Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರಿನಲ್ಲಿ ಹಿರಿಯ ಭಜನಾ ಹಾಡುಗಾರರಿಗೆ ಸನ್ಮಾನ
    ಊರ್ಮನೆ ಸಮಾಚಾರ

    ಬೈಂದೂರಿನಲ್ಲಿ ಹಿರಿಯ ಭಜನಾ ಹಾಡುಗಾರರಿಗೆ ಸನ್ಮಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಇಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಬೈಂದೂರು ತಾಲೂಕು ವತಿಯಿಂದ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ತಾಲೂಕಿನ ಹಿರಿಯ ಭಜನಾ ಹಾಡುಗಾರರಿಗೆ ಗೌರವಾರ್ಪಣೆ ಮತ್ತು ಗೋಳಿಹೊಳೆ ವಲಯದ ಭಜನೋತ್ಸವ ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮೈಯಾಡಿಯಲ್ಲಿ ಹಮ್ಮಿಕೊಳ್ಳಲಾಯಿತು.

    Click Here

    Call us

    Click Here

    ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ದುಗ್ಗೇಗೌಡ ಅವರು ನೆರವೇರಿಸಿ, ಪ್ರತಿಫಲ ಅಪೇಕ್ಷೆ ಇಲ್ಲದೆ ನಡೆಸುವ ಎಲ್ಲಾ ಸೇವೆಯಿಂದ ಭಗವಂತನ ಅನುಗ್ರಹಕ್ಕೆ ಪ್ರಾಪ್ತರಾಗುತ್ತೇವೆ. ಕಲಿಯುಗದಲ್ಲಿ ಭಜನೆಯಿಂದ ಮಾತ್ರ ದೇವರ ಒಲಿಸಿಕೊಳ್ಳಬಹುದು ಮತ್ತು ಹಿರಿಯ ಭಜನ ಕಲಾವಿದರು ಭಜನೆಯನ್ನು ಶ್ರೇಷ್ಠತೆಯ ಕಡೆಗೆಕೊಂಡು ಹೋಗುವ ಕೆಲಸ ಮಾಡಿದ್ದಾರೆ. ಇನ್ನು ಮುಂದಕ್ಕೆ ಇಂದಿನ ಯುವ ಪೀಳಿಗೆ ಭಜನೆಯನ್ನು ಉಳಿಸಿ ಬೆಳೆಸಿ ಕೊಂಡು ಹೋಗುವ ಕಡೆಗೆ ಹಿರಿಯ ಭಜನಾ ಕಲಾವಿದರು ತಮ್ಮ ಸೇವೆಯನ್ನು ಮಡಿಪಾಗಿಡಬೇಕು ಎಂದು ಕಾರ್ಯಕ್ರಮದಲ್ಲಿ ಮಾತನಾಡಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಹಿರಿಯರ ಜನಜಾಗೃತಿ ವೇದಿಕೆ ಇದರ ಸ್ಥಾಪಕಾಧ್ಯಕ್ಷರು  ಬಿ. ಅಪ್ಪಣ್ಣ ಹೆಗ್ಡೆ ಅವರು ವಹಿಸಿ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಶಕ್ತಿ ಭಜನೆಗೆ ಇದೆ. ಹಿರಿಯ ನಾಗರಿಕರ ದಿನಾಚರಣೆಯಂದು ಹಿರಿಯ ಭಜನಾ ಹಾಡುಗಾರರಿಗೆ ಗೌರವಾರ್ಪಣೆ ಮಾಡಿರುವುದು ಶ್ಲಾಘನೀಯವಾದ ಕೆಲಸ ಆಗಿದೆ ಎಂದು ತಿಳಿಸಿದರು.

    ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಅನ್ನಛತ್ರದ ವ್ಯವಸ್ಥಾಪಕರಾದ ಸುಬ್ರಹ್ಮಣ್ಯ ಪ್ರಸಾದ್ ಅವರು ಭಜನೆ ಮತ್ತು ದೇವರ ನಾಮ ಸಂಕೀರ್ತನೆ ಮಾಡುವುದರಿಂದ ನಮ್ಮ ಸುತ್ತಲಿನ ವಾತಾವರಣದಲ್ಲಿ ಸಕಾರಾತ್ಮಕ ಶಕ್ತಿಯ ಸಂಚಲನವಾಗಿ ಪರಿಸರ, ವಾತಾವರಣ ಶುದ್ಧಗೊಳ್ಳುತ್ತದೆ. ನಮ್ಮಿಂದ ದೇವರಿಗೆ ನೀಡುವ ಸಂಪತ್ತು ಇದ್ದರೆ ಅದು ಭಜನೆ. ಇಂತಹ ಶ್ರೇಷ್ಠ ಕಾರ್ಯ ಇಂದು  ಬೈಂದೂರಿನಲ್ಲಿ ನಡೆದಿದೆ.

    ಬೈಂದೂರು ತಾಲೂಕಿನ 135 ಹಿರಿಯ ಭಜನ ಹಾಡುಗಾರರನ್ನು ಗುರುತಿಸಿ ಗೌರವಿಸಿರುವುದು ಹಿರಿಯ ನಾಗರಿಕರ ದಿನದಂದು ಹಿರಿಯರಿಗೆ ನೀಡುವ ಶ್ರೇಷ್ಠ ಗೌರವವಾಗಿದೆ. ಇದು ಬೈಂದೂರಿನ ಭಜನಾ ಪರಿಷತ್ ವತಿಯಿಂದ ನಡೆದಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಭಜನಾ  ಪರಿಷತ್ತಿನ ಸೇವೆಯನ್ನು ಶ್ಲಾಘಿಸಿ ಮತಾಡಿದರು.

    Click here

    Click here

    Click here

    Call us

    Call us

    ಮುಖ್ಯ ಅತಿಥಿಯಾಗಿ ಆಗಮಿಸಿದ ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಯಡ್ತರೆ ಇದರ ಅಧ್ಯಕ್ಷರು ಟಿ. ನಾರಾಯಣ ಹೆಗಡೆ, ಹನುಮಂತ ನಿವೃತ್ತ ಮುಖ್ಯ ಶಿಕ್ಷಕರು ಮೈಯಾಡಿ, ಶೇಷಮ್ಮ ಶೆಡ್ತಿ, ರಾಜು ಎಸ್. ಮುಖ್ಯ ಶಿಕ್ಷಕರು ಎಸ್‌ಡಿಎಮ್‌ ಹಿರಿಯ ಪ್ರಾಥಮಿಕ ಶಾಲೆ ಮಯ್ಯಾಡಿ, ಎಸ್‌ಸಿಡಿಸಿಸಿ ಬ್ಯಾಂಕ್  ಮಂಗಳೂರು ಇದರ ಮೇಲ್ವಿಚಾರಕರು ಶಿವರಾಮ್ ಪೂಜಾರಿ, ಉತ್ತರ ಕನ್ನಡ ಜಿಲ್ಲಾ ನಿರ್ದೇಶಕರು  ಮಹೇಶ್ ಎಂ. ಡಿ, ಬೈಂದೂರು ತಾಲೂಕು ಭಜನಾ ಪರಿಷತ್ ಗೌರವಾಧ್ಯಕ್ಷರು ರಘುರಾಮ ಕೆ. ಪೂಜಾರಿ, ಬೈಂದೂರು ತಾಲೂಕು ಭಜನಾ ಪರಿಷತ್ ಅಧ್ಯಕ್ಷರು ಶ್ರೀ ಕೃಷ್ಣ ಪೂಜಾರಿ, ಬೈಂದೂರು ತಾಲೂಕು ಕೇಂದ್ರ ಸಮಿತಿ ಅಧ್ಯಕ್ಷರು ವಾಸು ಮೇಸ್ತ, ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರು ಸುಧಾಕರ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು ಶಿವರಾಜ್ ಪೂಜಾರಿ, ಶೇಖರ್ ಶೆಟ್ಟಿ ಗೋಳಿಹೊಳೆ ವಲಯದ ಜನಜಾಗೃತಿ ವೇದಿಕೆ ಸದಸ್ಯರು, ಬೈಂದೂರು  ತಾಲೂಕು ಭಜನಾ ಪರಿಷತ್ ಉಪಾಧ್ಯಕ್ಷರು  ಮಂಜು ಪೂಜಾರಿ ಕಾರ್ಯಕ್ರಮದ ಕುರಿತು ಶುಭ ಹಾರೈಸಿದರು.

    ಅಪ್ಪಣ್ಣ ಹೆಗ್ಡೆ, ನಾರಾಯಣ ಹೆಗ್ಡೆ, ಶೇಖರ್ ಶೆಟ್ಟಿ ಅವರ ನಿರಂತರ ಸೇವೆಯನ್ನು ಗುರುತಿಸಿ ಬೈಂದೂರು ತಾಲೂಕು ಭಜನಾ ಪರಿಷತ್ ವತಿಯಿಂದ ಅಭಿನಂದಿಸಲಾಯಿತು.

    ಮುಂಜಾನೆ 8  ಗಂಟೆಯಿಂದ 10 ಗಂಟೆವರೆಗೆ ಗೋಳಿಹೊಳೆ ವಲಯದ ಭಜನಾ ಮಂಡಳಿಗಳಿಂದ ಭಜನಾ ಸೇವೆ ಯಶಸ್ವಿಯಾಗಿ ನೆರವೇರಿತು. ನಂತರ ಭಜನಾ ಮಂಗಳೋತ್ಸವ ಪ್ರಾರಂಭವಾಗಿ ಭಜನಾ ದೀಪ ವಿಸರ್ಜನೆಯೊಂದಿಗೆ ಭಜನಾ ಕಾರ್ಯಕ್ರಮವನ್ನು ಸಂಪನ್ನಗೊಳಿಸಲಾಯಿತು.

    ಕಾರ್ಯಕ್ರಮದಲ್ಲಿ ಬೈಂದೂರು ತಾಲೂಕಿನ ಎಲ್ಲಾ ವಲಯಗಳ 135  ಮಂದಿ ಹಿರಿಯ ಭಜನ ಸಾಧಕರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಗೋಳಿಹೊಳೆ ವಲಯದ 18 ಹೊಸ ಭಜನಾ ಮಂಡಳಿಗಳಿಗಳನ್ನು ಭಜನಾ ಪರಿಷತ್ತಿಗೆ ಸೇರ್ಪಡೆಗೊಳಿಸಿ ತಾಳವನ್ನು ನೀಡಿ ಅಭಿನಂದಿಸಲಾಯಿತು

    ಬೈಂದೂರು ತಾಲೂಕಿನ ಭಜನಾ ಪರಿಷತ್ ಸಂಯೋಜಕರುಗಳು, ಬೈಂದೂರು ತಾಲೂಕಿನ ಪ್ರಗತಿ ಭಂದು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷರುಗಳು ಮತ್ತು  ಪದಾಧಿಕಾರಿಗಳು ಶೌರ್ಯ ಶ್ರೀಪತ್ತು ನಿರ್ವಹಣಾ ಘಟಕದ ಸದಸ್ಯರು, ಭಜನಾ ಮಂಡಳಿಯ ಭಜಕ ವ್ರಂದದವರು, ಹಿರಿಯ ನಾಗರಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಬೈಂದೂರು ತಾಲೂಕು ಯೋಜನಾಧಿಕಾರಿ ಕೆ. ವಿನಾಯಕ್ ಪೈ ಎಲ್ಲರನ್ನು ಸ್ವಾಗತಿಸಿದರು. ಪಡುಕೋಣೆ ವಲಯದ ಬಜನಾ ಪರಿಷತ್ ಸಂಯೋಜಕ ಮಂಜುನಾಥ್ ಧನ್ಯವಾದ ನೀಡಿದರು. ಗೋಳಿಹೊಳೆ ವಲಯದ ಮೇಲ್ವಿಚಾರಕಿ ಸಂಗೀತ ಕಾರ್ಯಕ್ರಮ ನಿರ್ವಹಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.