ಹೆಮ್ಮಾಡಿ ಜನತಾ ಪ.ಪೂ ಕಾಲೇಜಿನಲ್ಲಿ ಜಲಜಾಗ್ರತಿ ಕಾರ್ಯಕ್ರಮ

Call us

Call us

Call us

ಕುಂದಾಪ್ರ ಡಾಟ್‍ ಕಾಂ ಸುದ್ದಿ.
ಕುಂದಾಪುರ:
ರೋಟರಿ ಕ್ಲಬ್‌ ಗಂಗೊಳ್ಳಿ ಆಯೋಜನೆಯಲ್ಲಿ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಜಲಜಾಗ್ರತಿ ಕಾರ್ಯಕ್ರಮ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಗಂಗೊಳ್ಳಿ ಅಧ್ಯಕ್ಷೆ ಚಂದ್ರಕಲಾ ಎಸ್. ತಾಂಡೇಲ್ ವಹಿಸಿದ್ದರು.

ರೋಟರಿ ಜಿಲ್ಲಾ ಗವರ್ನರ್ ಸಿ.ಎ. ದೇವಾನಂದ್ ಮುಖ್ಯ ಅತಿಥಿಯಾಗಿ ಆಗಮಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ನೆಲ-ಜಲ-ಪರಿಸರ ಜಿಲ್ಲಾ ಸಂಯೋಜಕರಾದ ಶಿವಾನಂದ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಜ್ಯ ಸಂಪನ್ಮೂಲ ವ್ಯಕ್ತಿ ರತ್ನ ಜೋಸೆಫ್ ಜಿ.ಎಮ್ ರೆಬೆಲ್ಲೊ ಅವರು ಮಾತನಾಡಿ, ಜಲಜಾಗ್ರತಿಯ ಕುರಿತಾಗಿ ಅರಿವು ಮೂಡಿಸಿದರು. ಮಳೆಕೊಯ್ಲು,ಜಲ ಮರುಪೂರಣ, ಜಲಕ್ಷಾಮ, ದ್ರವ ತ್ಯಾಜ್ಯ ಈ ಪ್ರಮುಖ ವಿಚಾರಗಳ ಕುರಿತು ಮಾಹಿತಿಯನ್ನು ನೀಡಿದರು.

Call us

Click Here

ಕಾಲೇಜಿನ ಉಪ ಪ್ರಾಂಶುಪಾಲರಾದ ರಮೇಶ ಪೂಜಾರಿ, ವಿದ್ಯಾರ್ಥಿಗಳು, ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿ ರಂಜಿತಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Leave a Reply