Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಟಿಪ್ಪು ಜಯಂತಿಗೆ ಮುಂದುವರಿದ ವಿರೋಧ: ಕುಂದಾಪುರ, ಬೈಂದೂರಿನಲ್ಲಿ ಪ್ರತಿಭಟನೆ, ರಸ್ತೆ ತಡೆ
    ಊರ್ಮನೆ ಸಮಾಚಾರ

    ಟಿಪ್ಪು ಜಯಂತಿಗೆ ಮುಂದುವರಿದ ವಿರೋಧ: ಕುಂದಾಪುರ, ಬೈಂದೂರಿನಲ್ಲಿ ಪ್ರತಿಭಟನೆ, ರಸ್ತೆ ತಡೆ

    Updated:13/11/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿ ಹಾಗೂ ಮಡಿಕೇರಿಲ್ಲಿ ನಡೆದ ಗಲಭೆ ಪ್ರಕರಣವನ್ನು ನ್ಯಾಯಾಂಗ ತನಿಕೆಗೆ ಒಪ್ಪಿಸಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಇಂದು ಕುಂದಾಪುರದ ಶಾಸ್ತ್ರೀ ವೃತ್ತದ ಬಳಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದರು. ಪ್ರತಿಭಟನಾಕಾರನ್ನುದ್ದೇಶಿಸಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಜನಪರ ಕಾರ್ಯಗಳನ್ನು ಮಾಡಿ ಜನರ ವಿಶ್ವಾಸ ಗಳಿಸಬೇಕಾಗಿದ್ದ ಸರಕಾರ ಜನವಿರೋಧಿ ನಿಲುವನ್ನು ತಾಳುತ್ತಿರುವುದು ದುರದೃಷ್ಟಕರ. ಇತ್ತಿಚಿಗೆ ರಾಜ್ಯದಲ್ಲಿ ನಡೆದ ಸಾವು-ನೋವುಗಳನ್ನು ಗಮನಿಸಿದರೇ ಸರಕಾರ ಬೇಜವಾಬ್ದಾರಿ ನಡುವಳಿಕೆಯ ದರ್ಶನವಾಗುತ್ತದೆ. ಇದಕ್ಕಿಂತ ದುರಂತ ಇನ್ನೊಂದಿಲ್ಲ. ಬಿಜೆಪಿಯ ಸರಕಾರವಿರುವಾಗ ಯಾವುದೇ ಕೋಮು ಸಂಘರ್ಷಗಳಿಗೆ ಅವಕಾಶ ನೀಡದೇ ಜನರು ಅನ್ಯೂನ್ಯತೆಯಿಂದ ಬದುಕುವಂತೆ ಮಾಡಿತ್ತು, ಸಮಾಜದ ಎಲ್ಲಾ ಧರ್ಮದ ಜನರೂ ಒಂದೇ ಎಂಬ ಭಾವನೆಯಿಂದ ಆಡಳಿತ ನಡೆಸಿತ್ತು. ಸಿದ್ದರಾಮಯ್ಯನವರ ಸರಕಾರ ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆದು ಆಳಿ ಸಮಾಜದ ಸಂಘರ್ಷಗಳಿಗೆ ಎಡೆ ಮಾಡಿಕೊಡುತ್ತಿದೆ ಎಂದರು.

    Click Here

    Call us

    Click Here

    ಇತ್ತಿಚಿನ ಘಟನೆಗಳನ್ನು ಅವಲೋಕಿಸಿದಾಗ ರಾಜ್ಯ ಸರಕಾರ ಯಾವುದೋ ಅಜೆಂಡಾಕ್ಕೆ ತಲೆಭಾಗಿ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಡುವಂತೆ ಮಾಡಿದೆ. ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆಯ ಹೆಸರಿನಲ್ಲಿ ರಾಜ್ಯದ ಜನರನ್ನು ಗೊಂದಲಕ್ಕೆ ನೂಕಿರುವುದಲ್ಲದೇ, ಅಶಾಂತಿಯನ್ನೆಬ್ಬಿಸಿದೆ. ಇದಕ್ಕೆ ರಾಜ್ಯ ಸರಕಾರವೇ ನೇರ ಹೊಣೆ ಎಂದವರು ಆರೋಪಿಸಿದರು. (ಕುಂದಾಪ್ರ ಡಾಟ್ ಕಾಂ ಸುದ್ದಿ)

    ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೆಳ್ವೆ ವಸಂತಕುಮಾರ್ ಶೆಟ್ಟಿ, ಕುಂದಾಪುರ ಕ್ಷೇತ್ರಾಧ್ಯಕ್ಷ ರಾಜೇಶ್ ಕಾವೇರಿ, ರಾಜ್ಯ ಮೀನುಗಾರಿಕಾ ಪ್ರಕೋಷ್ಠದ ಅಧ್ಯಕ್ಷ ಕಿಶೋರ್ ಕುಮಾರ್, ತಾ.ಪಂ. ಅಧ್ಯಕ್ಷ ಭಾಸ್ಕರ ಬಿಲ್ಲವ, ಜಿ.ಪಂ ಸದಸ್ಯ ಗಣಪತಿ ಟಿ. ಶ್ರೀಯಾನ್, ಸುಬ್ರಹ್ಮಣ್ಯ ಹೊಳ್ಳು, ಅರವಿಂದ ಕೋಟೇಶ್ವರ ಸೇರಿದಂತೆ ವಿ.ಎಚ್.ಪಿಯ ಪ್ರಮುಖರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

    ಸುಮಾರು ಅರ್ಧಗಂಟೆಗೂ ಅಧಿಕ ಕಾಲ ಹೆದ್ದಾರಿ ತಡೆ ನಡೆದಿದ್ದರಿಂದ ವಾಹನಗಳು ಸಾಲುಗಟ್ಟಿ ನಿಂತಿರುವುದು ಕಂಡುಬಂತು. ಪ್ರತಿಭಟನೆಯ ಹಿನ್ನಲೆಯಲ್ಲಿ ಬಿಗಿ ಬಂದೋವಸ್ಥ್ ಏರ್ಪಡಿಸಲಾಗಿತ್ತು.

    ಬೈಂದೂರು ಶಾಸಕರಿಗೂ ತಟ್ಟಿದ ಪ್ರತಿಭಟನೆಯ ಬಿಸಿ:
    ಕುಂದಾಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾವು ಬೈಂದೂರು ಶಾಸಕ ಗೋಪಾಲ ಪೂಜಾರಿಯವರಿಗೂ ತಟ್ಟಿತ್ತು. ಕಾರ್ಯನಿಮಿತ್ತ ರಾಷ್ಟ್ರೀಯ ಹೆದ್ದಾರಿಯ ಮೂಲಕ ಬೈಂದೂರು ತೆರಳಬೇಕಿದ್ದ ಶಾಸಕರ ವಾಹನವೂ ಗಾಂಧಿ ಮೈದಾನದ ಬಳಿ ಇತರ ವಾಹನಗಳೊಂದಿಗೆ ಜಾಮ್ ಆಗಿತ್ತು. ಸುಮಾರು 10ನಿಮಿಷಕ್ಕೂ ಅಧಿಕ ಕಾಲ ವಿಧಿ ಇಲ್ಲದೇ ವಾಹನವನ್ನು ಅಲ್ಲಿಯೇ ನಿಲ್ಲಿಸಬೇಕಾಯಿತು. ಈ ಮಧ್ಯೆ ಪೊಲೀಸರು ಸ್ಥಳಕ್ಕಾಗಮಿಸಿ ಶಾಸಕರ ವಾಹನಕ್ಕೆ ತೆರಳಲು ಅನುವು ಮಾಡಿಕೊಟ್ಟರು. ಹಿಂದೂ ಸಂಘಟನೆಯ ಕಾರ್ಯಕರ್ತರು ಇದನ್ನು ಪ್ರತಿಭಟಿಸಲು ಮುಂದಾದಾಗ ವಾಹನವನ್ನು ಉಡುಪಿಯ ಕಡೆಗೆ ತಿರುಗಿಸಲಾಯಿತು. (ಕುಂದಾಪ್ರ ಡಾಟ್ ಕಾಂ ಸುದ್ದಿ)

    Click here

    Click here

    Click here

    Call us

    Call us

    ಬೈಂದೂರಿನಲ್ಲಿಯೂ ಪ್ರತಿಭಟನೆ, ರಸ್ತೆತಡೆ:
    ಬೈಂದೂರಿನಲ್ಲಿಯೂ ಅರ್ಧ ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿ ರಸ್ತೆ ತಡೆ ನಡೆಸಲಾಯಿತು. ಬಹುಸಂಖ್ಯಾತರ ಭಾವನೆಗೆ ಧಕ್ಕೆ ತರುವ ಹೇಳಿಕೆಗಳನ್ನು ನೀಡುತ್ತಿರುವ ಸಾಹಿತಿ ಗಿರೀಶ್ ಕಾರ್ನಾಡ್ ಅವರ ಭಾವಚಿತ್ರವನ್ನು ಸುಟ್ಟು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ದಿನೇ ದಿನೇ ಶಾಂತಿ ಕದಡುವ ಕೆಲಸವಾಗುತ್ತಿದೆ. ಆದರೆ ಸರಕಾರ ಯಾವುದೇ ಕ್ರಮ ಕೈಗೊಳ್ಳದೇ ಸುಮ್ಮನೆ ಕುಳಿತಿದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಜಿಪಂ ಸದಸ್ಯ ಕೆ. ಬಾಬು ಶೆಟ್ಟಿ, ತಾಪಂ ಸದಸ್ಯ ಪ್ರಸನ್ನಕುಮಾರ್, ಬೈಂದೂರು ವಿಹಿಪಂ ಅಧ್ಯಕ್ಷ ಬಾಲಕೃಷ್ಣ ಬೈಂದೂರು, ಕೊಲ್ಲೂರು ದೇವಳದ ಧರ್ಮದರ್ಶಿ ಜಯಾನಂದ ಹೋಬಳಿದಾರ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಿ. ಎಸ್. ಸುರೇಶ್ ಶೆಟ್ಟಿ, ಧರ್ಮಜಾಗೃತಿ ವೇದಿಕೆಯ ಶ್ರೀಧರ ಬಿಜೂರ್, ಪಡುವರಿ ಗ್ರಾಪಂ ಉಪಾಧ್ಯಕ್ಷ ಸದಾಶಿವ ಡಿ., ಮಾಜಿ ಅಧ್ಯಕ್ಷ ಸುರೇಶ ಬಟವಾಡಿ, ಶರತ್ ಶೆಟ್ಟಿ
    ಮೊದಲಾದವರು ಉಪಸ್ಥಿತರಿದ್ದರು. ರಸ್ತೆ ತಡೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಬಂಧಿಸಿ ಕೊನೆಗೆ ಬಿಡುಗಡೆಗೊಳಿಸಲಾಯಿತು.

    _MG_2430 _MG_2432 _MG_2434 _MG_2436 _MG_2438 _MG_2444 _MG_2450 _MG_2454 _MG_2457 _MG_2460_MG_2474_MG_2491_MG_2488_MG_2486_MG_2483_MG_2482_MG_2511_MG_2512_MG_2513_MG_2516_MG_2520_MG_2529_MG_2531_MG_2533_MG_2538_MG_2539_MG_2542_MG_2543news byndoor protestnews byndoor protest1news byndoor protest2news byndoor protest3

    Byndoor kundapura Protest
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.