ದಸರಾ ಪ್ರಯುಕ್ತ ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ದಸರಾ ಹಬ್ಬದ ಸಂದರ್ಭ ಬೆಂಗಳೂರಿನಿಂದ ಕರಾವಳಿಗೆ ತೆರಳಲು ಅ. 10 ಹಾಗೂ ಅ. 12ರಂದು ವಿಶೇಷ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ.

Call us

Click Here

ಬೆಂಗಳೂರು, ಮಂಗಳೂರು, ಉಡುಪಿ, ಕುಂದಾಪುರ, ಬೈಂದೂರು, ಕಾರವಾರ ಭಾಗದ ಪ್ರಯಾಣಿಕರ ನೆರವಿಗೆ ವಿಶೇಷ ರೈಲು ಓಡಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾಡಿದ ಮನವಿಯಂತೆ ನೈಋತ್ಯ ರೈಲ್ವೇ ರೈಲುಗಳನ್ನು ಹೊರಡಿಸುವುದಾಗಿ ಪ್ರಕಟಿಸಿದೆ.

ರೈಲಿನ ವೇಳಾಪಟ್ಟಿ ಹೀಗಿದೆ:
ಅ. 10 ಗುರುವಾರ ರಾತ್ರಿ 12.30ಕ್ಕೆ ಯಶವಂತಪುರದಿಂದ ಹೊರಡುವ ರೈಲು (ನಂ. 06569) ಪಡೀಲ್ ಬೈಪಾಸ್ ಮೂಲಕ ಶುಕ್ರವಾರ ಬೆ. 11.30ಕ್ಕೆ ಉಡುಪಿ ತಲುಪಿ ಸಂಜೆ 4ಕ್ಕೆ ಕಾರವಾರ ತಲುಪಲಿದೆ.

ಅ. 11ರ ಶುಕ್ರವಾರ ರಾತ್ರಿ 11.30ಕ್ಕೆ ಕಾರವಾರದಿಂದ ಹೊರಡುವ ರೈಲು (06570) ಕುಂದಾಪುರ ಮಧ್ಯ ರಾತ್ರಿ 2ಕ್ಕೆ ಉಡುಪಿ 2.40 ತಲುಪಿ ಮರುದಿನ ಮಧ್ಯಾಹ್ನ 1ಕ್ಕೆ ಯಶವಂತಪುರ ಹಾಗೂ ಸಂಜೆ 4.40ಕ್ಕೆ ಮೈಸೂರು ತಲುಪಲಿದೆ.

06585 ರೈಲು
ಅ. 12ರ ಶನಿವಾರ ರಾತ್ರಿ 9.20ಕ್ಕೆ ಮೈಸೂರಿನಿಂದ ಹೊರಟು (06585) ಮೆಜೆಸ್ಟಿಕ್‌ನಿಂದ ರಾತ್ರಿ 12.20 ಹಾಗೂ 12.40ಕ್ಕೆ ಯಶವಂತಪುರದಿಂದ ಹೊರಟು ಪಡೀಲ್ ಬೈಪಾಸ್ ಮೂಲಕ ರವಿವಾರ ಬೆ. 11.30ಕ್ಕೆ ಉಡುಪಿ ತಲುಪಿ 4ಕ್ಕೆ ಕಾರವಾರ ತಲುಪಲಿದೆ.

Click here

Click here

Click here

Click Here

Call us

Call us

ಅ.13ರ ರವಿವಾರ ರಾತ್ರಿ 11.30ಕ್ಕೆ ಕಾರವಾರದಿಂದ ಹೊರಟು (06586) ಉಡುಪಿಗೆ ಮಧ್ಯರಾತ್ರಿ 2.40 ತಲುಪಿ ಅ. 14ರ ಸೋಮವಾರ ಮಧ್ಯಾಹ್ನ ಯಶವಂತಪುರ 1ಕ್ಕೆ ಮತ್ತು ಸಂಜೆ 4.40ಕ್ಕೆ ಮೈಸೂರು ಸಂಜೆ 4.40 ಕ್ಕೆ ತಲುಪಲಿದೆ.

Leave a Reply