Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತೆಕ್ಕಟ್ಟೆ: ಚಲಿಸುತ್ತಿದ್ದ ಹುಲ್ಲು ತುಂಬಿದ ಲಾರಿಗೆ ಬೆಂಕಿ. ತಪ್ಪಿದ ಅನಾಹುತ
    ಅಪಘಾತ-ಅಪರಾಧ ಸುದ್ದಿ

    ತೆಕ್ಕಟ್ಟೆ: ಚಲಿಸುತ್ತಿದ್ದ ಹುಲ್ಲು ತುಂಬಿದ ಲಾರಿಗೆ ಬೆಂಕಿ. ತಪ್ಪಿದ ಅನಾಹುತ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ: ಹುಲ್ಲು ತುಂಬಿಸಿಕೊಂಡು ಸಂಚರಿಸುತ್ತಿದ್ದ ಮಿನಿ ಲಾರಿಯೊಂದಕ್ಕೆ ಪ್ರಯಾಣಿಸುತ್ತಿರುವಾಗಲೇ ಬೆಂಕಿ ತಗುಲಿಕೊಂಡ ಘಟನೆಯಲ್ಲಿ ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಭಾರೀ ದುರಂತವೊಂದು ತಪ್ಪಿ ಹೋದ ಘಟನೆ ಸಂಜೆ ತೆಕ್ಕಟ್ಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

    Click Here

    Call us

    Click Here

    407 ಲಾರಿಯೊಂದು ಬೈಹುಲ್ಲು ತುಂಬಿಸಿಕೊಂಡು ಕುಂದಾಪುರ ಕಡೆಯಿಂದ ಬ್ರಹ್ಮಾವರ ಕಡೆಗೆ ಸಂಚರಿಸುತ್ತಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಲಾರಿ ತೆಕ್ಕಟ್ಟೆ ಸಮೀಪಿಸುತ್ತಿರುವಂತೆ ಲಾರಿಯ ಹಿಂಭಾಗದಲ್ಲಿದ್ದ ಬೈಹುಲ್ಲಿನಲ್ಲಿ ಬೆಂಕಿ ಹತ್ತಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಚಾಲಕನ ಗಮನಕ್ಕೆ ತಂದಿದ್ದಾರೆ. ಚಾಲಕನೂ ಎದೆಗುಂದದೇ ಲಾರಿಯ ಹಿಂಬದಿಯ ಟ್ರೈಲರನ್ನು ಮೇಲಕ್ಕೆತ್ತುವ ಪ್ರಯತ್ನ ಮಾಡಿದ್ದಾನೆ. ಆದರೆ ಗಟ್ಟಿಯಾಗಿ ಕಟ್ಟಿಕೊಂಡಿದ್ದ ಬೈಹುಲ್ಲು ರಾಶಿ ಅಷ್ಟು ಸುಲಭಕ್ಕೆ ಕೆಳಗೆ ಬೀಳಲು ಒಪ್ಪಲಿಲ್ಲ. ಅದಾಗಲೇ ಬಂದು ಸೇರಿದ ಜನ ಒಬ್ಬೊಬ್ಬರು ಒಂದೊಂದು ಐಡಿಯಾ ಕೊಡಲಾರಂಭಿಸಿದರು. ಕೊನೆಗೂ ಕೆಲವರು ಲಾರಿಯ ಹಿಂಬದಿಗೆ ಹೋಗಿ ಟ್ರೈಲರ್ ಬಾಗಿಲು ತೆರೆಯುವಲ್ಲಿ ಯಶಸ್ವಿಯಾದರು. ಆದರೆ ಅದಾಗಲೇ ಬೈಹುಲ್ಲು ಸಂಪೂರ್ಣ ಬೆಂಕಿಗಾಹುತಿಯಾಗಿತ್ತು. ಟ್ರೈಲರ್ ಮೇಲೆತ್ತುವ ಸೌಲಭ್ಯ ಇದ್ದುದರಿಂದ ಮತ್ತು ಸಾರ್ವಜನಿಕರ ಸಮಯಪ್ರಜ್ಞೆಯಿಂದ ಮತ್ತು ಚಾಲಕನ ಧೈರ್ಯದಿಂದಾಗಿ ಸಂಭವಿಸಬಹುದಾದ ಭಾರೀ ಅನಾಹುತವೊಂದನ್ನು ತಪ್ಪಿಸಿದಂತಾಗಿದೆ.

    ಘಟನೆಯಿಂದಾಗಿ ಸುಮಾರು ಅರ್ಧ ತಾಸುಗಳ ಕಾಲ ಹೆದ್ದಾರಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ರಸ್ತೆಗಡ್ಡವಾಗಿ ಹಾದು ಹೋದ ವಿದ್ಯುತ್ ತಂತಿಯಮ್ಮು ಬೈಹುಲ್ಲು ತಾಗಿರುವ ಕಾರಣದಿಂದ ಬೆಂಕಿ ಹತ್ತಿಕೊಂಡಿರಬಹುದು ಎಂದು ಶಂಕಿಸಲಾದರೂ ಘಟನೆಗೆ ಕಾರಣ ಸ್ಪಷ್ಟವಾಗಿ ತಿಳಿದುಬಂದಿಲ್ಲ.

    news tekkatte fire6.png news tekkatte fire4.png news tekkatte fire2.png

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    05/03/2026
    Leave A Reply Cancel Reply

    six + fourteen =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.