Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಜ್ಯ ಸರಕಾರದಿಂದ ಶಾಸಕರ ಹಕ್ಕುಗಳನ್ನು ಮೊಟಕುಗಳಿಸುತ್ತಿರುವ ಆರೋಪ. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರಿಂದ ಧರಣಿ
    Uncategorized

    ರಾಜ್ಯ ಸರಕಾರದಿಂದ ಶಾಸಕರ ಹಕ್ಕುಗಳನ್ನು ಮೊಟಕುಗಳಿಸುತ್ತಿರುವ ಆರೋಪ. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರಿಂದ ಧರಣಿ

    Updated:12/08/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತ ಶಾಸಕರ ಸಾಂವಿಧಾನಿಕ ಹಕ್ಕುಗಳನ್ನು ಮೊಟಕುಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಬೈಂದೂರು ಆಡಳಿತ ಸೌಧದ ಎದುರು ಸೋಮವಾರ ಅಹೋರಾತ್ರಿ ಪ್ರತಿಭಟನೆ ಕೈಗೊಂಡಿದ್ದಾರೆ.

    Click Here

    Call us

    Click Here

    ಈ ವೇಳೆ ಅವರು ಮಾತನಾಡಿ, ಜನರು ಕರೆದಲ್ಲಿಗೆ ತೆರಳಿ ಅಹವಾಲುಗಳನ್ನು ಸ್ವೀಕರಿಸುತ್ತೇನೆ. ಅವರ ಅನುಕೂಲಕ್ಕಾಗಿಯೇ ಕ್ಷೇತ್ರದ ನಾಲ್ಕು ಭಾಗಗಳಲ್ಲಿ ಕಛೇರಿ ತೆರೆದು ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುತ್ತಿದೆ. ಅಧಿಕಾರಿಗಳಿಗೂ ಕೂಡ ಜನರ ಸಮಸ್ಯೆಗೆ ಸ್ಪಂದಿಸುವ ಜವಾಬ್ದಾರಿ ಇದ್ದು, ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕಾಗಿ ನಾನು ಕರೆದಲ್ಲಿಗೆ ಬರುವುದು ಅವರ ಕರ್ತವ್ಯವಾಗಿದೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಅಧಿಕಾರದಲ್ಲಿ ಇರುವುದನ್ನು ಬಳಸಿಕೊಂಡು ಸ್ಥಳೀಯ ಕಾಂಗ್ರೆಸ್ ನಾಯಕರು ಅಧಿಕಾರಿಗಳ ದಾರಿ ತಪ್ಪಿಸುತ್ತಿದ್ದು, ಶಾಸಕರು ಆಯೋಜಿಸುವ ಸಭೆಗಳಿಗೆ ತೆರಳದಂತೆ ಪರೋಕ್ಷವಾಗಿ ಒತ್ತಡ ಹಾಕುತ್ತಲೇ ಬಂದಿದ್ದಾರೆ ಎಂದು ಆರೋಪಿಸಿದರು.

    ಹಿಂದಿನ ಸರಕಾರದ ಅವಧಿಯಲ್ಲಿ ಬೈಂದೂರು ಕ್ಷೇತ್ರಕ್ಕೆ ರೂ. 3 ಸಾವಿರ ಕೋಟಿ ಅನುದಾನ ಬಂದಿದ್ದು, ಈ ಅವಧಿಯಲ್ಲಿ ಒಂದು ವರ್ಷ ಕಳೆದರೂ ಯಾವುದೇ ಅನುದಾನ ಬಂದಿಲ್ಲ. ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾರ್ವಜನಿಕರ ಕೆಲಸಗಳನ್ನು ಮಾಡಬೇಕಾದ ಅನಿವಾರ್ಯತೆ ಇದ್ದು, ಸ್ಥಳೀಯ ಕಾಂಗ್ರೆಸ್ ನಾಯಕರು ಇದಕ್ಕೆ ಹಸ್ತಕ್ಷೇಪ ಮಾಡುತ್ತಿದ್ದಾರೆ. ಶಾಸಕರ ಹಕ್ಕನ್ನು ಮೊಟಕುಗಳಿಸುವ ಪ್ರಯತ್ನಕ್ಕೆ ಕೈಹಾಕಿದರೆ ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು.

    ಬೈಂದೂರು ಪಟ್ಟಣ ಪಂಚಾಯತಿ ವ್ಯಾಪ್ತಿಯ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಲು ಶಾಸಕರು ಉಪ್ಪುಂದದಲ್ಲಿರುವ ತಮ್ಮ ಖಾಸಗಿ ಕಛೇರಿ ʼಕಾರ್ಯಕರ್ತʼದಲ್ಲಿ ಅಧಿಕಾರಿಗಳ ಸಭೆ ಕರೆದಿದ್ದರು. ಆ ಸಭೆಗೆ ಅಧಿಕಾರಿಗಳು ಭಾಗವಹಿಸದಂತೆ ಜಿಲ್ಲಾಡಳಿತ ಮೌಖಿಕ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಭೆ ರದ್ದುಗೊಂಡಿತ್ತು. ಇದು ಶಾಸಕರ ಹಕ್ಕುಚ್ಯುತಿ ಎಂದು ಆರೋಪಿಸಿ ಬೈಂದೂರಿನ ಆಡಳಿತ ಸೌಧದ ಎದುರು ಅಹೋರಾತ್ರಿ ಧರಣಿ ನಡೆಸಿದ್ದಾರೆ.

    ತಹಶಿಲ್ದಾರರಿಂದ ಮನವೊಲಿಕೆ:
    ಈ ಮಧ್ಯೆ ಪ್ರತಿಭಟನೆ ಕೈಬಿಡುವಂತೆ ಬೈಂದೂರು ತಹಶಿಲ್ದಾರ್ ಪ್ರದೀರ್ ಆರ್. ಅವರು ಶಾಸಕ ಗಂಟಿಹೊಳೆ ಅವರ ಮನವೊಲಿಸುವ ಪ್ರಯತ್ನ ಮಾಡಿದ್ದು, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ಸೂಕ್ತ ಉತ್ತರ ನೀಡುವ ತನಕ ಪ್ರತಿಭಟನೆ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ತಹಶಿಲ್ದಾರ್ ಘಟನೆಯ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವರದಿ ನೀಡಲಾಗುವುದು ಎಂದರು.

    Click here

    Click here

    Click here

    Click Here

    Call us

    Call us

    ಈ ವೇಳೆ ಬಿಜೆಪಿ ಮುಖಂಡರುಗಳಾದ ಸದಾನಂದ ಉಪ್ಪಿನಕುದ್ರು, ಬಿ.ಎಸ್. ಸುರೇಶ್ ಶೆಟ್ಟಿ, ಪುಷ್ಪರಾಜ ಶೆಟ್ಟಿ, ಉಮೇಶ್ ಶೆಟ್ಟಿ ಕಲ್ಗದ್ದೆ, ಶಿವರಾಜ ಪೂಜಾರಿ ಇನ್ನಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026
    Leave A Reply Cancel Reply

    13 − 7 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.