Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಾಲಿನ ದರ ಹೆಚ್ಚಳದಿಂದ ಹೈನುಗಾರರಿಗೆ ಅನುಕೂಲ: ಎಸ್. ಪ್ರಕಾಶ್ಚಂದ್ರ ಶೆಟ್ಟಿ
    ಊರ್ಮನೆ ಸಮಾಚಾರ

    ಹಾಲಿನ ದರ ಹೆಚ್ಚಳದಿಂದ ಹೈನುಗಾರರಿಗೆ ಅನುಕೂಲ: ಎಸ್. ಪ್ರಕಾಶ್ಚಂದ್ರ ಶೆಟ್ಟಿ

    Updated:15/09/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಪಶು ಆಹಾರ ಉತ್ಪನ್ನಗಳ ದರ ದಿನದಿಂದ ದಿನಕ್ಕೆ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಹೈನುಗಾರರಿಗೆ ತೊಂದರೆಯಾಗುತ್ತಿದೆ, ಇದೀಗ ರಾಜ್ಯ ಸರ್ಕಾರ ಹಾಲಿನ ದರವನ್ನು ಸುಮಾರು 2ರೂ. ಗೆ ಹೆಚ್ಚಳ ಮಾಡುವ ಬಗ್ಗೆ ಚಿಂತನೆ ನಡೆಸಿರುವುದು, ಉತ್ತಮ ಬೆಳವಣೆಗೆಯಾಗಿದ್ದು, ಇದು ಹೈನುಗಾರರಿಗೆ ವರದಾನವಾಗಲಿದೆ ಎಂದು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಹಾಗೂ ಮೇಕೋಡು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು.

    Click Here

    Call us

    Click Here

    ಮೇಕೊಡು ಶ್ರೀ ದುರ್ಗಾಪರಮೇಶ್ವರಿ ದೇವಳದ ಸಭಾಭವನದಲ್ಲಿ ಶನಿವಾರ ನಡೆದ ಮೇಕೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ, ಕರು ಸಾಕಾಣಿಕೆ ಯೋಜನೆಯ ನೋಂದಾಯಿತ ಕರುಗಳ ಪ್ರದರ್ಶನ ಹಾಗೂ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ನಮ್ಮ ಹಾಲು ಉತ್ಪಾದಕರ ಸಹಕಾರಿ ಸಂಘವು ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದು ಸುಮಾರು 70ಲಕ್ಷ ಸ್ಥಿರಾಸ್ತಿಯನ್ನು, ಸುಮಾರು 20ಲಕ್ಷ ರೂ. ನಿರಖು ಠೇವಣೆಯನ್ನು ಹೊಂದಿದೆ. ಕಳೆದ ಸಾಲಿನಲ್ಲಿ ಹಾಲು ಉತ್ಪಾದನೆಗಾಗಿ ಸುಮಾರು 2.28ಕೋಟಿ ರೂ. ಒಕ್ಕೂಟದಿಂದ ಸಂದಾಯವಾಗಿದೆ. ಸುಮಾರು 40ಲಕ್ಷ ರೂ. ಮೌಲ್ಯದ ಕಟ್ಟಡವನ್ನು ಹೊಂದಿದ್ದು, ಕಳೆದ ಸಾಲಿನಲ್ಲಿ 8.50 ಲಕ್ಷ ರೂ. ನಿವ್ವಳ ಲಾಭಗಳಿಸಿದೆ. ಅದರಲ್ಲಿ ಸದಸ್ಯರಿಗೆ ಶೇ: 65ರಷ್ಟು ಬೋನಸ್ ನೀಡಲಾಗಿದೆ. ಕಳೆದ ಬಾರಿ ಒಕ್ಕೂಟದಿಂದ ನಾಲ್ಕು ಪ್ರಶಸ್ತಿಗಳು ನಮ್ಮ ಸಂಘಕ್ಕೆ ಲಭಿಸಿದೆ ಎಂದರು.

    ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಉಪ ವ್ಯವಸ್ಥಾಪಕ ಮಾಧವ ಐತಾಳ್ ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ಒಕ್ಕೂಟದ ವ್ಯಾಪ್ತಿಯಲ್ಲಿ ಹಾಲು ಉತ್ಪಾದನೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ, ಇಲ್ಲಿ ಸುಮಾರು 5ಲಕ್ಷ ಲೀ. ಹಾಲಿಗೆ ಬೇಡಿಕೆಯಿದ್ದು, ಕೇವಲ 3ಲಕ್ಷ ಲೀ. ಹಾಲು ಮಾತ್ರ ಉತ್ಪಾದನೆಯಾಗುತ್ತದೆ, ಉಳಿದ ಹಾಲನ್ನು ಬೇರೆ ಒಕ್ಕೂಟಗಳಿಂದ ಖರೀದಿಸಲಾಗುತ್ತದೆ ಎಂದರು.

    ಹೈನುಗಾರಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಅಧಿಕ ಹಾಲು ಒಕ್ಕೂಟದ ವತಿಯಿಂದ ಕರುಗಳ ಸಾಕಾಣಿಕೆ ಯೋಜನೆ, ಜಾನುವಾರುಗಳಿಗೆ ಇನ್ಸೂರೆನ್ಸ್, ಮಿನಿ ಡೈರಿ ಯೋಜನೆ, ಹುಲ್ಲು ಬೆಳೆಯಲು ಯೋಜನೆ, ಅಲ್ಲದೇ ಸಬ್ಸಿಡಿ ದರದಲ್ಲಿ ಹಾಲು ಕರೆಯುವ ಯಂತ್ರ ಖರೀದಿ ಹಾಗೂ ಸದಸ್ಯರು ಆಕಸ್ಮಿಕವಾಗಿ ಮರಣ ಹೊಂದಿದರೆ ರೈತ ಕಲ್ಯಾಣ ನಿಧಿಯಿಂದ ಅವರ ಕುಟುಂಬಕ್ಕೆ ಸುಮಾರು 50 ಸಾವಿರ ರೂ. ಅನುದಾನ ನೀಡುವುದು ಸೇರಿದಂತೆ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದೆ, ಸದಸ್ಯರು ಗರಿಷ್ಠ ಪ್ರಮಾಣದಲ್ಲಿ ಇದರ ಲಾಭವನ್ನು ಪಡೆಯುವ ಮೂಲಕ ಹಾಲು ಉತ್ಪಾದನೆಯನ್ನು ಹೆಚ್ಚಿಸಬೇಕು ಎಂದರು.

    Click here

    Click here

    Click here

    Call us

    Call us

    ಹೇರೂರು ಗ್ರಾ.ಪಂ. ಅಧ್ಯಕ್ಷೆ ಇಂದಿರಾ ಶೆಟ್ಟಿ ಕರುಗಳ ಪ್ರದರ್ಶನವನ್ನು ಉದ್ಘಾಟಿಸಿದರು. ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ ಪೂಜಾರಿ, ಗ್ರಾ.ಪಂ. ಸದಸ್ಯರಾದ ಸತೀಶ ಶೆಟ್ಟಿ, ಬಾಬು ಆಚಾರ್ಯ, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಚಂದ್ರಶೀಲ ಶೆಟ್ಟಿ, ದಕ ಒಕ್ಕೂಟದ ಪಶು ವೈದ್ಯೆ ಡಾ. ಶೃದ್ಧಾ ಖಾರ್ವಿ, ಒಕ್ಕೂಟದ ವಿಸ್ತರಣಾಕಾರಿ ರಾಜಾರಾಮ, ಮೇಕೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷ ಸಂತೋಷ ಗೌಡ, ನಿರ್ದೇಶಕರಾದ ಗೋಪಾಲ ಶೆಟ್ಟಿ, ಎನ್. ಪದ್ಮನಾಭ ಅಡಿಗ, ವೈ. ಜಯರಾಮ ಹೆಬ್ಬಾರ್, ವೈ. ಗೋವಿಂದ ಹೆಬ್ಬಾರ್, ಎಂ.ಎನ್. ಬಾಬು ಪೂಜಾರಿ, ಭಾಸ್ಕರ ದೇವಾಡಿಗ, ಉಮೇಶ ಪೂಜಾರಿ, ಕುಷ್ಟು ಯರೊಕೋಣೆ, ಲೀಲಾವತಿ ಪೂಜಾರಿ, ಸುಶೀಲ ಗಾಣಿಗ, ಗೌರಿ ಬಿ. ಉಪಸ್ಥಿತರಿದ್ದರು.

    ಈ ಸಂದರ್ಭ ಕಳೆದ ವರ್ಷ ಒಂದು ಲಕ್ಷ ಲೀ. ಗೂ ಅಧಿಕ ಹಾಲು ಪೂರೈಸಿದ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹಾಗೂ 50 ಸಾವಿರ ಲೀ. ಗೂ ಅಧಿಕ ಹಾಲು ಪೂರೈಸಿದ ಸಂಘದ ಉಪಾಧ್ಯಕ್ಷ ಸಂತೋಷ ಗೌಡ ಅವರನ್ನು ಸನ್ಮಾನಿಸಲಾಯಿತು. ಅತೀ ಹೆಚ್ಚು ಹಾಲು ಪೂರೈಸಿದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

    ನೇತ್ರಾವತಿ ಪ್ರಾರ್ಥಿಸಿದರು, ಸಂಘದ ಕಾರ್ಯದರ್ಶಿ ಕುಶಲ ಗಾಣಿಗ ಸ್ವಾಗತಿಸಿದರು, ದಿನೇಶ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ

    07/07/2026

    ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ

    07/07/2026

    ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    07/07/2026
    Leave A Reply Cancel Reply

    18 + 7 =

    Call us

    Click Here

    Call us

    Call us

    Call us
    Highest Viewed Recently
    • ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ
    • ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ
    • ಜಾನುವಾರುಗಳ ಸಂಖ್ಯೆ ಗಣನೀಯ ಇಳಿಕೆ ಆಗಿರುವುದು ಆತಂಕ ಪಡುವ ವಿಚಾರ: ಶಾಸಕ ಗುರುರಾಜ್‌ ಗಂಟಿಹೊಳೆ
    • ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ
    • ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.