Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ಎಕ್ಸಲೆಂಟ್: ದಸರಾ ಉತ್ಸವ ಹಾಗೂ ನವದುರ್ಗಾ ಆಚರಣೆ ಸಂಪನ್ನ
    ಎಕ್ಸಲೆಂಟ್ ಪಿ.ಯು ಕಾಲೇಜು ಸುಣ್ಣಾರಿ

    ಕುಂದಾಪುರ ಎಕ್ಸಲೆಂಟ್: ದಸರಾ ಉತ್ಸವ ಹಾಗೂ ನವದುರ್ಗಾ ಆಚರಣೆ ಸಂಪನ್ನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕರಾವಳಿ ಕಡಲ ತಡಿಯ ಭಾರ್ಗವ ರಾಮರ ಸುಂದರ ಹಸಿರು ನಾಡಿನ ಸುಣ್ಣಾರಿ ಎನ್ನುವ ಸುಂದರ ಊರಿನಲ್ಲಿ ಸ್ಥಾಪಿತಗೊಂಡಿರುವ ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಅಧ್ಯಾಯವನ್ನು ಸಾಧಿಸಿರುವ ಅಗ್ರಗಣ್ಯ ಸಂಸ್ಥೆಯೇ ಎಕ್ಸಲೆಂಟ್ ವಿದ್ಯಾಸಂಸ್ಥೆಯಾಗಿದೆ. ಈ ಸಂಸ್ಥೆಗೆ ಪ್ರತಿ ವರ್ಷವು ವಿವಿಧ ರಾಜ್ಯದ ಹಾಗೂ ಜಿಲ್ಲೆಗಳ ನಾನಾ ಭಾಗದ ವಿದ್ಯಾರ್ಥಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಗೊಂಡು ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯದಲ್ಲಿಯೇ ಹೊಸ ಕ್ರಾಂತಿಯನ್ನು ಸೃಷ್ಠಿಸಿದೆ.

    Click Here

    Call us

    Click Here

    ಪ್ರತಿ ವರ್ಷವು ಸಿಇಟಿ, ಜೆಇಇ, ನೀಟ್, ಸಿಎ, ಸಿಎಸ್ ಹಾಗೂ ಬೋರ್ಡ್‌ಗಳಲ್ಲಿ ಹಲವಾರು ರ್ಯಾಕ್‌ಗಳನ್ನು ಗಳಿಸಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡ ಹೆಗ್ಗಳಿಕೆಯ ಸಂಸ್ಥೆಯಾಗಿದೆ. ಕೇವಲ ಶಿಕ್ಷಣ ಕ್ಷೇತ್ರದಲ್ಲಿ ಮಾತ್ರವಲ್ಲದೇ ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಭಾಗವಹಿಸಿ ಅದೆಷ್ಟೋ ಪ್ರಶಸ್ತಿಗಳನ್ನುತನ್ನ ತೆಕ್ಕೆಗೆ ಹಾಕಿಕೊಂಡಿದ್ದು ಸಂಸ್ಥಗೆ ಹೆಮ್ಮೆಯ ವಿಚಾರವಾಗಿದೆ. ಹೀಗೆ ಶಿಕ್ಷಣ, ಕ್ರೀಡಾ ಕ್ಷೇತ್ರದಲ್ಲಿ ಮಾತ್ರವಲ್ಲದೇ ಸಾಂಸ್ಕ್ರತಿಕ ಕ್ರೇತ್ರದಲ್ಲಿ ಹೊಸ ಅಧ್ಯಾಯವನ್ನು ಸೃಷ್ಠಿಮಾಡಲು ದಾಪುಗಾಲಿಟ್ಟಿದೆ.

    ಮಕ್ಕಳಲ್ಲಿ ಈ ನಾಡಿನ ಆಚಾರ – ವಿಚಾರ, ಹಿಂದೂ ಧರ್ಮದ ಮಹತ್ವ, ಈ ಧರ್ಮದ ಸಂಸ್ಕೃತಿ, ಕಲೆ, ಉಡುಗೆ – ತೊಡುಗೆ, ಹಾಗೂ ಸಂಸ್ಕಾರಗಳನ್ನು ತಿಳಿಸುವ ನಿಟ್ಟಿನಲ್ಲಿ ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳಿಗೆ ತಮ್ಮ ಮನೆಯಲ್ಲಿ ಆಚರಿಸುವ ವಿವಿಧ ಹಬ್ಬಗಳ ಮಹತ್ವವನ್ನು ತಿಳಿಸಲು ನಮ್ಮ ಸಂಸ್ಥೆಯಲ್ಲಿ ಹಲವಾರು ರಾಷ್ಟ್ರೀಯ ಹಬ್ಬಗಳ ಆಚರಣೆಗಳ ಜೊತೆಗೆ ನಾಡಹಬ್ಬಗಳ ಆಚರಣೆಯನ್ನು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಯೊಂದಿಗೆ ಪ್ರತಿವರ್ಷವೂ ಮಾಡುತ್ತಾ ಬಂದಿದ್ದೇವೆ.

    ಇಂತಹ ಆಚರಣೆಗಳಲ್ಲಿ ನಮ್ಮ ನಾಡಿನ ನಾಡಹಬ್ಬವಾದ ’ದಸರಾ ಉತ್ಸವ’ ಹಾಗೂ ’ನವದುರ್ಗಾ ಪೂಜೆ’ ಇದರ ಆಚರಣೆಯನ್ನು ಎಕ್ಸಲೆಂಟ್ ಸಂಸ್ಥೆಯಲ್ಲಿ ವೈಶಿಷ್ಠ್ಯ ರೀತಿಯಿಂದ ಅದ್ದೂರಿಯಾಗಿ ಒಂಭತ್ತು ದಿನಗಳ ಕಾಲ ವೈವಿಧ್ಯತೆಗಳಿಂದ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳ  ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.

    ಅ.3ರಂದು ಎಂ.ಎಂ. ಹೆಗ್ಡೆ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಎಂ. ಮಹೇಶ್ ಹೆಗ್ಡೆ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ಒಂಭತ್ತು ದಿನಗಳ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.

    Click here

    Click here

    Click here

    Call us

    Call us

    ಈ ಸಂದರ್ಭದಲ್ಲಿ ಮಾತನಾಡಿದ ಅವರು ನಾಡಹಬ್ಬವಾದ ದಸರಾ ಉತ್ಸವದ ಮಹತ್ವ, ನವದುರ್ಗಾ ಆಚರಣೆಯ ಮಹತ್ವ ಹಾಗೂ ಸನಾತನ ಹಿಂದೂಧರ್ಮದ ಮಹತ್ವದಲ್ಲಿ ಆಯುಧ ಪೂಜೆಯ ಮಹತ್ವವನ್ನು ಶ್ರೀರಾಮನಕಥೆ ಹಾಗೂ ಪಾಂಡವರ ಅಜ್ಞಾತವಾಸದ ಕಥೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಹೇಳಿ ಶುಭ ಹಾರೈಸಿದರು.

    ಸಂಸ್ಥೆಯ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಅವರು ನಾಡ ಹಬ್ಬದ ವೈಶಿಷ್ಠ್ಯತೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿ ಪ್ರತಿ ದಿನವೂ ಆಯಾಯ ದಿನಗಳ ಮಹತ್ವ ಹಾಗೂ ನಮ್ಮ ಸಂಸ್ಕೃತಿಯನ್ನು ಬಿಂಬಿಸುವ ಸುಂದರ ಕಾರ್ಯಕ್ರವನ್ನು ನಡೆಸಿಕೊಡುವಂತೆ ಎಲ್ಲಾ ವಿದ್ಯಾರ್ಥಿಗಳಿಗೆ ಸಂದೇಶವನ್ನು ನೀಡಿದರು.

    ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ, ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕಿಯಾದ ಸರೋಜಿನಿಆಚಾರ್ಯ ನಾಡ ಹಬ್ಬದ ವೈಶಿಷ್ಠ್ಯತೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿ, ಈ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

    ಹೀಗೆ ಪ್ರತಿ ಒಂದೊಂದು ದಿನದ ಕಾರ್ಯಕ್ರಮಕ್ಕೆ ಒಂದೊಂದು ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿ ವಿಶಿಷ್ಠ ರೀತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಂಡು ಆಚರಿಸಿದರು.

    ಪ್ರತಿ ದಿನವೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಆ ದಿನದ ದುರ್ಗೆಯ ಮಹತ್ವವನ್ನು ಆ ದಿನದ ಉಡುಗೆ-ತೊಡುಗೆಗಳೊಂದಿಗೆ ವಿಭಿನ್ನ ರೀತಿಯಲ್ಲಿ ನವದುರ್ಗಾ ಆಚರಣೆಯನ್ನು ಸಂಗೀತ, ನೃತ್ಯ, ನೃತ್ಯರೂಪಕ, ಪ್ರಹಸನ, ನಾಟಕ, ಯಕ್ಷಗಾನ ಈ ರೀತಿಯ ವೈವಿಧ್ಯತೆಗಳಿಂದ ಕಾರ್ಯಕ್ರಮವನ್ನು ಚಂದಗಾಣಿಸಿದರು.

    ಪ್ರತಿ ದಿನವೂ ಈ ಕಾರ್ಯಕ್ರಮಕ್ಕೆ ಸಂಸ್ಥೆಯ ಅಧ್ಯಕ್ಷರು, ಪ್ರಾಂಶುಪಾಲರು, ಮುಖ್ಯಶಿಕ್ಷಕಿ, ಉಪನ್ಯಾಸಕ ವೃಂದದವರು, ಶಿಕ್ಷಕರು ಹಾಗೂ ಶಿಕ್ಷಕೇತರ ವೃಂದದವರು ಆ ದಿನದ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ಕಾರ್ಯಕ್ರಮದ ಮೆರುಗನ್ನು ಉತ್ತುಂಗಕ್ಕೇರಿಸಿದರು.

    ಹೀಗೆ ಪ್ರತಿದಿನವು ಸಾಂಗವಾಗಿ ಮೂಡಿಬಂದ ಈ ಕಾರ್ಯಕ್ರಮವು ದಿನಾಂಕ: ಅ.11ರಂದು ನವರಾತ್ರಿಯ ನವದುರ್ಗೆಯ ಕೊನೆಯ ದಿನವಾದ ಈ ಶುಭದಿನದಂದು ಅದ್ದೂರಿಯಾಗಿ ಆಯೋಜಿಸಲಾಯಿತು.

    ಸತತ ಒಂಭತ್ತು ದಿನಗಳ ಕಾಲ ನಡೆದ ಪ್ರತಿ ತರಗತಿಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ಭಾಷಾ ಉಪನ್ಯಾಸಕ ತೀರ್ಪುಗಾರರು ಆಯಾಯ ಕಾರ್ಯಕ್ರಮವನ್ನು ನೋಡಿ ಅದರಲ್ಲಿ ಸುಂದರವಾಗಿ ಮೂಡಿಬಂದ ಕಾರ್ಯಕ್ರಮವನ್ನು ಗುರುತಿಸಿ ಸಂಸ್ಥೆಯ ಅಧ್ಯಕ್ಷರ ಹಾಗೂ ಪ್ರಾಂಶುಪಾಲರ ಸಮ್ಮುಖದಲ್ಲಿ ವಿಶೇಷ ಬಹುಮಾನವನ್ನು ನೀಡಿ ಈ ದಸರಾ ಉತ್ಸವ ಹಾಗೂ ನವದುರ್ಗಾ ಆಚರಣೆಯನ್ನು ಎಕ್ಸಲೆಂಟ್ ಸಂಸ್ಥೆಯ ಸುಂದರ ವೇದಿಕೆಯಲ್ಲಿ ಅದ್ಬುತವಾಗಿ ಎಲ್ಲರ ಸಮ್ಮುಖದಲ್ಲಿ ಸಂಪನ್ನಗೊಳಿಸಲಾಯಿತು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    06/12/2025

    ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    06/12/2025

    ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d