Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಹೊಂಗಿರಣ ತ್ರೈಮಾಸಿಕ ಪತ್ರಿಕೆ ಬಿಡುಗಡೆ ಸಮಾರಂಭ
    Uncategorized

    ಆಳ್ವಾಸ್ ಹೊಂಗಿರಣ ತ್ರೈಮಾಸಿಕ ಪತ್ರಿಕೆ ಬಿಡುಗಡೆ ಸಮಾರಂಭ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದರೆ:
    ’ಪುಟವಿಟ್ಟ ಚಿನ್ನದಂತಿರುವ ಆಳ್ವಾಸ್ ಸಂಸ್ಥೆಯ ಮಾಹಿತಿಯನ್ನು ಹೊತ್ತು ತರುವ ’ಆಳ್ವಾಸ್ ಹೊಂಗಿರಣವು ಪ್ರಕಾಶಮಾನವಾಗಲಿ’ ಎಂದು ಉಜಿರೆಯ ಎಸ್‌ಡಿಎಂ ಕಾಲೇಜು (ಸ್ವಾಯತ್ತ) ಪ್ರಾಂಶುಪಾಲ ಡಾ.ಬಿ.ಎ.ಕುಮಾರಹೆಗ್ಡೆ  ಹೇಳಿದರು.

    Click Here

    Call us

    Click Here

    ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಗುರುವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿಸಿದ ಆಳ್ವಾಸ್ ಪದವಿ ಪೂರ್ವ ಕಾಲೇಜು ಹಾಗೂ ಶಾಲೆಗಳ ತ್ರೈಮಾಸಿಕ ಸಂಚಿಕೆ ’ಆಳ್ವಾಸ್ ಹೊಂಗಿರಣ’ವನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಮೂರು ದಶಕಗಳಿಗೂ ಅಧಿಕ ಯಶೋಗಾಥೆ ಹೊಂದಿದ್ದು, ಇಲ್ಲಿನ ಮಾಹಿತಿಯನ್ನು ನೀಡುವ ಪತ್ರಿಕೆಯನ್ನು ನಾನು ಅತ್ಯಂತ ಸಂತಸದಿಂದ ಬಿಡುಗಡೆ ಮಾಡುತ್ತಿದ್ದೇನೆ ಎಂದರು.

    ಹಾಲನ್ನು ’ಕ್ಷೀರ’ ಎನ್ನುವುದು ಉತ್ಪ್ರೇಕ್ಷೆಯಲ್ಲ. ಅಂತೆಯೇ ಆಳ್ವಾಸ್ ಅನ್ನು ನೀವು ಎಷ್ಟು ಬಣ್ಣಿಸಿದರೂ, ಅದು ವಿಶೇಷವಲ್ಲ. ಆಳ್ವಾಸ್ ’ಕ್ಷೀರ ಸಾಗರ’. ಆಳ್ವಾಸ್ ಆವರಣವು ನಮ್ಮೆಲ್ಲರಿಗೂ ಎರಡನೇ ಮನೆ. ಈ ಭಾವನೆ ಮೂಡಿಸಿದ ಡಾ.ಎಂ. ಮೋಹನ ಆಳ್ವರು, ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದಂತೆ ’ಮಹಾನ್ ಆಳ್ವರು’ ಎಂದು ಸಂತಸ ವ್ಯಕ್ತಪಡಿಸಿದರು. 

    ಶಿಕ್ಷಣ, ಸಂಸ್ಕೃತಿ, ಕಲೆ, ಕ್ರೀಡೆ  ಸೇರಿದಂತೆ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ  ಸವಾಂಗೀಣ ಚಟುವಟಿಕೆಗಳನ್ನು ಅರ್ಥಪೂರ್ಣವಾಗಿ ಆಳ್ವಾಸ್ ಸಂಘಟಿಸುತ್ತಾ ಬಂದಿದೆ ಎಂದು ಶ್ಲಾಘಿಸಿದರು. 

    Click here

    Click here

    Click here

    Click Here

    Call us

    Call us

    ಆಳ್ವಾಸ್ ಸಂಸ್ಥೆಯು ’ಮಿನಿ ಭಾರತ. ಇಲ್ಲಿನ ವಿರಾಸತ್, ನುಡಿಸಿರಿ, ಸಮ್ಮೇಳನ, ಕನ್ನಡ ಶಾಲೆ, ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡಾ ಚಟುವಟಿಕೆಗಳು ಎಲ್ಲವೂ ಅನನ್ಯ ಎಂದು ಕೊಂಡಾಡಿದರು.

    ಡಾ ಎಂ. ಮೋಹನ ಆಳ್ವ ಅವರ ಈ ಅಭೂತಪೂರ್ವ ಕಾರ್ಯವೈಖರಿಯು ಅವರ ದೂರದೃಷ್ಟಿಗೆ ಹಿಡಿದ ಕನ್ನಡಿ. ಇವರ ನಿಷ್ಕಲ್ಮಶ ಪ್ರೀತಿ, ನಗು, ಮಗು ಮನಸ್ಸು, ಮಾನವೀಯತೆ, ಸಾಮಾಜಿಕ ಕಳಕಳಿಯ ಫಲಶ್ರುತಿಯೇ ’ಆಳ್ವಾಸ್‍ ಮೂರು ದಶಕಗಳಿಂದ ನಾನು ಹತ್ತಿರದಿಂದ ಕಂಡಿದ್ದೇನೆ ಎಂದರು.  

    ಡಿವಿಜಿ ಮಾತಿನಂತೆ ಎಲ್ಲರೊಳು ಒಂದಾಗುವ ಆಳ್ವರು, ಅಯಸ್ಕಾಂತೀಯ ವ್ಯಕ್ತಿತ್ವದವರು. ತನ್ನೆಡೆಗೆ ಎಲ್ಲರನ್ನೂ ಸೆಳೆಯುತ್ತಿದ್ದಾರೆ ಎಂದರು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ಪತ್ರಿಕೆಯ ಸಮೂಹ ಸಂಪಾದಕ ಡಾ. ಎಂ. ಮೋಹನ ಆಳ್ವ ಮಾತನಾಡಿ, ನನ್ನ ಬದುಕು ಜನಪದರ ದಾಖಲೆಗಳಿಲ್ಲದ ಮೌಖಿಕ ಚರಿತ್ರೆಯ ಹಾಗೆ ನಡೆದು ಬಂದಿದೆ. ಆದರೆ, ಬದುಕಿನಲ್ಲಿ ಕೆಲಸದಷ್ಟೇ ದಾಖಲೆಗಳೂ ಮುಖ್ಯ. ಈ ನಿಟ್ಟಿನಲ್ಲಿ ಮೊದಲ ಬಾರಿಗೆ ’ಆಳ್ವಾಸ್ ಹೊಂಗಿರಣ’ದ ಮೂಲಕ ನಮ್ಮ ಶಾಲೆಗಳ ಹಾಗೂ ಪದವಿಪೂರ್ವ ಕಾಲೇಜುಗಳ ಮಾಹಿತಿಯನ್ನು ದಾಖಲಿಸುವ ಕಾರ್ಯಕ್ಕೆ ಹೆಜ್ಜೆ ಇಟ್ಟಿದ್ದೇವೆ. ಇದರ ಯಶಸ್ಸು ಪ್ರತಿಷ್ಠಾನದ ಕಾರ್ಯಗಳ ದಾಖಲೀಕರಣದ ವರೆಗೆ ಪಸರಿಸಲಿ’ ಎಂದು ಆಶಿಸಿದರು.

    ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಸಂಸ್ಥೆಗಳ ಪ್ರತಿ ಕಾರ್ಯವನ್ನು ದಾಖಲೀಕರಣ ಮಾಡುತ್ತಾರೆ. ಅದನ್ನು ಕಂಡು ನಾನು ಪ್ರೇರೇಪಿತನಾಗಿದ್ದೇನೆ. ಸಂಸ್ಥೆಯ ಮುಂದಿನ ಎಲ್ಲಾ ಕಾರ್ಯ ಚಟುವಟಿಕೆಗಳನ್ನು ದಾಖಲೆ ಮಾಡಲು ಪ್ರಯತ್ನಿಸುತ್ತಿದ್ದೇನೆ ಎಂದ ಅವರು, ಎಲ್ಲ ವಿದ್ಯಾರ್ಥಿಗಳು  ತಮ್ಮ ಸಾಧನೆಗಳ ವಿವರಗಳನ್ನು ಸಾಧ್ಯವಾದ? ದಾಖಲೆ ಮಾಡಿಟ್ಟುಕೊಳ್ಳುವುದು ಬಹಳ ಉತ್ತಮ ಎಂದರು.

    ದಾಖಲೆಯು ಭೌತಿಕ ಹಾಗೂ ಬೌದ್ದಿಕವಾಗಿ ಇರಬೇಕು. ಈ ದಿಶೆಯಲ್ಲಿ ’ಆಳ್ವಾಸ್ ಹೊಂಗಿರಣ’ವು ಎಲ್ಲರಿಗೂ ದಾರಿದೀಪ ಆಗಲಿ ಎಂದು ಹಾರೈಸಿದರು.

    ಆಳ್ವಾಸ್ ಶಿಕ್ಷಣ ಪ್ರತಿ಼್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಆಳ್ವಾಸ್ ಕಾಲೇಜು (ಸ್ವಾಯತ್ತ) ಪ್ರಾಂಶುಪಾಲ ಡಾ.ಕುರಿಯನ್, ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಮೊಹಮ್ಮದ್ ಸದಾಕತ್ , ಉಪಪ್ರಾಂಶುಪಾಲೆ ಪ್ರೊ. ಝಾನ್ಸಿ ಪಿ. ಎನ್. ಇದ್ದರು.

    ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲ್ಲೂಕು ಘಟಕದ ಅಧ್ಯಕ್ಷ, ಆಳ್ವಾಸ್ ಪ.ಪೂ ಕಾಲೇಜಿನ ಕಲಾ ವಿಭಾಗದ ಡೀನ್ ಕೆ. ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಆಳ್ವಾಸ್ ಸಾಂಸ್ಕೃತಿಕ ತಂಡದ ಸದಸ್ಯರು ಪ್ರಾರ್ಥನೆ ಹಾಡಿದರು.  

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026
    Leave A Reply Cancel Reply

    fifteen + eight =

    Call us

    Click Here

    Call us

    Call us

    Call us
    Highest Viewed Recently
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.