Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ನ್ಯಾಯಾಲಯ ಸ್ಥಳಾಂತರಿಸುವ ಹುನ್ನಾರ ಜನವಿರೋಧ ನಡೆ: ತಾಲೂಕು ವಕೀಲಕರ ಸಂಘ ಆಕ್ಷೇಪ
    ಊರ್ಮನೆ ಸಮಾಚಾರ

    ಬೈಂದೂರು ನ್ಯಾಯಾಲಯ ಸ್ಥಳಾಂತರಿಸುವ ಹುನ್ನಾರ ಜನವಿರೋಧ ನಡೆ: ತಾಲೂಕು ವಕೀಲಕರ ಸಂಘ ಆಕ್ಷೇಪ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಬೈಂದೂರು ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಬೈಂದೂರು ಜನತೆಯ ದಶಕಗಳ ಹೋರಾಟ ಫಲವಾಗಿದ್ದು, ಇದರ ಹಿಂದೆ ಹಲವರ ಶ್ರಮವಿದೆ. ಯಾರ ವೈಯಕ್ತಿಕ ಹಿತ್ತಾಸಕ್ತಿ ಇದರಲ್ಲಿಲ್ಲ. ಬೈಂದೂರು ತಾಲೂಕಾಗಿ ಘೋಷಣೆಗೊಂಡಾಗ ತಾಲೂಕಿನಲ್ಲಿ ಹೆಚ್ಚಿನ ಪ್ರಕರಣಗಳಿರುವುದನ್ನು ಗಮನಿಸಿ ತಾಲೂಕಿಗೊಂದು ನ್ಯಾಯಾಲಯ ಸ್ಥಾಪಿಸುವ ಬಗ್ಗೆ ಚರ್ಚೆ ಆರಂಭಗೊಂಡು, ಅಂತಿಮವಾಗಿ ನ್ಯಾಯಾಲಯ ಉದ್ಘಾಟನೆಗೊಂಡಿತ್ತು. ಈಗ ಬೈಂದೂರು ನ್ಯಾಯಾಲಯದಲ್ಲಿ ಮೂರು ಸಾವಿರಕ್ಕಿಂತಲೂ ಹೆಚ್ಚಿನ ವಿವಿಧ ಪ್ರಕರಣಗಳಿದೆ. ಬೈಂದೂರಿಗೆ ಇನ್ನೂ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಹಾಗೂ ಹಿರಿಯ ಶ್ರೇಣಿ ನ್ಯಾಯಾಲಯದ ಅವಶ್ಯಕತೆ ಇದೆ ಎಂದು ಬೈಂರೂರು ತಾಲೂಕು ಬಾರ್ ಅಸೋಸಿಯೇಶನ್ ಹೇಳಿದೆ.

    Click Here

    Call us

    Click Here

    ಕುಂದಾಪುರದ ವಕೀಲರಾದ ಕೆ. ಸಿ. ಶೆಟ್ಟಿ ಇವರು ತಮ್ಮ ದೂರಿನಲ್ಲಿ ಹೇಳಿಕೊಂಡಂತೆ ಬೈಂದೂರು ನ್ಯಾಯಾಲಯದ ಸ್ಥಿತಿ ಇರುವುದಿಲ್ಲ. ಬೈಂದೂರಿನಲ್ಲಿ ನ್ಯಾಯಾಲಯ ಪ್ರಾರಂಭಿಸುವ ಮೊದಲು ಕರ್ನಾಟಕದ ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಪಂಚಾಯತ್ ಕಟ್ಟಡವನ್ನು ನ್ಯಾಯಾಲಯದ ಕಾರ್ಯಕಲಾಪಗಳಿಗೆ ಅನುಕೂಲವಾಗುವಂತೆ ಮಾರ್ಪಡಿಸಿ ಪ್ರಾರಂಭಿಸಲಾಗಿತ್ತು. ಬೈಂದೂರು ನ್ಯಾಯಾಲಯವನ್ನು ನಡೆಸಲು ಯಾವುದೇ ಪ್ರಾಥಮಿಕ ಅವಶ್ಯಕತೆಗಳ ಕೊರತೆ ಇಲ್ಲ. ಬೈಂದೂರು ನ್ಯಾಯಾಲಯವನ್ನು ಕುಂದಾಪುರಕ್ಕೆ ವರ್ಗಾಯಿಸುವಂತೆ ಉಚ್ಚ ನ್ಯಾಯಾಲಕ್ಕೆ ಕೇಳಿಕೊಂಡಿರುವುದು ಬೈಂದೂರಿನ ಜನತೆಗೆ ಮಾಡುವ ಅನ್ಯಾಯವಾಗಿದೆ ಎಂದಿದೆ.

    ನ್ಯಾಯಾಲಯದಲ್ಲಿ ಕೊರತೆಗಳಿದ್ದರೆ ಸರ್ಕಾರ ಮತ್ತು ಜಿಲ್ಲಾ ಮತ್ತು ಉಚ್ಚ ನ್ಯಾಯಾಲಯವು ಪರಿಹರಿಸುವ ವಿಷಯವೇ ಹೊರತು ನ್ಯಾಯಾಲಯವನ್ನು ದೂರದ ಕುಂದಾಪುರಕ್ಕೆ ವರ್ಗಾಯಿಸುವುದು ಪರಿಹಾರವಲ್ಲ. ಬೈಂದೂರು ನ್ಯಾಯಾಲಯನ್ನು ಕುಂದಾಪುರಕ್ಕೆ ವರ್ಗಾಯಿಸಲು ಬೈಂದೂರು ವಕೀಲರ ಸಂಘದ ತೀವ್ರ ಆಕ್ಷೇಪ ಇರುತ್ತದೆ. ಬೈಂದೂರು ವಕೀಲರ ಸಂಘವು ಕುಂದಾಪುರ ವಕೀಲ ಕೆ. ಸಿ. ಶೆಟ್ಟಿ ಇವರ ಬೈಂದೂರು ವಿರೋಧಿ ನಡೆಯನ್ನು ಖಂಡಿಸತ್ತದೆ. ಬೈಂದೂರು ವಕೀಲರ ಸಂಘವು ಸದಾ ಬೈಂದೂರು ಜನತೆಯೊಂದಿಗೆ ಬೈಂದೂರು ನ್ಯಾಯಾಲಯದ ಉಳುವಿಕೆಗೆ ಮುಂದಿನ ದಿನಗಳಲ್ಲಿ ಹೋರಾಟಕ್ಕೆ ಸಿದ್ದವಿದೆ. ಬೈಂದೂರು ನ್ಯಾಯಾಲಯವು ಈಗ ಬಾಡಿಗೆ ಕಟ್ಟಡದಲ್ಲಿದ್ದು ಬೈಂದೂರಿನಲ್ಲಿ ನ್ಯಾಯಾಲಯಕ್ಕೆ ಕಾಯ್ದಿರಿಸಿದ ಸ್ಥಳದಲ್ಲಿ ಶೀಘ್ರದಲ್ಲಿ ಕಟ್ಟಡ ನಿರ್ಮಾಣ ಮಾಡುವಂತೆ ಬೈಂದೂರುವಕೀಲರ ಸಂಘವು ಸರ್ಕಾರವನ್ನು ಈ ಸಂದರ್ಭದಲ್ಲಿ ಒತ್ತಾಯ ಮಾಡುತ್ತದೆ. ಜಿಲ್ಲಾ ಮತ್ತು ಉಚ್ಚ ನ್ಯಾಯಾಲಯವು ಕುಂದಾಪುರದ ಕೆಲವು ವ್ಯಕ್ತಿಗಳ ವೈಯಕ್ತಿಕ ಹಿತ್ತಾಸಕಿಯನ್ನು ಪ್ರೋತ್ಸಾಹಿಸದೆ ನ್ಯಾಯಾಲಯನ್ನು ಬೈಂದೂರಿನಲ್ಲಿ ಉಳಿಸಿ ಬೈಂದೂರು ಜನತೆಗೆ ಅನ್ಯಾಯವಾಗದಂತೆ ಮುಂದಿನ ಕ್ರಮ ಕೈಗೊಳ್ಳುವಂತೆ ಬೈಂದೂರು ವಕೀಲರ ಸಂಘವು ಈ ಮೂಲಕ ಮನವಿ ಮಾಡಿಕೊಳ್ಳತ್ತದೆ ಎಂದು ಮೋಬಿ ಅವರು ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ

    06/07/2026

    ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ

    06/07/2026

    ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ

    06/07/2026
    Leave A Reply Cancel Reply

    19 + 19 =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.