ಗಂಗೊಳ್ಳಿ: ಗಣಪತಿ ಖಾರ್ವಿ ಬಸ್ರೂರು ಅವರಿಗೆ ಸನ್ಮಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ರೋಟರಿ ಕ್ಲಬ್ ಗಂಗೊಳ್ಳಿ ಇದರ ವತಿಯಿಂದ ಕಾರ್ಗಿಲ್ ವಿಜಯೋತ್ಸವದ ಪ್ರಯುಕ್ತ ಗಂಗೊಳ್ಳಿಯ ಸ. ವಿ. ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇಶದ ಗಡಿ ಭದ್ರತಾ ಪಡೆಯ ನಿವೃತ್ತ ಯೋಧ ಗಣಪತಿ ಖಾರ್ವಿ ಬಸ್ರೂರು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

Call us

Click Here

ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ತಾಂಡೇಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಗಿಲ್‌ನಲ್ಲಿ ಹುತಾತ್ಮರಾದ ಯೋಧರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ದೀಪ ಬೆಳಗಿ ಶ್ರದ್ಧಾಂಜಲಿ ಅರ್ಪಿಸಲಾಯಿತು.

ನಿಕಟಪೂರ್ವ ಅಧ್ಯಕ್ಷ ಎಂ. ನಾಗೇಂದ್ರ ಪೈ, ಮಾಜಿ ಅಧ್ಯಕ್ಷರಾದ ಉಮೇಶ್ ಎಲ್. ಮೇಸ್ತ, ವಾಸುದೇವ ಶೇರುಗಾರ್, ಜನಾರ್ದನ ಪೂಜಾರಿ ಪೆರಾಜೆ, ದಯಾನಂದ ಗಾಣಿಗ, ಪ್ರದೀಪ ಡಿ. ಕೆ., ಬಿ. ಲಕ್ಷ್ಮೀಕಾಂತ ಮಡಿವಾಳ, ಸುಗುಣಾ ಆರ್. ಕೆ., ರೋಟರಿ ಪದಾಧಿಕಾರಿಗಳು ಹಾಗೂ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

ಮಾಜಿ ಅಧ್ಯಕ್ಷ ಕೆ. ರಾಮನಾಥ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಮಾಲಾಶ್ರೀ ಖಾರ್ವಿ ವಂದಿಸಿದರು.

Leave a Reply