ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಅಕ್ಟೋಬರ್ 3 ರಂದು ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಉಡುಪಿ ಇವರ ಸಹಭಾಗಿತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಯ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಶುಭ ಹಾರೈಸಿದ್ದಾರೆ.