Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಲ್ಲೂರು ದೇವಳದಲ್ಲಿ ಸ್ಥಳಿಯರ ಅವಗಣನೆ, ಖಾಸಗೀಕರಣದ ಆರೋಪ: ಬೃಹತ್ ಪ್ರತಿಭಟನೆ
    ಊರ್ಮನೆ ಸಮಾಚಾರ

    ಕೊಲ್ಲೂರು ದೇವಳದಲ್ಲಿ ಸ್ಥಳಿಯರ ಅವಗಣನೆ, ಖಾಸಗೀಕರಣದ ಆರೋಪ: ಬೃಹತ್ ಪ್ರತಿಭಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಅಂಗಡಿ ಮುಂಗಟ್ಟು ಬಂದ್ ಮಾಡಿದ ಪ್ರತಿಭಟನಾಕಾರರು : ಕ್ಷೇತ್ರಕ್ಕೆ ಬಂದ ಯಾತ್ರಾರ್ಥಿಗಳ ಪರದಾಟ.ಆರೋಪದಲ್ಲಿ ಹುರುಳಿಲ್ಲ ಎಂದ ದೇವಳದ ಆಡಳಿತ ಮಂಡಳಿ.

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ

    ಕೊಲ್ಲೂರು: ಇಲ್ಲಿನ ದೇವಳದ ವಸತಿಗೃಹ ಖಾಸಗೀಕರಣಗೊಳಿಸಿ ಭಕ್ತರಿಂದ ಹೆಚ್ಚಿಗೆ ಹಣ ಸುಲಿಗೆ ಮಾಡುವ ಹುನ್ನಾರ ನಡೆಯುತ್ತಿದೆ. ಪವಿತ್ರ ದೇವಸ್ಥಾನ ಧಾರ್ಮಿಕ ಕ್ಷೇತ್ರವನ್ನಾಗಿ ಉಳಿಸದೇ ಇಲ್ಲಿಯೂ ಲಾಭ-ನಷ್ಟದ ಲೆಕ್ಕ ಹಾಕುತ್ತಿರುವುದು ಸರಿಯಲ್ಲ ಎಂದು ಕೊಲ್ಲೂರು ರಕ್ಷಣಾ ವೇದಿಕೆ ಅಧ್ಯಕ್ಷ ಸಂದೀಪ್ ಹೇಳಿದರು

    ಅವರು ಕೊಲ್ಲೂರು ಹಿತರಕ್ಷಣ ವೇದಿಕೆ ಆಶ್ರಯದಲ್ಲಿ ಕೊಲ್ಲೂರು ದೇವಸ್ಥಾನ ಆಡಳಿತ ಕಚೇರಿ ಎದುರು ನಡೆದ ಬೃಹತ್ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು. ಶ್ರೀ ದೇವಿಯ ಪವಿತ್ರ ತೇಪೋತ್ಸವವು ಕೊಳಚೆ ನೀರಿನಲ್ಲಿ ನಡೆಯುತ್ತಿದೆ. ಒಳಚರಂಡಿ ವ್ಯವಸ್ಥೆಗೆ ಕೇವಲ ಘೋಷಣೆಯಾಗಷ್ಟೇ ಉಳಿದಿದೆ. ಕೊಲ್ಲೂರಿನ ಜನರ ಹಿತ ಕಡೆಗಣಿಸಿ ಕ್ಷೇತ್ರ ವ್ಯಾವಹಾರಿಕರಣಗೊಳಿಸುತ್ತಿರುವುದು ಸರಿಯಲ್ಲ. ದೇವಳದ ಆಡಳಿತ ಮಂಡಳಿ ಹಾಗೂ ಇತರೆ ದೇವಳದ ಹುದ್ದೆಗಳಲ್ಲಿ ಸ್ಥಳೀಯರನ್ನು ಸಂಪೂರ್ಣವಾಗಿ ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದ ಅವರು ದೇವಳದಲ್ಲಿ ದುಡಿಯುವ ನೌಕರರ ಹಿತಾಸಕ್ತಿಯನ್ನು ಅವಗಣಿಸಲಾಗಿದೆ. ಇಲ್ಲಿ ದುಡಿಯುವವರಿಗೆ ಯಾವುದೇ ಭದ್ರತೆ ಇಲ್ಲ. ಯಾರಿಗಾದರೂ ಅವಘಡ ಸಂಭವಿಸಿದರೇ ಅದಕ್ಕೆ ಸಹಾಯ ಮಾಡುವ ಇಚ್ಚಾಶಕ್ತಿಯೂ ಇಲ್ಲದ ಸ್ಥಿತಿಯಲ್ಲಿ ಆಡಳಿತ ಮಂಡಳಿ ಇದೆ ಎಂದರು. ಶೀಘ್ರವಾಗಿ ಒಳಚರಂಡಿ ವ್ಯವಸ್ಥೆಗೆ ಚಾಲನೆ ನೀಡಬೇಕು ಹಾಗೂ ಆಡಳಿತ ಮಂಡಳಿಯಲ್ಲಿ ಸ್ಥಳೀಯರಿಗೇ ಅವಕಾಶ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಹೇಳಿದರು. (ಕುಂದಾಪ್ರ ಡಾಟ್ ಕಾಂ ಸುದ್ದಿ)

    ಪ್ರತಿಭಟನೆಯಲ್ಲಿ ಕೊಲ್ಲೂರು ಹಿತರಕ್ಷಣಾ ವೇದಿಕೆ ಪದಾಧಿಕಾರಿಗಳಾದ ಚಂದ್ರ ಬಳೆಗಾರ್, ಹರೀಶ್ ತೋಳಾರ್, ವಾಸು ಹೆಗ್ಡೆ, ನಾಗೇಶ್ ದಳಿ ಗ್ರಾಪಂ. ಸದಸ್ಯ ವಿನೋದ್ ಹೆಬ್ಬಾರ್, ಜಯಪ್ರಕಾಶ್ ಹೆಗ್ಡೆ ಮೊದಲಾದವರು ಭಾಗವಹಿಸಿದ್ದರು.

    Click here

    Click here

    Click here

    Call us

    Call us

    [quote font_size=”14″ bgcolor=”#ffffff” bcolor=”#dd9933″ arrow=”yes”] ಆರೋಪದಲ್ಲಿ ಹುರುಳಿಲ್ಲ: ಕೃಷ್ಣಪ್ರಸಾದ್ ಅಡ್ಯಂತಾಯ

    ದೇವಳದ ಎಲ್ಲಾ ವಸತಿ ಗೃಹಗಳು ಒಂದೇ ಸಮುಚ್ಛಯದಲ್ಲಿದ್ದು, ಮಾತಾ ಛತ್ರ ಮಾತ್ರ ಬೇರೆ ಕಡೆ ಇರುವುದರಿಂದ ನಿಕರ್ವಹಣೆ ಸಮಸ್ಯೆ ಸರಿದೂಗಿಸಲು, ದೇವಸ್ಥಾನದ ಆದಾಯ ಗಮನದಲ್ಲಿಕರಿಸಿಕೊಂಡು ಖಾಸಗಿ ಆವರಿಗೆ ಉಳಿದೆಲ್ಲಾ ವಸತಿ ಸಮುಚ್ಛಯ ಒಂದದೆಡೆಯಿದ್ದು, ಮಾತಾಛತ್ರ ಮಾತ್ರ ಬೇರೆ ಎದ್ದು, ನಿರ್ವಹಣೆ ಸಮಸ್ಯೆಯಿಂದ ಖಾಸಗಿ ಅವರಿಗೆ ಟೆಂಡರ್ ಕರೆದು ವಹಿಸಲಾಗುತ್ತಿದೆ. ಇಲ್ಲಿಯೂ ಕೂಡಾ ನಿಗದಿಪಡಿಸಿದ ಹಣಕ್ಕಿಂತ ಹೆಚ್ಚು ಸುಲಿಗೆ ಮಾಡಿದಲ್ಲಿ ಟೆಂಟರ್ ರದ್ದು ಪಡಿಸಲಾಗುತ್ತದೆ ಎಂದು ಶ್ರೀ ಕ್ಷೇತ್ರ ಕೊಲ್ಲೂರು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣಪ್ರಸಾದ್ ಆಡ್ಯಂತಾಯ ತಿಳಿಸಿದ್ದಾರೆ. ವಿಶೇಷ ದಿನಗಳಲ್ಲಿ ಕೊಲ್ಲೂರಿಗೆ ಬರುವ ಭಕ್ತರಿಂದ ದುಪ್ಪಟ್ಟು ಬಾಡಿಗೆ ಸುಲುಗೆ ಮಾಡುತ್ತಿರುವ ಖಾಸಗಿ ವಸತಿಗೃಹಗಳ ಲಾಬಿ ಎಲ್ಲರಿಗೂ ತಿಳಿದ ಸಂಗತಿ. ದೇವಸ್ಥಾನದ ವಸತಿ ಗೃಹಗಳ ಬಗ್ಗೆ ಪ್ರಶ್ನಿಸುವವರು ಖಾಸಗಿ ಗೃಹಗಳು ಅಪಸೌವ್ಯಗಳ ಬಗ್ಗೆ ಯಾಕೆ ಸೊಲ್ಲೆತ್ತುತ್ತಿಲ್ಲ ಎಂದು ಹೇಳಿದರು. (ಕುಂದಾಪ್ರ ಡಾಟ್ ಕಾಂ ಸುದ್ದಿ)

    ತೆಪ್ಪೋತ್ಸವ ಕೊಚ್ಚೆ ನೀರಲ್ಲಿ ನಡೆಯುತ್ತದೆ ಎನ್ನೋದು ಸತ್ಯಕ್ಕೆ ದೂರಾವಾಗಿದ್ದು, 52 ಲಕ್ಷ ರೂ. ವೆಚ್ಚದಲ್ಲಿ ಕೊಚ್ಚೆ ನೀರು ಡೈವರ್ಶನ್ ಮಾಡಿಕೊಡಲಾಗಿದೆ.   ಸೌಪರ್ಣಿಕಾ ನದಿ ಮಲೀನ ಆಗುತ್ತಿದೆ ಎಂಬ ಆರೋಪದಲ್ಲಿ ಹುರುಳಿಲ್ಲ. ಹೊಳೆಗೆ ಮಲೀನ ನೀರು ಹೋಗುತ್ತಿಲ್ಲ. ಭಕ್ತರ ಪವಿತ್ರ ಸ್ನಾನಕ್ಕೆ ನೀರು ಯೋಗ್ಯವಾಗಿದೆ. ದೇವಸ್ಥಾನ ಲಾಭನಷ್ಟದ ಪ್ರಶ್ನೆಯಲ್ಲ. ಅಭಿವೃದ್ಧಿ ಮಾಡಬೇಕಿದ್ದರೆ ಹಣದ ಅವಶ್ಯಕತೆ ಇರುತ್ತದೆ. ಕೊಲ್ಲೂರು ಒಳಚರಂಡಿ, ಕುಡಿಯವ ನೀರು ಯೋಜನೆ ಹಣದ ಕೊರತೆಯಿಂದ ನೆನೆಗುದಿಗೆ ಬಿದ್ದಿತ್ತು.. ನಾವು 80 ಕೋಟಿ ಹಣ ಸಂಗ್ರಹಿಸಿದ್ದರಿಂದ ಯೋಜನೆ ಆರಂಭವಾಗುತ್ತಿದೆ. ಸುಮಾರು 79 ಕೋಟಿ ರೂ ವೆಚ್ಚದ ಕಾಮಗಾರಿಗೆ ನೀಡಲಿದ್ದಾರೆ ಎಂದು ತಿಳಿಸಿದರು.

    [/quote]

    _MG_1936 _MG_1930 _MG_1923 _MG_1922 _MG_1909 _MG_1907 _MG_1897

    Like this:

    Like Loading...

    Related

    Shri Mookambika temple Kolluru
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d