ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿಎ ಫೌಂಡೇಶನ್ ಫಲಿತಾಂಶವು 29 ಜುಲೈ 2024 ರಂದು ಪ್ರಕಟಗೊಂಡಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ.
ವಿದ್ಯಾರ್ಥಿಗಳಾದ ಕೆ. ವಿ ಮೌರ್ಯ ( 273) , ಭಕ್ತಿ ಕಾಮತ್ (253) , ಸುಪ್ರೀತ್ ಎಸ್. ಹೆಗ್ಡೆ (248) , ವಿನಯ್ ಪ್ರಶಾಂತ ಹಿರೇಮಠ (238) , ಸಾನ್ವಿ ರಾವ್ (223) ವಿದ್ಯಾರ್ಥಿಗಳು ಅಂಕಗಳನ್ನು ಗಳಿಸುವುದರ ಮೂಲಕ ಅರ್ಹತೆಯನ್ನು ಗಳಿಸಿಕೊಂಡಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ವೃಂದದವರು, ಪರೀಕ್ಷಾ ಸಂಯೋಜಕರಾದ ರಾಘವೇಂದ್ರ ಬಿ. ರಾವ್ ಅವರು ಶ್ಲಾಘಿಸಿದ್ದಾರೆ.