆ ದೊಂಬೆ ರಸ್ತೆ ಬಂದ್ ಮಾಡಲಾಗಿದೆ. ಬೈಂದೂರು ತೆರಳಲು ಸುತ್ತುವರಿದು ಬರಬೇಕಾಗಿರುವುದರಿಂದ ಸಾರ್ವಜನಿಕರು ರಸ್ತೆ ಬಂದ್‌ ಮಾಡುವ ವೇಳೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ದೇಗುಲದ ಆವರಣಕ್ಕೂ ಆಪತ್ತು:
    ಸೋಮೇಶ್ವರ ಗುಡ್ಡ ಜರಿತ ಮುಂದುವರಿದರೆ ಸೋಮೇಶ್ವರ ದೇಗುಲದ ಆವರಣಕ್ಕೂ ಆಪತ್ತು ಎದುರಾಗಲಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

    Click here

    Click here

    Click here

    Call us

    Call us

    ದೊಂಬೆಯಲ್ಲಿ ಕೆಲವು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಖಾಸಗಿ ರೆಸಾರ್ಟ್‌ನ ಮುಂದುವರಿದ ಯೋಜನೆಯಾಗಿ ವತ್ತಿನಣೆಯ ಖಾಸಗಿ ಜಾಗದಲ್ಲಿ ರೆಸಾರ್ಟ್ ನಿರ್ಮಿಸಲಾಗಿತ್ತು. ಆದರೆ ಸೋಮೇಶ್ವರದಿಂದ ರಸ್ತೆ ನಿರ್ಮಿಸುವ ಯೋಜನೆ ಇದೀಗ ಸಾರ್ವಜನಿಕರಿಗೆ ಆಪತ್ತು ತಂದೊಡ್ಡಿದೆ.

    ಅಧಿಕಾರಿಗಳ ಭೇಟಿ:
    ಘಟನಾ ಸ್ಥಳಕ್ಕೆ ಬುಧವಾರ ಪಟ್ಟಣ ಪಂಚಾಯತ್, ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

    * ಈ ಸಂಬಂಧ ಅಗತ್ಯ ಕಾಮಗಾರಿ ವ್ಯವಸ್ಥಿತ ರೀತಿಯಲ್ಲಿ ನಡೆಸುವಂತೆ ಈ ಹಿಂದೆಯೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು.‌ ಆದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಈಗ ಮಳೆಗೆ ಗುಡ್ಡ ಕುಸಿದರೆ ಅಧಿಕಾರಿಗಳೇ ಅದಕ್ಕೆ ಜವಾಬ್ದಾರರು. ತಕ್ಷಣವೇ ತುರ್ತು ಕಾಮಗಾರಿ ನಡೆಸಬೇಕು. ಗುಡ್ಡ ಜರಿದು ರಸ್ತೆ ಬ್ಲಾಕ್ ಆಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಈ ಹಿಂದೆಯೇ ದೂರು ನೀಡಿದ್ದರೂ ಯಾವುದೇ ಕ್ರಮ ಆಗಿಲ್ಲ. ಹೀಗಾಗಿ ಕಾಮಗಾರಿಗೆ ಸಂಬಂಧಪಟ್ಟವರು ಹಾಗೂ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧವೂ ಕ್ರಮ ಆಗಬೇಕು. – ಗುರುರಾಜ್ ಗಂಟಿಹೊಳೆ, ಶಾಸಕರು ಬೈಂದೂರು

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d