Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನತಾ ಪದವಿಪೂರ್ವ ಕಾಲೇಜಿನಲ್ಲಿ ಜನತಾ ಪ್ರೇರಣಾ 2024 – ಮಾಹಿತಿ ಕಾರ್ಯಾಗಾರ
    ಊರ್ಮನೆ ಸಮಾಚಾರ

    ಜನತಾ ಪದವಿಪೂರ್ವ ಕಾಲೇಜಿನಲ್ಲಿ ಜನತಾ ಪ್ರೇರಣಾ 2024 – ಮಾಹಿತಿ ಕಾರ್ಯಾಗಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು ಬ್ಯಾಂಕಿಂಗ್, ಅಗ್ನಿವೀರ್, ಬಾಲ ನ್ಯಾಯ ಕಾಯ್ದೆಗಳು ಹಾಗೂ ನಾಟಾ  ವಿಷಯದ ಕುರಿತಾಗಿ ಮಾಹಿತಿ ಕಾರ್ಯಾಗಾರ ಹೆಮ್ಮಾಡಿಯ ಜಯಶ್ರೀ ಸಭಾ ಭವನದಲ್ಲಿ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಬ್ಯಾಂಕ್ ಶಿರೂರಿನ  ವ್ಯವಸ್ಥಾಪಕರಾದ  ರಾಧೇಶ್ ಕಾಮತ್  ಅವರು ಸ್ಪರ್ಧಾತ್ಮಕ ಯುಗದಲ್ಲಿ ಇಂತಹ ಮಾಹಿತಿ ಕಾರ್ಯಾಗಾರಗಳು ಉಪಯುಕ್ತವಾಗಿವೆ, ಸ್ಪರ್ಧಾತ್ಮಕತೆಗೆ ಅನುಗುಣವಾಗಿ ಹೆಜ್ಜೆ ಹಾಕಿ ಎಂದರು.

    ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಮಾತನಾಡಿ ಪದವಿಪೂರ್ವ ಶಿಕ್ಷಣ ಪರಿಪೂರ್ಣವಾಗಬೇಕಾದರೆ ಜ್ಞಾನಾತ್ಮಕವಾದ ಎಲ್ಲಾ ವಿಚಾರಗಳನ್ನು ಸ್ವೀಕರಿಸಿ ಅದರಂತೆ ಕಾಲೇಜಿನಲ್ಲಿ ವಿನೂತನ ಯೋಜನೆಗಳನ್ನು ಆಯೋಜಿಸಿದ್ದೇವೆ ಅವುಗಳ ಬಳಕೆ ನಿಮ್ಮದಾಗಲಿ ಎಂದರು‌.

    ಬ್ಯಾಂಕಿಂಗ್  ಕುರಿತು ಕರ್ನಾಟಕ ಬ್ಯಾಂಕ್ ಕುಂದಾಪುರ ಶಾಖೆಯ ಅಧಿಕಾರಿ ಉದಯ ಹೆಗ್ಡೆ ಅವರು ಮಾಹಿತಿಯ ನೀಡಿ ಬ್ಯಾಂಕಿಂಗ್ ವ್ಯವಹಾರದೊಂದಿಗೆ ಬ್ಯಾಂಕಿಂಗ್ ಉದ್ಯೋಗಕ್ಕೆ ಸಂಬಂಧಿಸಿದ  ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು ಮಾಹಿತಿ ನೀಡಿದರು.

    ಅಗ್ನಿವೀರ್ ಕುರಿತು ಮಾಹಿತಿ ನೀಡಿದ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಎಮ್.ಕೆ. ಶೆಟ್ಟಿ ಅವರು ಮಾತನಾಡಿ ಅಗ್ನಿವೀರ್ ಕುರಿತು ಸಂಪೂರ್ಣವಾಗಿ ಮಾಹಿತಿ ನೀಡಿದರು.

    Click here

    Click here

    Click here

    Click Here

    Call us

    Call us

    ಬಾಲ ನ್ಯಾಯ ಕಾಯ್ದೆಗಳ ಕುರಿತು ಮಾಹಿತಿ ನೀಡಿದ ಮಕ್ಕಳ ರಕ್ಷಣಾ ಘಟಕ ಉಡುಪಿಯ ರಕ್ಷಣಾಧಿಕಾರಿಯಾಗಿರುವ ಮಹೇಶ ದೇವಾಡಿಗ ಬಾಲ್ಯ ವಿವಾಹ, ಪೋಕ್ಸೋ ಕಾಯ್ದೆಗಳ ಕುರಿತಾಗಿ ಸಂಪೂರ್ಣವಾಗಿ ಮಾಹಿತಿ ನೀಡಿದರು.

    ನಾಟಾ ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು ಸಹ-ಸಂಸ್ಥಾಪಕರು ಮತ್ತು ಆಪರೇಷನಲ್ ಹೆಡ್ ಡಿಸೈನ್ ವೆನ್ಯೂ ಚಂದ್ರಶೇಖರ್ ಬೆಂಗಳೂರು ನಾಟಾ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಕ್ರಮಗಳ ಕುರಿತು ಮಾಹಿತಿ ನೀಡಿದರು.

    ಕಾಲೇಜಿನ‌ ಉಪ-ಪ್ರಾಂಶುಪಾಲರಾದ ರಮೇಶ ಪೂಜಾರಿ, ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

    ಉಪನ್ಯಾಸಕ ಉದಯ ನಾಯ್ಕ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026
    Leave A Reply Cancel Reply

    1 × 3 =

    Call us

    Click Here

    Call us

    Call us

    Call us
    Highest Viewed Recently
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.