Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ನೂತನ ಕಾನೂನು ಮಹಾವಿದ್ಯಾಲಯ ಆರಂಭ
    alvas nudisiri

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ನೂತನ ಕಾನೂನು ಮಹಾವಿದ್ಯಾಲಯ ಆರಂಭ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು  ತನ್ನಲ್ಲಿರುವ 19 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ  ನೂತನ ಕಾನೂನು ಮಹಾವಿದ್ಯಾಲಯವನ್ನು ಆರಂಭಿಸುತ್ತಿದೆ. ಕಾನೂನು ಶಿಕ್ಷಣ ಎಲ್ಲಾ ಸ್ತರಗಳ ಹಾಗೂ ವಿವಿಧ ಜ್ಞಾನ ಶಾಖೆಗಳಿಗೆ ಪೂರಕವಾದ ವೃತ್ತಿ ಆಧಾರಿತ ಕೋರ್ಸ ಆಗಿದೆ. ಮೂಡುಬಿದಿರೆಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮನ್ನಣೆ ಇರುವ ಶೈಕ್ಷಣಿಕ ಕಾರ್ಯಕ್ರಮವನ್ನು ಪರಿಚಯಿಸಿ, ಮಧ್ಯಮ  ಮತ್ತು ಕೆಳವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣದ ಹೊಸ ಸಾಧ್ಯತೆಗಳನ್ನು ಪರಿಚಯಿಸಿದ ಕೀರ್ತಿ ಆಳ್ವಾಸ್‌ಗೆ ಸಲ್ಲುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ತಿಳಿಸಿದರು.

    Click Here

    Call us

    Click Here

    ಅವರು ಮೂಡುಬಿದಿರೆಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ  ಮಾತನಾಡಿ, ಹೊಸ ಕಾನೂನು ಮಹಾವಿದ್ಯಾಲಯವು  ಕರ್ನಾಟಕ  ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ (ಕೆಎಸ್‌ಎಲ್‌ಯು) ಸಂಯೋಜನೆಗೊಂಡಿದ್ದು, ಬಾರ್ ಕೌನ್ಸಿಲ್ ಆಫ್ ಇಂಡಿಯಾದಿಂದ ಅನುಮೋದನೆ ಪಡೆದಿದೆ ಎಂದರು.

    ಕರಾವಳಿ  ಕರ್ನಾಟಕದಲ್ಲಿ  ಮೊಟ್ಟ ಮೊದಲ ಬಾರಿಗೆ ಅತೀ ಹೆಚ್ಚು ಉದ್ಯೋಗ ಸಾಧ್ಯತೆ ಇರುವ 5 ವರ್ಷಗಳ ಬಿಕಾಂ ಎಲ್‌ಎಲ್‌ಬಿ  ಪದವಿಯನ್ನು 60 ವಿದ್ಯಾರ್ಥಿ ಪರಿಮಿತಿಯೊಂದಿಗೆ    ಹಾಗೂ 3 ವರ್ಷಗಳ ಎಲ್‌ಎಲ್‌ಬಿ ಪದವಿಯನ್ನು  60 ವಿದ್ಯಾರ್ಥಿ ಮಿತಿಯೊಂದಿಗೆ ಈ ವರ್ಷದಿಂದಲೇ ಆರಂಭಿಸುವ ಅನುಮತಿ ದೊರೆತಿದೆ.  ಕಾನೂನು ಶಿಕ್ಷಣದಲ್ಲಿ ಉತ್ತಮ ಅನುಭವ ಹೊಂದಿರುವ ಶಿಕ್ಷಕರನ್ನು ಈಗಾಗಲೇ ನೇಮಿಸಿದ್ದು,  ಗುಣಾತ್ಮಕವಾದ ಕಾನೂನು ಶಿಕ್ಷಣಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಕಟಿಬದ್ಧವಾಗಿದೆ.

    ಯಾವುದೇ ವಿಭಾಗದಲ್ಲಿ ಪದವಿಯನ್ನು ಪೂರ್ಣಗೊಳಿಸಿದ ವಿದ್ಯಾರ್ಥಿ  ಹಾಗೂ ವಿದ್ಯಾರ್ಥಿನಿಯರು 3ವರ್ಷಗಳ ಎಲ್‌ಎಲ್‌ಬಿ ಪದವಿಗೆ ದಾಖಲಾತಿಗೊಳ್ಳಲು ಅರ್ಹತೆ ಪಡೆಯುತ್ತಾರೆ ಹಾಗೂ ದ್ವಿತೀಯ ಪಿಯುಸಿಯಲ್ಲಿ  ವಾಣಿಜ್ಯ ಅಥವಾ ವಿಜ್ಞಾನ ಶಾಖೆಗಳನ್ನು ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳು ಬಿಕಾಮ್ ಎಲ್‌ಎಲ್‌ಬಿ ಪ್ರವೇಶಾತಿಗೆ ಅರ್ಹರು.

    ವಿಫುಲ ಅವಕಾಶಗಳು:
    ಹೊಸ  ಕಾನೂನು  ಮಹಾವಿದ್ಯಾಲಯದ ಮೂಲಕ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು  ಮೂಡುಬಿದಿರೆ  ಹಾಗೂ ರಾಜ್ಯಕ್ಕೆ  ಮತ್ತೊಂದು ಕೊಡುಗೆಯನ್ನು ನೀಡಲು ಸನ್ನದ್ಧವಾಗಿದೆ.   ವಿಶಾಲವಾದ ಸುಸಜ್ಜಿತ ಕಾನೂನು ಗ್ರಂಥಾಲಯ,  ಮೂಟ್ ಕೋರ್ಟ್ ಮತ್ತು ಇತರೆ ಎಲ್ಲಾ  ಮೂಲಭೂತ ಸೌಕ್ಷರತೆಗಳೊಂದಿಗೆ  ವಿದ್ಯಾಗಿರಿಯಲ್ಲಿ  ಕಾಲೇಜು ಈಗಾಗಲೇ ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾಗಿದೆ. ಶಿಕ್ಷಣ ಪೂರೈಸಿದ ಪದವೀಧರರು ನ್ಯಾಯವಾಧಿಗಳಾಗಿ ಸ್ವಂತ ವೃತ್ತಿ ಆರಂಭಿಸುವುದಲ್ಲದೇ, ವಿವಿಧ ಕಂಪೆನಿಗಳಲ್ಲಿ ಸಲಹೆಗಾರರಾಗಿ, ವ್ಯವಹಾರ ಆಡಳಿತಾಧಿಕಾರಿಗಳಾಗಿ, ನ್ಯಾಯಾಂಗದ ವಿವಿಧ ಹುದ್ದೆಗಳಲ್ಲಿ, ಶಾಸನ ರೂಪಿಸುವ ಪ್ರತಿನಿಧಿಗಳಾಗಿ ವೃತ್ತಿಕೈಗೊಳ್ಳುವ ಅಪಾರ ಅವಕಾಶಗಳಿವೆ.  ಸಮಾಜಕಾರ್ಯ, ಪ್ರತಿಕೋದ್ಯಮ, ಎಂಬಿಎ, ಹಾಸ್ಪಿಟಲ್ ಅಡ್ಮೀನಿಸ್ಟ್ರೇಶನ್, ಸಿಎ, ಸಿಎಸ್ ಪದವೀಧರರು ಕಾನೂನು ಶಿಕ್ಷಣ ಪಡೆದಲ್ಲಿ ತಮ್ಮ ಕ್ಷೇತ್ರಗಳಲ್ಲಿ ಹೆಚ್ಚಿನ ನೈಪುಣ್ಯತೆ ಪಡೆಯುವುದರೊಂದಿಗೆ ಹೆಚ್ಚಿನ ಉದ್ಯೋಗದ ಅವಕಾಶಗಳನ್ನು ಪಡೆಯಲು ಸಹಕಾರಿಯಾಗಲಿದೆ. 

    Click here

    Click here

    Click here

    Call us

    Call us

    ದಾಖಲಾತಿ ಆರಂಭಗೊಂಡಿದೆ:
    2024-25 ಶೈಕ್ಷಣಿಕ ವರ್ಷದ ದಾಖಲಾತಿ ಈಗಾಗಲೇ ಆರಂಭಗೊಂಡಿದ್ದು, ಆಸಕ್ತರು ಹೆಚ್ಚಿನ ಮಾಹಿತಿಗಾಗಿ 9379525826 ಹಾಗೂ 8147760394 ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

    ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಸಿಎ, ಸಿಎಸ್, ಎಸಿಸಿಎ, ಸಿಎಮ್‌ಎಸ್ ಹಾಗೂ ಯುಪಿಎಸ್ಸಿ ಕೋರ್ಸಗಳಿಗೆ ತರಬೇತಿಯ ಜೊತೆಗೆ ದೇಶದ ವಿವಿಧ ಕಾನೂನು ವಿವಿಗಳಿಗೆ  ಪ್ರವೇಶ ಪಡೆಯಲು ಬಯಸುವ ಆಕಾಂಕ್ಷಿಗಳಿಗಿರುವ ಅರ್ಹತಾ ಪರೀಕ್ಷೆ – ಕ್ಲ್ಯಾಟ್‌ಗೆ ತರಬೇತಿ ನೀಡಲಾಗುತ್ತದೆ. 

    ಪತ್ರಿಕಾಗೋಷ್ಠಿಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ಪ್ರಾಚಾರ್ಯ ಡಾ. ಕುರಿಯನ್ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025

    ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

    18/12/2025

    ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.