Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೌಢ್ಯವನ್ನು ಮೌಲ್ಯವಾಗಿ ಭಿತ್ತುತ್ತಿರುವುದು ಆತಂಕಕಾರಿ: ಕಥೆಗಾರ ದಯಾನಂದ
    Uncategorized

    ಮೌಢ್ಯವನ್ನು ಮೌಲ್ಯವಾಗಿ ಭಿತ್ತುತ್ತಿರುವುದು ಆತಂಕಕಾರಿ: ಕಥೆಗಾರ ದಯಾನಂದ

    Updated:03/09/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಒಂದೇ ಭಾಷೆ, ಸಂಸ್ಕೃತಿ, ಜನಾಂಗವೇ ಶ್ರೇಷ್ಠ ಎಂಬ ಭಾವನೆ ಅಪಾಯಕಾರಿ. ಬಹುತ್ವವನ್ನು ಗೌರವಿಸುವುದು ಮುಖ್ಯ. ಮೌಢ್ಯವನ್ನು ಮೌಲ್ಯವಾಗಿ ಭಿತ್ತುತ್ತಿರುವ ವ್ಯವಸ್ಥೆಯ ನಡುವೆ ವೈಚಾರಿಕತೆಯನ್ನು ಬೆಳೆಸುವ ಶಿಕ್ಷಣ, ಸಂಘಟನೆ, ಸಾಹಿತ್ಯ ಇನ್ನಷ್ಟು ಬೇಕಾಗಿದೆ ಎಂದು ಕಥೆಗಾರ ದಯಾನಂದ ಹೇಳಿದರು.

    Click Here

    Call us

    Click Here

    ಅವರು ಮಂಗಳವಾರ ಇಲ್ಲಿನ ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸಾಯನ್ಸ್ ಕಾಲೇಜು ಆಯೋಜಿಸಿದ್ದ 13ನೇ ಡಾ. ಹೆಚ್. ಶಾಂತರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದರು.

    ಯುವಜನತೆ ಸಾಹಿತ್ಯ ಹಾಗೂ ಓದಿನಿಂದ ವಿಮುಖರಾಗಿದ್ದಾರೆ ಅನ್ನೋದು ಬಹುಕಾಲದ ಮಾತು. ಆದರೆ ಸಾಹಿತ್ಯದ ಆಸಕ್ತಿ ಇರುವವರು ಎಲ್ಲಾ ಕಾಲದಲ್ಲೂ ಇದ್ದಾರೆ. ಸಾಹಿತ್ಯ ಮಾತ್ರ ವ್ಯಕ್ತಿಯನ್ನು ಚಿಂತನೆಗೆ ಹಚ್ಚುತ್ತದೆ. ಭೌದ್ಧಿಕ ಬೆಳವಣಿಗೆಯ ದಾರಿಯಾಗಿದೆ. ಅಂಬೇಡ್ಕರ್ ಅವರಿಗೆ ಓದು ವಿಮೋಚನೆಯ ಸಾಧ್ಯತೆಯಾಗಿ ಕಂಡಿತ್ತು ಎಂದರು.

    ಪ್ರಶಸ್ತಿ ಆಯ್ಕೆ ಸಮಿತಿಯ ತೀರ್ಪುಗಾರರಾಗಿದ್ದ ಪತ್ರಕರ್ತ, ಕಥೆಗಾರ ಡಾ. ಟಿ.ಎಸ್. ಗೊರವ ಗಜೇಂದ್ರಗಡ‌ ಅವರು ಮಾತನಾಡಿ ಬುದ್ಧನ ಕಿವಿ ಕಥಾಸಂಕಲನದ ಕತೆಯಲ್ಲಿ ಬರುವ ಪಾತ್ರಗಳು ಸಾಮಾಜಿಕ ಸನ್ನಿವೇಶ ಮತ್ತು ತುಮುಲಗಳನ್ನು ದುಗುಡ ದುಮ್ಮಾನಗಳನ್ನು ಕಟ್ಟುವ ಗುರಿಯನ್ನು ಹೊಂದಿದೆ. ಕಥಾ ಸಂಕಲನದ ಪ್ರತಿಯೊಂದು ಕಥೆಯು ಮನುಷ್ಯನ ಸಂಕೋಲೆಗಳನ್ನು ಅಲ್ಲಿನ ಹೇಳಲಾಗದ ನಿತ್ಯದ ಹೋರಾಟಕ್ಕೆ ಸಂವೇದನೆಗೆ ಭಾಷೆಯ ರೂಪ ಕೊಟ್ಟಿದೆ. ಅದರಲ್ಲೂ ಜಾತಿ ಲಿಂಗ ತಾರತಮ್ಯ, ಆರ್ಥಿಕ ತಾರತಮ್ಯಗಳು ಅದರಲ್ಲಿನ ಓಲೈಸುವಿಕೆಯ ಪರಿಯನ್ನು ಹೇಳುತ್ತದೆ. ಆರ್ಥಿಕ ಸಬಲರು ದುರ್ಬಲರು ಓಲೈಸುವ ಉಪಾಯಗಳನ್ನು ಸೂಕ್ಷ್ಮವಾಗಿ ಕಥಾಸಂಕಲನವು ಹೇಳುತ್ತದೆ. ಈ ಕಥಾಸಂಕಲನದ ಬಹುಪಾಲು ಕಥೆಗಳು ನಿತ್ಯ ಬದುಕಿನ ವಾಸ್ತವಗಳಿಗೆ ಹಿಡಿದು ಕೈಗನ್ನಡಿಯಾಗಿದೆ ಎಂದರು.

    ಇದನ್ನೂ ಓದಿ: ► ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಗೆ ದಯಾನಂದ ಅವರ “ಬುದ್ಧನ ಕಿವಿ” ಕಥಾ ಸಂಕಲನ ಆಯ್ಕೆ https://kundapraa.com/?p=74976 .

    Click here

    Click here

    Click here

    Click Here

    Call us

    Call us

    ಬುದ್ಧನ ಕಿವಿ ಕೃತಿಯ ಕಥೆಗಾರ ದಯಾನಂದ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

    ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಎಚ್. ಶಾಂತಾರಾಮ ಮತ್ತು ವಿಜಯಲಕ್ಷ್ಮೀ ಶಾಂತಾರಾಮ್ ಶುಭಹಾರೈಸಿದರು. ಕಾಲೇಜಿನ ಹಿರಿಯ ವಿಶ್ವಸ್ಥ ಕೆ. ಶಾತರಾಮ ಪ್ರಭು ಅಧ್ಯಕ್ಷತೆ ವಹಿಸಿದ್ದರು. ದೇವದಾಸ್ ಕಾಮತ್, ರಾಜೇಂದ್ರ ತೋಳಾರ್, ಯು.ಎಸ್. ಶೆಣೈ, ಪ್ರಶಸ್ತಿ ಸಮಿತಿಯ ವಸಂತ ಬನ್ನಾಡಿ, ಜಾನಕಿ ಬ್ರಹ್ಮಾವರ ಉಪಸ್ಥಿತರಿದ್ದರು.

    ಪದವಿ ಕಾಲೇಜು ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಸ್ವಾಗತಿಸಿದರು. ಪ್ರಶಸ್ತಿ ಆಯ್ಕೆ ಸಮಿತಿ ಸಂಚಾಲಕಿ ಡಾ. ರೇಖಾ ವಿ. ಬನ್ನಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಜಿ.ಎಂ. ಗೊಂಡ ವಂದಿಸಿದರು. ಉಪನ್ಯಾಸಕಿ ಅಕ್ಷತಾ ಸಂತೋಷ್ ಕಥೆಗಾರರ ಪರಿಚಯ ಮಾಡಿದರು. ವಿದ್ಯಾರ್ಥಿಗಳಾದ ಶ್ರೀರಕ್ಷಾ ಹಾಗೂ ಸ್ನೇಹಿತರು ಪಾರ್ಥಿಸಿದರು. ಇಂಗ್ಲಿಷ್ ಉಪನ್ಯಾಸಕಿ ರೋಹಿಣಿ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026
    Leave A Reply Cancel Reply

    sixteen + 10 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.