Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅರಣ್ಯ ಲೋಕದ ಮರುಸೃಷ್ಟಿ – ಕುಮ್ರಿಕಾನ್. ‌ಬೈಂದೂರು ಉತ್ಸವದ ವಿಶೇಷ ಆಕರ್ಷಣೆ
    ಊರ್ಮನೆ ಸಮಾಚಾರ

    ಅರಣ್ಯ ಲೋಕದ ಮರುಸೃಷ್ಟಿ – ಕುಮ್ರಿಕಾನ್. ‌ಬೈಂದೂರು ಉತ್ಸವದ ವಿಶೇಷ ಆಕರ್ಷಣೆ

    Updated:01/11/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೈಂದೂರಿನಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಬೈಂದೂರು ಉತ್ಸವ 2024 ಕಳೆಗಟ್ಟುತ್ತಿದ್ದು ಉತ್ಸವದ ಮುನ್ನಾದಿನ ಅರಣ್ಯ ಇಲಾಖೆಯಿಂದ ನಿರ್ಮಿಸಲಾದ ಕುಮ್ರಿಕಾನ್‌ ಸಾರ್ವಜನಿಕರ ವೀಕ್ಷಣೆಗೆ ತೆರೆದುಕೊಂಡಿದೆ. ಈ ಮೂಲಕ ಹೊಸತೊಂದು ಅರಣ್ಯಲೋಕವನ್ನೇ ಕುಮ್ರಿಕಾನ್‌ ಮೂಲಕ ಅನಾವರಣಗೊಳಿಸಲಾಗಿದೆ.

    Click Here

    Call us

    Click Here

    ಅರಣ್ಯ ಲೋಕದ ಅನಾವರಣ:
    ದಿನೇ ದಿನೇ ನಾಶವಾಗುತ್ತಿರುವ ಅರಣ್ಯ ಸಂಪತ್ತು. ಮನುಷ್ಯ ಆಧುನಿಕ ಜೀವನಶೈಲಿಯತ್ತ ಮುಖಮಾಡಿದಂತೆ ಮರೆಯಾಗುತ್ತಿರುವ ಅರಣ್ಯದೊಂದಿಗಿನ ನಂಟು. ಈ ಎಲ್ಲವನ್ನು ಗಮನದಲ್ಲಿರಿಸಿಕೊಂಡು ಅರಣ್ಯ ಇಲಾಖೆ ಕುಂದಾಪುರ ವಿಭಾಗ, ಬೈಂದೂರು ವಲಯದಿಂದ ಅರಣ್ಯಲೋಕವನ್ನು ಅನಾವರಣಗೊಳಿಸಲಾಗಿದೆ. ಇದಕ್ಕೆ ಕುಮ್ರಿಕಾನ್‌ ಎಂದು ಹೆಸರು ಇಡಲಾಗಿದೆ. ಕುಮ್ರಿ ಎಂದರೆ ಎರಡು ಬೆಟ್ಟಗಳು ಸೇರುವ ಪ್ರದೇಶ, ಕಾನ್‌ ಎಂದರೆ ಅರಣ್ಯ. ಕಾಡಿನಲ್ಲಿ ಏನೇನು ಇರಲಿದೆ. ಅಲ್ಲಿ ಸಹಜವಾಗಿ ನಡೆಯುವ ಪ್ರಕ್ರಿಯೆಗಳು ಪ್ರಕೃತಿಗೆ ಮನುಷ್ಯನಿಗೆ ಹೇಗೆ ಉಪಯೋಗ ಆಗಲಿದೆ ಕೃಷಿ ಚುಟುವಟಿಕೆಗೆ ಹೇಗೆ ಪೂರಕವಾಗಲಿದೆ ಎಂಬುದನ್ನು ತೋರಿಸಲಾಗಿದೆ. ಕುಂದಾಪ್ರ ಡಾಟ್‌ ಕಾಂ ಸುದ್ದಿ.

    ದೇಗುಲಗಳ ಪ್ರತಿಕೃತಿ:
    ಬೈಂದೂರು ಕ್ಷೇತ್ರದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ, ಮೂಡುಗಲ್ಲು ಶ್ರೀ ಕೇಶವನಾಥ ದೇವಸ್ಥಾನ, ಕೃತಕ ಜಲಪಾತಗಳು, ಹರಿಯವ ನದಿ ಗೀಳಿಡುವ ಆನೆ, ಹುಲಿ, ಜಿಂಕೆ, ಪಕ್ಷಿಗಳ ಕಲರವ, ಕಾಂತಾರ ಕಂಬಳದ ಸೃಷ್ಟಿ, ಅರಣ್ಯದಲ್ಲಿ ಬೆಳೆಯುವ ಗಿಡಗಳ ಮಾಹಿತಿ ಹೀಗೆ ಹತ್ತಾರು ವೈವಿಧ್ಯತೆಗಳಿದ್ದು, ಒಮ್ಮೆ ಮಾತಿಲ್ಲದೇ ಒಳಹೊಕ್ಕರೆ ಅರಣ್ಯದಲ್ಲಿಯೇ ಸಂಚರಿಸಿದ ಅನುಭವವಾಗಲಿದೆ.  ಇದರೊಂದಿಗೆ ಹಳ್ಳಿಯ ಪರಿಸರ, ಶಾಲೆ, ಹಳ್ಳಿಮನೆ ಮೊದಲಾದವುಗಳ ಅನುಭವವನ್ನೂ ಕಟ್ಟಿಕೊಡಲಾಗಿದೆ. ಕುಂದಾಪ್ರ ಡಾಟ್‌ ಕಾಂ ಸುದ್ದಿ.

    ಅರಣ್ಯ ಇಲಾಖೆಯ ಬಗ್ಗೆಯೂ ಜನರಿಗೆ ಮಾಹಿತಿ ನೀಡಲಾಗಿದ್ದು, ಅರಣ್ಯ ನರ್ಸರಿ, ವಲಯ ಅಧಿಕಾರಿಗಳ ಕಛೇರಿ ಮೊದಲಾದವುಗಳ ಪ್ರತಿಕೃತಿ ನಿರ್ಮಿಸಲಾಗಿದೆ.

    ಉದ್ಘಾಟನೆ:
    ಅರಣ್ಯ ಇಲಾಖೆಯಿಂದ ನಿರ್ಮಿಸಲಾದ ಕುಮ್ರಿಕಾನ್‌ ವೀಕ್ಷಣೆಗೆ ತೆರೆದುಕೊಂಡಿದೆ. ಕಲಾಕ್ಷೇತ್ರ ಕುಂದಾಪುರದ ಅಧ್ಯಕ್ಷ ಬಿ. ಕಿಶೋರ್‌ ಕುಮಾರ್‌ ಕುಂದಾಪುರ ಉದ್ಘಾಟಿಸಿದರು. ಈ ವೇಳೆ ಶಾಸಕ ಗುರುರಾಜ ಗಂಟಿಹೊಳೆ, ಸಮೃದ್ಧ ಜನಸೇವಾ ಟ್ರಸ್ಟ್‌ ಅಧ್ಯಕ್ಷ ಸುರೇಶ್‌ ಶೆಟ್ಟಿ, ಉತ್ಸವದ ಸಹಸಂಚಾಲಕ ಗಣೇಶ್‌ ಗಾಣಿಗ, ಉದ್ಯಮಿಗಳಾದ ಗೋಕುಲ್‌ ಶೆಟ್ಟಿ, ಜಯಾನಂದ ಹೋಬಳಿದಾರ್‌, ವನ್ಯಜೀವಿ ವಿಭಾಗದ ಎಸಿಎಫ್ ದಿನೇಶ್, ಬೈಂದೂರು ಆರ್‌ಎಫ್‌ಓ ಸಂದೇಶ್, ಕುಂದಾಪುರ ಆರ್‌ಎಫ್‌ಓ ರಾಘವೇಂದ್ರ ಮೊದಲಾದವರು ಉಪಸ್ಥಿತರಿದ್ದರು. / ಕುಂದಾಪ್ರ ಡಾಟ್‌ ಕಾಂ ಸುದ್ದಿ. /

    Click here

    Click here

    Click here

    Call us

    Call us

    ಇದನ್ನೂ ಓದಿ ► ಸಾಂಸ್ಕೃತಿಕ ಸಂಭ್ರಮಕ್ಕೆ ಸಜ್ಜಾದ ಬಿಂದುಪುರ – ಮೂರು ದಿನಗಳ ಕಾಲ ಬೈಂದೂರು ಉತ್ಸವ – https://kundapraa.com/?p=78600 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

    17/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ

    17/12/2025

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.