ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮವಹಿಸಿ: ಜಿಲ್ಲಾಧಿಕಾರಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಜಿಲ್ಲೆಯ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ಪ್ರಸ್ತುತ ಲಭ್ಯವಿರುವ ನಿವೇಶನಗಳ ಹಕ್ಕುಪತ್ರವನ್ನು ವಿತರಿಸಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

Call us

Click Here

ಅವರು ಅಂದು ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ನಿವೇಶನ ಹಂಚಿಕೆ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸವಿರುವ ವಸತಿ ಹಾಗೂ ನಿವೇಶನ ರಹಿತ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಿ, ಅರ್ಹರನ್ನು ಗುರುತಿಸಿ, ಈಗಾಗಲೇ ಲಭ್ಯವಿರುವ ನಿವೇಶನಗಳ ಹಕ್ಕುಪತ್ರಗಳನ್ನು ವಿತರಣೆ ಮಾಡಬೇಕು ಎಂದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿವಿಧ ಗ್ರಾಮ ಪಂಚಾಯತ್‌ನಲ್ಲಿ ನಿವೇಶನ ಕೋರಿ ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಬೇಡಿಕೆಯಿರುವ ಗ್ರಾಮಗಳಲ್ಲಿ ನಿವೇಶನ ವಿತರಿಸಲು ಅಗತ್ಯವಿರುವ ಜಮೀನನ್ನು ಗುರುತಿಸುವ ಕಾರ್ಯವನ್ನು ತಹಶೀಲ್ದಾರರುಗಳು ಮತ್ತು ಕಾರ್ಯನಿರ್ವಹಣಾಧಿಕಾರಿಗಳು ಸಮನ್ವಯದೊಂದಿಗೆ ಮಾಡಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ನಿವೇಶನ ರಹಿತರಿಗೆ ಭೂಮಿ ನೀಡಲು ಕಾಯ್ದಿರಿಸುವ ಜಮೀನಿನ ಸರ್ವೇ ಕಾರ್ಯಗಳನ್ನು ಆದಷ್ಟು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು. ಅವುಗಳನ್ನು ನಿವೇಶನವಾಗಿ ಪರಿವರ್ತಿಸುವ ಕಾರ್ಯಗಳನ್ನು ಅಧಿಕಾರಿಗಳು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದರು.

Click here

Click here

Click here

Click Here

Call us

Call us

ನಿವೇಶನ ಬೇಡಿಕೆಯಿರುವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭೂಮಿ ಲಭ್ಯವಿಲ್ಲದೇ ಇದ್ದಲ್ಲಿ, ಸಮೀಪದ ಇತರೆ ನೆರೆಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಭೂಮಿಯನ್ನು ಗುರುತಿಸಿ, ನಿವೇಶನ ಹಂಚಿಕೆಗೆ ಕಾಯ್ದಿರಿಸಬೇಕು ಎಂದರು.

ಕೆಲವು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿವೇಶನ ರಹಿತ ಫಲಾನುಭವಿಗಳನ್ನು ಗುರುತಿಸದೇ ಇದ್ದಲ್ಲಿ, ಅಂತಹ ಗ್ರಾಮ ಪಂಚಾಯಿತಿಯು ಒಂದು ತಿಂಗಳ ಒಳಗಾಗಿ ಅರ್ಹ ಫಲಾನುಭವಿಗಳನ್ನು ನಿಯಮಾನುಸಾರ ಆಯ್ಕೆ ಮಾಡಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಯೋಜನಾ ನಿರ್ದೇಶಕ ಪ್ರಶಾಂತ್ ರಾವ್, ಎಲ್ಲಾ ತಾಲೂಕಿನ ತಹಶೀಲ್ದಾರರುಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply