ಬಿ. ಬಿ. ಹೆಗ್ಡೆ ಕಾಲೇಜಿನ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯದಲ್ಲಿ ‘ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ’ಯನ್ನು ಆಚರಿಸಲಾಯಿತು.

Call us

Click Here

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅವರು ಗ್ರಂಥಾಲಯ ವಿಜ್ಞಾನದ ಪಿತಾಮಹ ಪದ್ಮಶ್ರೀ ಪುರಸ್ಕೃತ ಡಾ| ಎಸ್. ಆರ್. ರಂಗನಾಥನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗ್ರಂಥಾಲಯವು ಜ್ಞಾನಾರ್ಜನೆಯೊಂದಿಗೆ ಶಿಸ್ತುಬದ್ಧ ಜೀವನ ಕೌಶಲ್ಯವನ್ನು ಬೆಳೆಸುವ ಸ್ಥಳ, ಹೀಗಾಗಿ ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು.  

ಈ ಸಂದರ್ಭದಲ್ಲಿ ಹೆಬ್ರಿ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಅಮರೇಶ್ ಹೆಗ್ಡೆ, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಗ್ರಂಥಪಾಲಕ ಮಹೇಶ್ ನಾಯ್ಕ್, ಬೋಧಕ-ಬೋಧಕೇತರರು ಉಪಸ್ಥಿತರಿದ್ದರು.

Leave a Reply