Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಕ್ಸಲೆಂಟ್ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಮತ್ತು ಸಿ.ಎಸ್‌ ತರಬೇತಿ ಉದ್ಘಾಟನೆ
    ಊರ್ಮನೆ ಸಮಾಚಾರ

    ಎಕ್ಸಲೆಂಟ್ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಮತ್ತು ಸಿ.ಎಸ್‌ ತರಬೇತಿ ಉದ್ಘಾಟನೆ

    Updated:04/09/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ
    : “ಸ್ಥಿರತೆ ಹಾಗೂ ಹೊಣೆಗಾರಿಕೆಯಿಂದ ಲೆಕ್ಕ ಪರಿಶೋಧಕರಾಗಿ” ಎಂದು ಘೋಷಿಸುತ್ತಾ, ಕುಂದಾಪುರ ಸುಣ್ಣಾರಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ. ಎ ಮತ್ತು ಸಿ. ಎಸ್ ತರಗತಿಗಳನ್ನು ಮಂಗಳವಾರದಂದು ಗಣಪತಿ ಸ್ತುತಿ  ಹಾಗೂ ಜ್ಯೋತಿ ಬೆಳಗಿಸುವ ಮೂಲಕ ಎಲ್ಲಾ ಗೌರವಾನ್ವಿತ ಅತಿಥಿ ಮಹಾಶಯರ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಯಿತು.

    Click Here

    Call us

    Click Here

    ಕಾರ್ಯಕ್ರಮವನ್ನು ಉದ್ಘಾಟಿಸಿ, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಅತಿಥಿಗಳಾದ ಲೆಕ್ಕ ಪರಿಶೋಧಕರು ಹಾಗೂ ಸಿ. ಎಸ್ ತಜ್ಞರಾದ ಪ್ರದೀಪ್ ಜೋಗಿ ಚೇರ್ಮ್‍ನ್ ಆಫ್ ಐ. ಸಿ .ಎ. ಐ, ಉಡುಪಿ  ಇವರು ಸಿ. ಎ/ಸಿ. ಎಸ್ ತರಗತಿಗಳ ಪುನಶ್ಚೇತನ ಕಾರ್ಯಕ್ರದಲ್ಲಿ ವಾಣಿಜ್ಯ ವಿಭಾಗದ  ವಿದ್ಯಾರ್ಥಿಗಳಿಗೆ ಲೆಕ್ಕ  ಪರಿಶೋಧನೆಯ ಬಗ್ಗೆ ಮಾಹಿತಿಯ ಜೊತೆಗೆ ಲೆಕ್ಕ ಪರಿಶೋಧನಾ ಕ್ಷೇತ್ರದಲ್ಲಿರುವ ವಿಪಲ ಅವಕಾಶಗಳು ಮತ್ತು ಪೂರ್ವ ತಯಾರಿಯ ಕುರಿತು ಅರಿವು ಮೂಡಿಸುವ  ಬಗ್ಗೆ ಮಾತನಾಡುತ್ತಾ, ನಿರಂತರ ಪರಿಶ್ರಮ ಮತ್ತು ನಿರ್ದಿಷ್ಟ ಗುರಿಯೊಂದಿಗೆ ಮುಂದುವರೆದಲ್ಲಿ ಸಿ. ಎ ಪರೀಕ್ಷೆಯಲ್ಲಿ ಸುಲಭವಾಗಿ ಉತ್ತಿರ್ಣರಾಗಬಹುದು ಎಂದರು. ಪ್ರತಿಯೊಬ್ಬರಲ್ಲೂ ಸಾಮರ್ಥ್ಯ ಇದೆ, ಆತ್ಮವಿಶ್ವಾಸದ ಕೊರತೆಯಿಂದ ನಾವು ಬೇರೆ ಅವಕಾಶಗಳನ್ನು ಅರಸುತ್ತಾ ಮುನ್ನಡೆಯುತ್ತೇವೆ. ಅವರಿವರ ಮಾತಿಗೆ ಮನ್ನಣೆ ನೀಡುತ್ತಾ,ತಮ್ಮ ಸಾಮರ್ಥ್ಯದ ಬಗ್ಗೆ ಕೀಳರಿಮೆಯಿಂದ ಅವಕಾಶಗಳನ್ನು ಕೈ ಚೆಲ್ಲುತ್ತೇವೆ ಎಂದರು .

    ಈ ಕಾರ್ಯಕ್ರಮಕ್ಕೆ ಆಗಮಿಸಿದ ಗೌರವಾನ್ವಿತ ಅತಿಥಿಗಳಾದ ಸಿ. ಎ ಲೋಕೇಶ್ ಶೆಟ್ಟಿ ಚೇರ್ಮ್‍ನ್ ಆಫ್ ಎಸ್. ಐ. ಸಿ. ಎ. ಎಸ್. ಎ. ಉಡುಪಿ ಅವರು ವಾಣಿಜ್ಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ, ಕೇವಲ ಅತ್ಯಧಿಕ ಅಂಕಗಳನ್ನು ಪಡೆದವರು ಮಾತ್ರ ಸಿ. ಎ ಪಾಸಾಗುತ್ತಾರೆ ಎಂಬ ತಪ್ಪು ಕಲ್ಪನೆ ಬಹಳಷ್ಟು ವಿದ್ಯಾರ್ಥಿಗಳಲ್ಲಿದೆ, ಸಾಧಾರಣ ವಿದ್ಯಾರ್ಥಿಗಳು ಸಹ ದೃಢ ಮನಸ್ಸು ಮತ್ತು ನಿಯಮಿತ ಅಧ್ಯಯನದಿಂದ ಯಶಸ್ವಿಯಾಗಿದ್ದಾರೆ. ಯಾರೂ ಕೂಡ ಕ್ಲಿಷ್ಟ ವೆಂದು ಹಿಂಜರಿಯದೆ  ನಿರ್ದಿಷ್ಟ ಗುರಿಯೊಂದಿಗೆ ಮುನ್ನಡೆದು ಸಿ.ಎ/ಸಿ.ಎಸ್ ಪರೀಕ್ಷೆಯಲ್ಲಿ ಯಶಸ್ವಿಯಾಗಬಹುದೆಂದು ತಿಳಿಸಿದರು.

    ಈ ಸಂದರ್ಭದಲ್ಲಿ ಎಮ್. ಎಮ್. ಹೆಗ್ಡೆ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಮಹೇಶ್ ಹೆಗ್ಡೆ ಅವರು ವಾಣಿಜ್ಯ ವಿಭಾಗದ  ವಿದ್ಯಾರ್ಥಿಗಳಿಗೆ ಸಿ. ಎ./ಸಿ. ಎಸ್ ಅಧ್ಯಯನದ ಪ್ರಾರಂಭದ ಹಂತದಲ್ಲಿ ಬರುವ ಸವಾಲುಗಳನ್ನು ಮತ್ತು ಅವುಗಳನ್ನು ಎದುರಿಸಿ ಸದೃಢರಾಗುವ ಮಾರ್ಗಗಳನ್ನು, ತದನಂತರದ ದಿನಗಳಲ್ಲಿ ಯಶಸ್ವಿನ ಮೆಟ್ಟಿಲೇರಿ ಸಂಭ್ರಮಿಸುವ  ಕ್ರಮಗಳ ಬಗ್ಗೆ ಮಾರ್ಮಿಕವಾಗಿ ನುಡಿದರು. ಸಭೆಯಲ್ಲಿ ಉಪಸ್ಥಿತರಿದ್ದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

    ವಾಣಿಜ್ಯ ವಿಭಾಗದ  ಮುಖ್ಯಸ್ಥೆ ದಿವ್ಯಾ ಶೆಟ್ಟಿ ಸ್ವಾಗತಿಸಿದರು. ವಾಣಿಜ್ಯ ವಿಬಾಗದ ಲೆಕ್ಕಶಾಸ್ತ್ರ ಉಪನ್ಯಾಸಕಿಯಾದ ಪೂಜಾ ಶೆಟ್ಟಿ ಅವರು ಕಾರ್ಯಕ್ರi ನಿರೂಪಿಸಿ, ಧನ್ಯವಾದ ಸಮರ್ಪಿಸಿದರು. ವಾಣಿಜ್ಯ ವಿಭಾಗದ ಅರ್ಥಶಾಸ್ತ್ರ ಉಪನ್ಯಾಸಕರಾದ ಶ್ರೀನಿವಾಸ ವೈದ್ಯರು, ವಾಣಿಜ್ಯ ವಿಭಾಗದ ಎಲ್ಲಾ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    20 − 7 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.