ಟೆನ್ನಿಕಾಯ್ಟ್ ಪಂದ್ಯಾಟ: ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಸರಸ್ವತಿ ಪದವಿ ಪೂರ್ವ ಕಾಲೇಜು ಗಂಗೊಳ್ಳಿ  ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದು ಶ್ಲಾಘನೀಯ.

Call us

Click Here

ವಿದ್ಯಾರ್ಥಿನಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ವಿಶೇಷ ತರಬೇತಿ ನೀಡಿ ವಿದ್ಯಾರ್ಥಿಗಳ ಸಾಧನೆಗೆ ಉತ್ತೇಜನ ನೀಡಿದ್ದಾರೆ.

ಶೈಕ್ಷಣಿಕ ಸಾಧನೆಯ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿ ಕೂಡ ಕಾಲೇಜು ಸಾಧನೆಯ ಪಥದಲ್ಲಿ ಸಾಗಿ ಬರುತ್ತಿದೆ. ವಿದ್ಯಾರ್ಥಿಗಳೊಂದಿಗೆ ಕಾಲೇಜು ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Leave a Reply