ನಾವುಂದ: ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ನಾವುಂದದ ರಾ.ಹೆ-66ರಲ್ಲಿ ಪಾದಾಚಾರಿಗೆ ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. ನಾಯಕನಕಟ್ಟೆ ಸಮೀಪದ ಗೋಳಿಕಟ್ಟೆ ನಿವಾಸಿ ಭದ್ರ (45) ಅಪಘಾತದಲ್ಲಿ ಸಾವನಪ್ಪಿದವರು.

Call us

Click Here

ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ತಮ್ಮ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಭದ್ರ ಎಂಬುವವರಿಗೆ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ಭದ್ರಾ ಅವರನ್ನು ಗಂಗೊಳ್ಳಿಯ ಇಬ್ರಾಹಿಂ ಅವರಿಗೆ ಕರೆ ಮಾಡಿ ಕುಂದಾಪುರಕ್ಕೆ ಕೊಂಡೊಯ್ಯಲಾಯಿತು. ಆದರೆ ಅದಾಗಲೇ ಭದ್ರ ಮೃತಪಟ್ಟಿದ್ದರು.

ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply