ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಗಾಂಧಿ ಮೈದಾನದಲ್ಲಿ ನಡೆದ, ಕುಂದಾಪುರ ವಲಯ ಮಟ್ಟದ 17ರ ವಯೋಮಾನದ ಕ್ರಿಕೆಟ್ ಆಯ್ಕೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಿದ್ಯಾರ್ಥಿಗಳಾದ, ಆರ್ಯನ್ ಎ. ಖಾರ್ವಿ, ದಿಗಂತ ಖಾರ್ವಿ, ಶ್ರೇಷ್ಠ ಪಿ. ಖಾರ್ವಿ, ಸೌರೀಶ್ ಆರ್. ಖಾರ್ವಿ ಇವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.