Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಸ್ತೂರಿ ರಂಗನ್ ವರದಿ ವಿರುದ್ದ ಕಾನೂನಾತ್ಮಕ ಹೋರಾಟ: ಶಾಸಕ ಗುರುರಾಜ್ ಗಂಟಿಹೊಳೆ
    ಊರ್ಮನೆ ಸಮಾಚಾರ

    ಕಸ್ತೂರಿ ರಂಗನ್ ವರದಿ ವಿರುದ್ದ ಕಾನೂನಾತ್ಮಕ ಹೋರಾಟ: ಶಾಸಕ ಗುರುರಾಜ್ ಗಂಟಿಹೊಳೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಕಾಡಂಚಿನ ಜನವಸತಿಗೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿ ವಿರುದ್ಧ ಕಾನೂನು ಹೋರಾಟ ರೂಪಿಸಲು ಹಾಗೂ ವಿಶೇಷ ಅಧ್ಯಯನ/ ಸಂಶೋಧನೆಗಾಗಿ ಕಾನೂನು ತಜ್ಞರನ್ನು ಒಳಗೊಂಡ ಬೈಂದೂರು ಫೌಂಡೇಷನ್ ರೂಪಿಸಲಾಗಿದೆ ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಹೇಳಿದರು.

    Click Here

    Call us

    Click Here

    ಕಸ್ತೂರಿ ರಂಗನ್ ವರದಿ ವಿರುದ್ಧ ಮುಂದಿನ ಹಂತದ ಹೋರಾಟಗಳ ಕುರಿತು ಸಂತ್ರಸ್ತರಾಗಿರುವ ಗ್ರಾಮ ಪಂಚಾಯತ್‌ ಪ್ರತಿನಿಧಿಗಳ ಸಭೆಯನ್ನು ಚಿತ್ತೂರಿನ ಸಕಲ ಕನ್ವೆನ್ಷನ್ ಹಾಲ್‌ನಲ್ಲಿ ಕರೆಯಲಾಗಿತ್ತು.‌ ಸಭೆಯಲ್ಲಿ  ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ವಿರುದ್ಧ ಕಾನೂನಾತ್ಮಕ ಹೋರಾಟವೂ ಅಗತ್ಯವಿದೆ. ಈ ನಿಟ್ಟಿನಲ್ಲಿ ಬೈಂದೂರು ಫೌಂಡೇಶನ್ ಸ್ಥಾಪಿಸಲಾಗಿದೆ. ಅಧ್ಯಯನದ ಜತೆಗೆ ಹೋರಾಟದ ಮುಂದಿನ ರೂಪುರೇಷೆಯನ್ನು ಫೌಂಡೇಶನ್ ಸಿದ್ಧಪಡಿಸಲಿದೆ ಎಂದರು.

    ಕಸ್ತೂರಿ ರಂಗನ್ ವರದಿ 2013ರಲ್ಲಿ ಘೋಷಣೆಯಾದರೂ ಈ ತನಕ ಯಾರೂ ಕೂಡ ಅಧ್ಯಯನಾತ್ಮಕ ಹೋರಾಟ ಮಾಡಿದವರಿಲ್ಲ. ಕಾಲಕಾಲಕ್ಕೆ ಹೋರಾಟಗಳು ಆದಾಗಲೂ,‌ ಹೋರಾಟಗಾರರನ್ನು ದಿಕ್ಕು ತಪ್ಪಿಸುವ ಕೆಲಸವೂ ಆಗಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ಕೇಳಿ ಬಂದಿದೆ.

    ಕಸ್ತೂರಿ ರಂಗನ್ ವರದಿ ಯಥಾವತ್ ಜಾರಿಯಾದರೆ ಆಗುವ ಅನಾನುಕೂಲಗಳನ್ನು ಕೋರ್ಟಿಗೆ ತಿಳಿಸಬೇಕಿದೆ. ಲಕ್ಷಾಂತರ ಕುಟುಂಬಗಳನ್ನು ರಕ್ಷಿಸಬೇಕಾದರೆ, ಸಂಘಟನಾತ್ಮಕ ಕಾನೂನಿನ ಉತ್ತರ ನೀಡಬೇಕು. ಈ ನಿಟ್ಟಿನಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಬೈಂದೂರು ಫೌಂಡೇಶನ್ ಸ್ಥಾಪನೆ ಮಾಡುವುದಾಗಿ ಘೋಷಿಸಿದರು. ವಕೀಲರಾದ ವಿಶ್ವನಾಥ್ ಶೆಟ್ಟಿ ಅವರನ್ನು ಸಂಚಾಲಕರನ್ನಾಗಿ ಮತ್ತು ರವಿಚಂದ್ರ ಅವರನ್ನು ಕಾರ್ಯದರ್ಶಿಯಾಗಿ ನೇಮಕ ಮಾಡಿದರು.

    ಶೀಘ್ರದಲ್ಲಿ ಕುಂದಾಪುರ ತಾಲೂಕು ಕೇಂದ್ರದಲ್ಲಿ ಪ್ರತಿಭಟಿಸುವುದು, ಮ್ಯಾನುವೆಲ್ ಸರ್ವೆ ನಡೆಸುವ ಮೂಲಕ ಕೇರಳದಂತೆ, ನಮ್ಮ ರಾಜ್ಯದಲ್ಲಿ ಪ್ರತ್ಯೇಕ ಸಮಿತಿ ರಚಿಸಬೇಕು ಎಂದು ಒತ್ತಾಯಿಸಲಾಯಿತು.

    Click here

    Click here

    Click here

    Call us

    Call us

     ಈ ಸಭೆಯಲ್ಲಿ ಹಿರಿಯ ಹೋರಾಟಗಾರಾದ ಡಾ.ಅತುಲ್ ಕುಮಾರ್ ಶೆಟ್ಟಿ ಅವರ ಸಹಿತ ಅನೇಕ ಹೋರಾಟಗಾರರು ಭಾಗವಹಿಸಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.