Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಷ್ಟ್ರೀಯ ಸಿನಿಮಾ ಪ್ರಶಸ್ತಿ: 2 ಪ್ರಶಸ್ತಿ ಬಾಚಿಕೊಂಡ ಕಾಂತಾರ. ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ
    ಊರ್ಮನೆ ಸಮಾಚಾರ

    ರಾಷ್ಟ್ರೀಯ ಸಿನಿಮಾ ಪ್ರಶಸ್ತಿ: 2 ಪ್ರಶಸ್ತಿ ಬಾಚಿಕೊಂಡ ಕಾಂತಾರ. ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ

    Updated:17/08/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಘೋಷಣೆಯಾಗಿದ್ದು, ಕಾಂತಾರ ಸಿನಿಮಾದ ನಟನೆಗಾಗಿ ನಟ, ನಿರ್ದೇಶಕ ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ದೊರೆತಿದೆ. ಅತ್ಯುತ್ತಮ ಮನರಂಜನಾ ಚಿತ್ರ ವಿಭಾಗದಲ್ಲಿಯೂ ‘ಕಾಂತಾರ’ ಸಿನಿಮಾಗೆ ಪ್ರಶಸ್ತಿ ಲಭಿಸಿದೆ. ಈ ಮೂಲಕ ಈ ಸಲದ ರಾಷ್ಟ್ರ ಪ್ರಶಸ್ತಿ ಪಟ್ಟಿಯಲ್ಲಿ ಕನ್ನಡದ ಸಿನಿಮಾಗಳು ಹೊಸ ದಾಖಲೆ ಬರೆದಿವೆ.

    Click Here

    Call us

    Click Here

    ಹೊಂಬಾಳೆ ಫಿಲಂಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗಿದ್ದ ಈ ಸಿನಿಮಾ, ಕೇವಲ 16 ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾಗಿ, ಬರೋಬ್ಬರಿ 400 ಪ್ಲಸ್‌ ಕೋಟಿ ಗಳಿಕೆ ಕಂಡಿತ್ತು. 2022ರ ಸೆಪ್ಟೆಂಬರ್‌22ರಂದು ಕನ್ನಡದಲ್ಲಿ ಮಾತ್ರ ತೆರೆಕಂಡಿದ್ದ ಈ ಸಿನಿಮಾ, ಅದಾದ ಬಳಿಕ ಬೇರೆ ಭಾಷೆಗಳಿಗೂ ಡಬ್‌ ಆಗಿ ಮೋಡಿ ಮಾಡಿತ್ತು. ಇದೀಗ ಇದೇ ಸಿನಿಮಾಕ್ಕೆ ರಾಷ್ಟ್ರ ಪ್ರಶಸ್ತಿ ಗರಿ ಮುಡಿಗೇರಿದೆ.

    2022ರ ಜನವರಿ 1ರಿಂದ ಡಿಸೆಂಬರ್ 31 ಅವಧಿಯಲ್ಲಿ ಸೆನ್ಸಾರ್ ಆಗಿರುವ ಸಿನಿಮಾಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗಿದೆ. ಇದೀಗ ಈ ಪ್ರಶಸ್ತಿ ಪಟ್ಟಿಯ ಪೈಕಿ ಅತ್ಯುತ್ತಮ ನಟ ಪ್ರಶಸ್ತಿಗಾಗಿ ಸೌತ್‌ನ ಇಬ್ಬರು ಸ್ಟಾರ್‌ ನಟರ ಹೆಸರು ಮುನ್ನಲೆಯಲ್ಲಿತ್ತು. ಮಲಯಾಳಂನ ಮಮ್ಮುಟ್ಟಿ ಮತ್ತು ಸ್ಯಾಂಡಲ್‌ವುಡ್‌ ನಟ ರಿಷಬ್ ಶೆಟ್ಟಿ ಇಬ್ಬರಲ್ಲಿ ಒಬ್ಬರಿಗೆ ರಾಷ್ಟ್ರ ಪ್ರಶಸ್ತಿ ಸಿಗುವ ಸಾಧ್ಯತೆ ಇತ್ತು. ಆ ಪೈಕಿ ರಿಷಬ್‌ ಶೆಟ್ಟಿ ಅತ್ಯುತ್ತಮ ನಟರಾಗಿ ಹೊರಹೊಮ್ಮಿದ್ದಾರೆ.

    ಇತ್ತೀಚೆಗೆ ಘೋಷಣೆ ಆಗಿದ್ದ 68ನೇ ಫಿಲಂಫೇರ್‌ ಪ್ರಶಸ್ತಿಯಲ್ಲಿಯೂ ಕಾಂತಾರ ಸಿನಿಮಾ ಬರೋಬ್ಬರಿ ಆರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿತ್ತು. ಅತ್ಯುತ್ತಮ ಚಿತ್ರ ವಿಭಾಗದಲ್ಲಿ ಕಾಂತಾರ ಪ್ರಶಸ್ತಿ ಪಡೆದರೆ, ಅತ್ಯುತ್ತಮ ನಟ, ಅತ್ಯುತ್ತಮ ನಟಿ (ವಿಮರ್ಶಕರ ಆಯ್ಕೆ), ಅತ್ಯುತ್ತಮ ಪೋಷಕ ನಟ, ಅತ್ಯುತ್ತಮ ಸಂಗೀತ ನಿರ್ದೇಶನ, ಅತ್ಯುತ್ತಮ ಹಿನ್ನೆಲೆ ಗಾಯನ ವಿಭಾಗದಲ್ಲಿ ಕಾಂತಾರ ಸಿನಿಮಾ ಪ್ರಶಸ್ತಿ ಪಡೆದಿತ್ತು. ಇದೀಗ ಇದೇ ಸಿನಿಮಾ 70ನೇ ರಾಷ್ಟ್ರ ಪ್ರಶಸ್ತಿಯಲ್ಲಿಯೂ ಮೋಡಿ ಮಾಡುತ್ತಿದೆ. ‘ಅಮೆಜಾನ್ ಪ್ರೈಮ್’ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ‘ಕಾಂತಾರ’ ಸಿನಿಮಾ ವೀಕ್ಷಣೆಗೆ ಲಭ್ಯವಿದೆ.

    ಇನ್ನೂ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಯಲ್ಲಿ ಹೊಂಬಾಳೆ ಸಂಸ್ಥೆ ನಿರ್ಮಾಣದ ಅತ್ಯುತ್ತಮ ಮನರಂಜನಾ ಚಿತ್ರ ‘ಕಾಂತಾರ’, ಮತ್ತು ‘ಕಾಂತಾರ’ (Kantara) ಚಿತ್ರದ ನಟನೆಗಾಗಿ ಅತ್ಯುತ್ತಮ ನಟ ಪ್ರಶಸ್ತಿ ರಿಷಬ್ ಶೆಟ್ಟಿಗೆ ಸಿಕ್ಕಿದೆ. ಜೊತೆಗೆ ಅತ್ಯುತ್ತಮ ಪ್ರಾದೇಶಿಕ ಸಿನಿಮಾ, ಅತ್ಯುತ್ತಮ ಸಾಹಸ ನಿರ್ದೇಶನ ‘ಕೆಜಿಎಫ್ 2’ಗೆ (KGF 2) ಸಿಕ್ಕಿದೆ.

    Click here

    Click here

    Click here

    Call us

    Call us

    ಒಟ್ಟು 7 ರಾಷ್ಟ್ರೀಯ ಪ್ರಶಸ್ತಿಗಳು ಸ್ಯಾಂಡಲ್‌ವುಡ್‌ ಅರಸಿ ಬಂದಿದೆ.
    ಅತ್ಯುತ್ತಮ ನಟ – ರಿಷಭ ಶೆಟ್ಟಿ (Best Actor – Rishab Shetty -Kantara)
    ಅತ್ಯುತ್ತಮ ಮನೋರಂಜನಾ ಚಿತ್ರ – ಕಾಂತಾರ (Best Entertaining Film awards – Kantara )
    ಅತ್ಯುತ್ತಮ ಪ್ರಾದೇಶಿಕ ಕನ್ನಡ ಚಿತ್ರ-ಕೆಜಿಎಫ್ ಚಾಪ್ಟರ್ 2 (Best Kannada Film – KGF: Chapter 2)
    ಅತ್ಯುತ್ತಮ ಆ್ಯಕ್ಷನ್ ನಿರ್ದೇಶಕ- ಕೆಜಿಎಫ್-2: Best Action Direction – KGF: Chapter 2
    ಅತ್ಯುತ್ತಮ ಸಂಕಲನ- ಸುರೇಶ್ ಅರಸ್, ಮಧ್ಯಂತರ (Best Editing – Madhyantara)
    ಅತ್ಯುತ್ತಮ ಚೊಚ್ಚಲ ನಿರ್ದೇಶಕ: ಬಸ್ತಿ ದಿನೇಶ್‌ ಶೆಣೈ (Madhyantara-ಕನ್ನಡ ಕಿರುಚಿತ್ರ)
    ಉತ್ತಮ ಸಾಂಸ್ಕೃತಿಕ ಚಿತ್ರ : ರಂಗವಿಭೋಗ

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.