ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಿಎಸ್ಇಇಟಿ – ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ಈ ಪರೀಕ್ಷೆಯಲ್ಲಿ ಸಾಧನೆ ಮೆರೆದ ಜನತಾ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ವಿಶ್ಮಿತಾ ಹಾಗೂ ಧೀರಜ್ ಶೇಟ್ ಸಾಧನೆ ಮೆರೆದು ಸಿಎಸ್ ಎಕ್ಸಿಕ್ಯೂಟಿವ್ ಪ್ರೋಗ್ರಾಮ್ಗೆ ಅರ್ಹತೆ ಪಡೆದಿದ್ದಾರೆ.
ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡಲಾಗುತ್ತಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.