ಛಾಯಾಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಛಾಯಾಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘ ನಿ. ಕುಂದಾಪುರ ಇದರ 2023-24 ನೇ ಸಾಲಿನ ಹತ್ತನೆ ವರ್ಷದ ವಾರ್ಷಿಕ ಮಹಾಸಭೆಯು ಮಂಗಳವಾರದಂದು ಸಂಘದ ಸಹಕಾರಿ ಕಛೇರಿಯಲ್ಲಿ ಸೊಸೈಟಿ ಅಧ್ಯಕ್ಷರಾದ ಗಿರೀಶ್ ಜಿ. ಕೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

Call us

Click Here

ಈ ಸಂದರ್ಭದಲ್ಲಿ ಎಸ್‌ಕೆಪಿಎ ಕುಂದಾಪುರ – ಬೈಂದೂರು ವಲಯದ ಅಧ್ಯಕ್ಷರಾದ ದಿವಾಕರ್ ಶೆಟ್ಟಿ ಉಪ್ಪುಂದ, ಪತ್ರಕರ್ತ ಸಂಘದ ಅಧ್ಯಕ್ಷರಾದ ನಾಗರಾಜ್ ರಾಯಪ್ಪನಮಠ, ಸೊಸೈಟಿ ಉಪಾಧ್ಯಕ್ಷರಾದ ಗಣೇಶ್ ಪೂಜಾರಿ, ಎಸ್‌ಕೆಪಿಎ ಕುಂದಾಪುರ – ಬೈಂದೂರು ವಲಯ ಪ್ರಧಾನ ಕಾರ್ಯದರ್ಶಿ ದಿನೇಶ್ ರಾಯಪ್ಪನ‌ ಮಠ ಹಾಗೂ ಸೊಸೈಟಿಯ ನಿರ್ದೇಶಕರುಗಳು, ಸದಸ್ಯರು ಉಪಸ್ಥಿತರಿದ್ದರು.

ಕಾರ್ಯದರ್ಶಿ ಮಮತಾ ಸಂಘದ ವಾರ್ಷಿಕ ವರದಿಯನ್ನು ಮಂಡಿಸಿದರು, ಪ್ರೀತಿ ಶೆಟ್ಟಿ ಸ್ವಾಗತಿಸಿದರು, ಮಮತಾ ವಂದಿಸಿದರು ಹಾಗೂ ಮಾನ್ಯ ಪ್ರಾರ್ಥಿಸಿದರು.

Leave a Reply