Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಿರಿಯ ನಾಗರಿಕರ ಜೀವನ ಶೈಲಿ ಯುವಜನತೆಗೆ ಮಾದರಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಹಿರಿಯ ನಾಗರಿಕರ ಜೀವನ ಶೈಲಿ ಯುವಜನತೆಗೆ ಮಾದರಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಯುವಜನತೆಗೆ ಮಾದರಿಯಾಗುವ ರೀತಿಯಲ್ಲಿ ಹಿರಿಯ ನಾಗರಿಕರು ಜೀವನ ನಡೆಸುತ್ತಿದ್ದು, ನಮ್ಮ ಬದುಕಿಗೆ ದಾರಿ ಮಾಡಿಕೊಟ್ಟ ಹಿರಿಯ ನಾಗರಿಕರ ಕೊನೆಗಾಲದ ಬದುಕನ್ನು ಹಸನುಗೊಳಿಸುವುದು ಪ್ರತಿಯೊಬ್ಬ ಯುವಜನರ ಕರ್ತವ್ಯ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ಹಿರಿಯ ನಾಗರಿಕರ ಸಂಸ್ಥೆಗಳು, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ , ವೃದ್ಧಾಶ್ರಮಗಳು ಉಡುಪಿ ಹಾಗೂ ಕೆನರಾ ಬ್ಯಾಂಕ್ ವೃತ್ತ ಕಚೇರಿ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ನಡೆದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಫರ್ಧೆಗಳಿಗೆ ಬಕೆಟ್‌ಗೆ ಬಾಲ್ ಎಸೆಯುವ ಮೂಲಕ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದರು.

    ಹಿರಿಯ ನಾಗರಿಕರಿಗೆ ಸಾಮಾಜಿಕ ಭದ್ರತೆ, ಆರ್ಥಿಕ ಭದ್ರತೆ ಹಾಗೂ ಉತ್ತಮ ವಾತಾವರಣ ಕಲ್ಪಿಸಲು ಅರಿವು ಮೂಡಿಸುವ ನಿಟ್ಟಿನಲ್ಲಿ ಸರ್ಕಾರ ಪ್ರತೀವರ್ಷ ಅಕ್ಟೋಬರ್ 1ರಂದು ವಿಶ್ವ ಹಿರಿಯ ನಾಗರಿಕರ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ ಎಂದ ಅವರು, ಇದರ ಅಂಗವಾಗಿ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಹಿರಿಯ ನಾಗರಿಕರು ಯಾವುದೇ ಹಿಂಜರಿಕೆ ಇಲ್ಲದೆ ಸಕ್ರೀಯವಾಗಿ ಪಾಲ್ಗೊಳ್ಳುವಂತೆ ತಿಳಿಸಿದರು.

    ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರು ಭಾಗವಹಿಸುವುದರಿಂದ ಮನಸ್ಸಿಗೆ ಲವಲವಿಕೆ ಉಂಟಾಗುವುದರ ಜೊತೆಗೆ ನೆರೆಹೊರೆಯವರೊಂದಿಗೆ ಒಡನಾಟವನ್ನು ಹೊಂದಿ, ಜೀವನೋತ್ಸಾಹ ಹೆಚ್ಚುತ್ತದೆ. ಆದ್ದರಿಂದ  ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ  ಪ್ರತಿಯೊಬ್ಬ ಹಿರಿಯ ನಾಗರಿಕರು ಕ್ರಿಯಾಶೀಲರಾಗಿ ಸಕ್ರಿಯವಾಗಿ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬೇಕು ಎಂದರು.

    ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಪುರುಷೋತ್ತಮ ಮಾತನಾಡಿ, ಹಿರಿಯ ನಾಗರಿಕರನ್ನು ಗೌರವದಿಂದ ಕಾಣುವುದು ಪ್ರತಿಯೊಬ್ಬರ ಸಾಮಾಜಿಕ ಜವಾಬ್ದಾರಿಯಾಗಿದೆ. ಹಿರಿಯ ನಾಗರಿಕರೆಂದು ಅವರುಗಳನ್ನು ನಿರ್ಲಕ್ಷ್ಯ ಮಾಡದೇ ಅವರ ವೃದ್ಧಾಪ್ಯ ಜೀವನವನ್ನು ಉತ್ತಮ ರೀತಿಯಲ್ಲಿ ಸಾಗಿಸಲು ಅನುವು ಮಾಡಿಕೊಡಬೇಕು ಎಂದರು. 

    Click here

    Click here

    Click here

    Call us

    Call us

    ಕಾರ್ಯಕ್ರಮದಲ್ಲಿ ಲೀಡ್ ಬ್ಯಾಂಕ್ ಮ್ಯಾನೆಜರ್ ಹರೀಶ್ ಜಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧ ಹಾದಿಮನೆ, ಜಿಲ್ಲಾ ಮಹಿಳಾ ಮಂಡಲದ ಒಕ್ಕೂಟದ ಸರಳ ಕಾಂಚನ್, ಬ್ರಹ್ಮಾವರ ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಉದಯ್ ಕುಮಾರ್, ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಿಬ್ಬಂದಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಹಿರಿಯ ನಾಗರಿಕರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಹಿರಿಯ ನಾಗರಿಕರುಗಳಿಗೆ ಕ್ರೀಡಾ ವಿಭಾಗದಲ್ಲಿ ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆ ಸ್ಪರ್ಧೆ ಹಾಗೂ ಬಕೆಟ್‌ನಲ್ಲಿ ಬಾಲ್ ಎಸೆಯುವ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ವಿಭಾಗದಲ್ಲಿ ಗಾಯನ ಸ್ಪರ್ಧೆ ಹಾಗೂ ಏಕಪಾತ್ರಾಭಿನಯ ಸ್ಪರ್ಧೆಗಳು ನಡೆದವು.

    ಈ ಸಂದರ್ಭದಲ್ಲಿ ಹಿರಿಯ ನಾಗರಿಕರುಗಳಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಹಿರಿಯ ನಾಗರಿಕರ ಒಕ್ಕೂಟದ ಅಧ್ಯಕ್ಷ ವಿಶ್ವನಾಥ್ ಹೆಗ್ಡೆ ಸ್ವಾಗತಿಸಿ, ಗಣನಾಥ್ ಎಕ್ಕಾರು ನಿರೂಪಿಸಿದರೆ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ರತ್ನ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಾಂಸ್ಕೃತಿಕ ಉತ್ಸವ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    23/12/2025

    ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಡಾ. ತಿಪ್ಪೇಸ್ವಾಮಿ ಕೆ.ಟಿ

    23/12/2025

    ಬೀಡಾಡಿ ಪ್ರಾಣಿಗಳ ಆಶ್ರಯ ತಾಣಗಳನ್ನು ಕೂಡಲೇ ಪ್ರಾರಂಭಿಸಿ: ಜಿಲ್ಲಾಧಿಕಾರಿ

    23/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸಾಂಸ್ಕೃತಿಕ ಉತ್ಸವ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
    • ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಡಾ. ತಿಪ್ಪೇಸ್ವಾಮಿ ಕೆ.ಟಿ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕ – ಶಿಕ್ಷಕರ ಸಭೆ
    • ಬೀಡಾಡಿ ಪ್ರಾಣಿಗಳ ಆಶ್ರಯ ತಾಣಗಳನ್ನು ಕೂಡಲೇ ಪ್ರಾರಂಭಿಸಿ: ಜಿಲ್ಲಾಧಿಕಾರಿ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ಸಂಕಲ್ಪ್‌ ಕುಮಾರ್‌ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.