Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಲೇಕ್ 2024 – 14ನೇ ದ್ವೈವಾರ್ಷಿಕ ವಿಚಾರ ಸಂಕಿರಣ ಎರಡನೇ  ದಿನ
    alvas nudisiri

    ಲೇಕ್ 2024 – 14ನೇ ದ್ವೈವಾರ್ಷಿಕ ವಿಚಾರ ಸಂಕಿರಣ ಎರಡನೇ  ದಿನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಹಾಗೂ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಸಹಯೋಗದೊಂದಿಗೆ ನಡೆಯುತ್ತಿರುವ ಲೇಕ್ 2024 – 14ನೇ ದ್ವೈವಾರ್ಷಿಕ  ವಿಚಾರ ಸಂಕಿರಣ ಎರಡನೇ  ದಿನ ಒಟ್ಟು ತಾಂತ್ರಿಕ ಅವಧಿಯಲ್ಲಿ ನಗರ ವಿಭಾಗದ ಆರರಿಂದ ಒಂಬತ್ತನೇ ತರಗತಿಯ  83 ವಿದ್ಯಾರ್ಥಿಗಳು ಹಾಗೂ ಗ್ರಾಮೀಣ ವಿಭಾಗದಿಂದ 45 ವಿದ್ಯಾರ್ಥಿಗಳ ಪ್ರಸ್ತುತಿ, 21 ಸಂಶೋಧಕರು ಮತ್ತು ಅಧ್ಯಾಪಕರಿಂದ ಪ್ರಸ್ತುತಿ, ಹತ್ತರಿಂದ ಹನ್ನೆರಡನೇ ತರಗತಿಯ 32 ವಿದ್ಯಾರ್ಥಿಗಳ ಪ್ರಸ್ತುತಿ, ಪದವಿ, ಸ್ನಾತಕೋತ್ತರ ಪದವಿ, ಸಂಶೋಧನಾ ವಿದ್ಯಾರ್ಥಿಗಳಿಂದ  ಒಟ್ಟು  38  ಜನರ ವಿಚಾರ ಮಂಡನೆ ಕಾಲೇಜಿನ ವಿವಿಧ ಸಭಾಂಗಣದಲ್ಲಿ ನಡೆಯಿತು. ಜೊತೆಯಲ್ಲಿ, ಎಲ್ಲಾ ವರ್ಗಗಳಲ್ಲಿ  ಒಟ್ಟು  63 ಸಂಶೋಧನಾ ಆಸಕ್ತರು  ಪೋಸ್ಟರ್ ಪ್ರಸ್ತುತಿಯಲ್ಲಿ ಭಾಗಿಯಾದರು.

    Click Here

    Call us

    Click Here

    ಮೈಕ್ರೋ ಪ್ಲಾಸ್ಟಿಕ್ ಕಾರಣ
    ಅಂತರರಾಷ್ಟ್ರೀಯ ಸಂಶೋಧನಾ ಪ್ರಸ್ತುತಿಯಲ್ಲಿ ರಷ್ಯಾದ ನಿಕೋಲಾಯ್ ಫಿಲೆಟೊವ್- ಹವಾಮಾನ ತಾಪಮಾನ ಮತ್ತು ಮಾನವಜನ್ಯ ಪರಿಣಾಮಗಳು: ರಷ್ಯಾದ ಕೆರೆಗಳ ಆಧುನಿಕ ಸ್ಥಿತಿ ಮತ್ತು ಬದಲಾವಣೆಗಳಲ್ಲಿ ಪರಿಸರ ಮತ್ತು ಸಾಮಾಜಿಕ, ಆರ್ಥಿಕ ಅಂಶಗಳ ಕುರಿತು ಮಾತನಾಡಿ, ರಷ್ಯಾದ ಪ್ರವಾಸೋದ್ಯಮದಿಂದಾಗಿ ಅಲ್ಲಿನ ಹೆಚ್ಚಿನ ಕೆರೆಗಳು ಮೈಕ್ರೋ ಪ್ಲಾಸ್ಟಿಕ್‌ನಿಂದ ಕಲುಷಿತಗೊಂಡಿದೆ. ಈ ದುಷ್ಪಾರಿಣಾಮ ಭೂಮಿಯ ಇತರ ಜಲಮೂಲಗಳ ಮೇಲು ಪರಿಣಮಿಸಿದೆ ಎಂದರು.

    ಒಂದು ಜೋಡಿ ಹಕ್ಕಿಗಳಿಗೆ 90,000 ಹಣ್ಣುಗಳು ಮತ್ತು 17,000 ಕೀಟಗಳು ಆಹಾರವಾಗಿ ಅವಶ್ಯಕತೆ
    ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಗಸ್ತು ಅರಣ್ಯಪಾಲಕ ರಮೇಶ್ ಕೆ. ಬಡಿಗೇರ ಒಂದು ಜೋಡಿ ಮಲಬಾರ್ ಗ್ರೇ ಹಾರ್ನ್ ಬಿಲ್ ಹಕ್ಕಿಗಳ ಕುರಿತ ಅಧ್ಯಯನ ನಡೆಸಿ ತಮ್ಮ ಅನುಭವವನ್ನು ಹಂಚಿಕೊಂಡರು. ಮೂಲತಃ ಪರಿಸರ ಪ್ರೇಮಿಯಾಗಿರುವ ಇವರು, ಕಾಡನ್ನು ಹೆಚ್ಚು ಅನ್ವೇಷಿಸುವುದರಲ್ಲಿ ಪರಿಣತರು. ಈ ಅಧ್ಯಯನಕ್ಕೆ ಒಟ್ಟು 26 ದಿನದ 267 ಗಂಟೆಯನ್ನು ವ್ಯಯಿಸಿದ್ದರು. 

    ಪ್ರತಿ ಎರಡು ದಿನದಲ್ಲಿ ಬೆಳಿಗ್ಗೆ ಆರರಿಂದ ಸಂಜೆ ಆರರವರೆಗೆ ಕಾಡಲ್ಲೇ ತಂಗಿದ್ದು, ಹಾರ್ನ್ ಬಿಲ್ ಹಕ್ಕಿಗಳ ವೀಕ್ಷಣೆ ಮತ್ತು ಅದರ ದೈನಂದಿನ ಚಲನವಲನವನ್ನು ತಮ್ಮ ಡೈರಿಯಲ್ಲಿ ದಾಖಲಿಸಿದ್ದರು. ಹಕ್ಕಿಗಳು ಬರುವ ದಿಕ್ಕು, ಕೀಟಗಳನ್ನು ಹಿಡಿದು ತರುವ ರೀತಿ, ಹಿಕ್ಕೆಗಳನ್ನು ಹಾಕುವ ಸಮಯ ಹೀಗೆ ಎಲ್ಲವನ್ನು ಬಹಳ ಸೂಕ್ಷ್ಮತೆಯಿಂದ ನಮೂದಿಸಿಟ್ಟಿದ್ದರು. ಸ್ಟಾಪ್ ವಾಚ್ ಸಹಾಯದಿಂದ ಹಕ್ಕಿಗಳ ಆಹಾರಕ್ರಮದ ಅವಧಿಯನ್ನು ಪಟ್ಟಿ ಮಾಡುವುದರ ಜೊತೆಗೆ  ದುರ್ಬೀನು ಮತ್ತು ಕ್ಯಾಮರಾಗಳ  ಮೂಲಕ 26 ಅಧ್ಯಯನಗಳಲ್ಲಿ ಮಲಬಾರ್ ಗ್ರೇ ಹಾರ್ನ್ ಬಿಲ್ ಹಕ್ಕಿಗಳ ಪ್ರತಿ ಚಲನವಲನವನ್ನು ಸೆರೆ ಹಿಡಿದಿದ್ದರು. 

    ಇವರ ಅಧ್ಯಯನದ ಪ್ರಕಾರ, ಒಂದು ವರ್ಷಕ್ಕೆ ಒಂದು ಜೋಡಿ ಹಾರ್ನ್ ಬಿಲ್ ಹಕ್ಕಿಗೆ 90,000 ಹಣ್ಣುಗಳು ಮತ್ತು 17,000 ಕೀಟಗಳು ಆಹಾರವಾಗಿ ಅವಶ್ಯಕತೆ ಇದೆ. ಈ ಹಿನ್ನಲೆಯಲ್ಲಿ ಜಗತ್ತಿನ ಎಲ್ಲಾ ಪಕ್ಷಿಗಳ ಆಹಾರ ಸಂಪತ್ತಿನ ಅವಶ್ಯಕತೆಯನ್ನು ಸಭಿಕರಲ್ಲಿ ಅಂದಾಜಿಸಲು ತಿಳಿಸಿದರು. ಅರಣ್ಯ ಇವೆಲ್ಲವನ್ನೂ ಒದಗಿಸುವ ಶಕ್ತಿಯನ್ನು ಹೊಂದಿದೆ. ಅರಣ್ಯ ನಿಜವಾದ ಅಕ್ಷಯ ಪಾತ್ರೆ. ಅರಣ್ಯ ನಿಜವಾದ ಪ್ರಯೋಗಾಲಯ ಹಾಗೂ ವಿಶ್ವವಿದ್ಯಾಲಯ ಎಂದು ಬಣ್ಣಿಸಿದರು.

    Click here

    Click here

    Click here

    Call us

    Call us

    ವೇದಿಕೆಯಲ್ಲಿ ಬಂದು ವಿಷಯ ಮಂಡನೆ ಮಾಡಲು ಅವಕಾಶ ನೀಡಿದ  ಅರಣ್ಯ ಇಲಾಖೆಯನ್ನು ಸ್ಮರಿಸಿದರು. ನಂತರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025

    ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

    18/12/2025

    ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.