ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಅಂತರಾಷ್ಟ್ರೀಯ ಬೀಚ್ ಸ್ವಚ್ಛತಾ ದಿನಾಚರಣೆಯ ಅಂಗವಾಗಿ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆ, ಗ್ರಾಮ ಪಂಚಾಯತ್ ತ್ರಾಸಿ ಹಾಗೂ ಲಯನ್ಸ್ ಕ್ಲಬ್ ತ್ರಾಸಿ-ಗಂಗೊಳ್ಳಿ, ಖಾರ್ವಿ ಆನ್ಲೈನ್.ಕಾಮ್ ಜಂಟಿ ಆಶ್ರಯದಲ್ಲಿ ತ್ರಾಸಿ-ಮರವಂತೆ ಬೀಚ್ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು.
ಕರಾವಳಿ ಕಾವಲು ಪೊಲೀಸ್ ಠಾಣೆಯ ಉಪನಿರೀಕ್ಷಕ ಸುಬ್ರಹ್ಮಣ್ಯ ಹರ್ಕೇರಿ ಮಾತನಾಡಿ, ಸಮುದ್ರ ಜೈವಿಕ ವೈವಿಧ್ಯತೆಯ ತಾಣಗಳ ಆಗರವಾಗಿದ್ದು ಅದನ್ನು ಸಂರಕ್ಷಿಸುವ ಅಗತ್ಯ ಇದೆ. ಈ ನಿಟ್ಟಿನಲ್ಲಿ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆ ವತಿಯಿಂದ ನಿಯಮಿತವಾಗಿ ಸ್ವಚ್ಛತೆ ಮತ್ತು ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ನ ಅಧ್ಯಕ್ಷ ವಿವೇಕಾನಂದ ಪೂಜಾರಿ ಹಾಗೂ ಪದಾಧಿಕಾರಿಗಳು, ಕರಾವಳಿ ಕಾವಲು ಪೊಲೀಸ್ ಠಾಣೆಯ ಎಎಸ್ಐ ಭಾಸ್ಕರ್ ಮತ್ತು ಸಿಬ್ಬಂದಿಗಳು, ಕೆ.ಎನ್.ಡಿ ಸಿಬ್ಬಂದಿಗಳು ಹಾಗೂ ತ್ರಾಸಿ ಎಸ್ಎಲ್ಆರ್ಎಂ ಘಟಕದ ಸಿಬ್ಬಂದಿಗಳು ಉಪಸ್ಥಿತರಿದ್ದರು.