Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾಗೂರು: ಯಕ್ಷಗಾನ ಜ್ಞಾನಯಜ್ಞ ತಾಳಮದ್ದಲೆ ಸಪ್ತಾಹ ಉದ್ಘಾಟನೆ
    ಊರ್ಮನೆ ಸಮಾಚಾರ

    ನಾಗೂರು: ಯಕ್ಷಗಾನ ಜ್ಞಾನಯಜ್ಞ ತಾಳಮದ್ದಲೆ ಸಪ್ತಾಹ ಉದ್ಘಾಟನೆ

    Updated:05/11/2024No Comments
    Facebook Twitter Pinterest LinkedIn WhatsApp Reddit Tumblr Email
    Oplus_131072
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಭೌತಿಕ, ಆದ್ಯಾತ್ಮಿಕವಾಗಿ ವಿಶೇಷ ಪರಿಣಾಮ ಬೀರುವ ಜತೆಗೆ ಸಾಮಾಜಿಕ ಸಾಮರಸ್ಯ, ನಮ್ಮ ಸಂಸ್ಕೃತಿ ಬಿಂಬಿಸುವ ಯಕ್ಷಗಾನದ ಪುರಾಣ ಕತೆಗಳ ಮೂಲಕ ಈಗಿನ ಯುವ ಪೀಳಿಗೆ ಧಾರ್ಮಿಕ ಶಿಕ್ಷಣವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಜೀವನದ ಸಾರ್ಥಕತೆ ಪಡೆಯಬೇಕಾಗಿದೆ ಎಂದು ಉದ್ಯಮಿ ಬೆಳ್ವೆ ಗಣೇಶ ಕಿಣಿ ಹೇಳಿದರು.

    Click Here

    Call us

    Click Here

    ನಾಗೂರು ಒಡೆಯರಮಠ ಶ್ರೀ ಗೋಪಾಲಕೃಷ್ಣ ಕಲಾಮಂದಿರದ ಖ್ಯಾತ ಸ್ತ್ರೀ ವೇಷಧಾರಿ ರಾಮ ನಾರಿ ಸ್ಮರಣ ವೇದಿಕೆಯಲ್ಲಿ ಕಿರಿಮಂಜೇಶ್ವರ ಧಾರೇಶ್ವರ ಯಕ್ಷಬಳಗ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಸಹಕಾರದಲ್ಲಿ 9ನೇ ವರ್ಷದ ಯಕ್ಷಗಾನ ಜ್ಞಾನಯಜ್ಞ ತಾಳಮದ್ದಲೆ ಸಪ್ತಾಹ ಹಾಗೂ ತೆಕ್ಕಟ್ಟೆ ಆನಂದ ಮಾಸ್ತರರ ಸ್ಮರಣೆಯ ಕಲಾತಪಸ್ವಿ 2024ರ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

    ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಕಲಾಪೋಷಕರು ಹಾಗೂ ಪ್ರೇಕ್ಷಕರು ಕಲೆ ಮತ್ತು ಕಲಾವಿದರ ಹಿಂದಿರುವ ದೊಡ್ಡಶಕ್ತಿ. ಸಾಂಸ್ಕೃತಿಕ ಅಭಿರುಚಿ, ಅಭಿಮಾನ ಹಾಗೂ ಹಿರಿಯರ ಸನ್ನಡತೆಯ ಸಹಕಾರದಿಂದ ಸತತ ಎಂಟು ವರ್ಷಗಳಿಂದ ಆಚರಿಸುತ್ತಾ ಬಂದಿರುವ ಯಕ್ಷಗಾನ ತಾಳಮದ್ದಲೆ ಸಪ್ತಾಹ ಪರಿಸರದ ಕಲಾಸಕ್ತರ ಮನಮುಟ್ಟುವಲ್ಲಿ ಯಶಸ್ಸು ಕಂಡಿರುವುದು ಕಲಾಕೃಷಿಯ ಸಾರ್ಥಕತೆಯನ್ನು ಬಿಂಬಿಸುತ್ತದೆ ಎಂದರು.

    ಹಾಸ್ಯ ಕಲಾವಿದ ಮೂರೂರು ರಮೇಶ ಭಂಡಾರಿ ಖ್ಯಾತ ಸ್ತ್ರೀ ವೇಷಧಾರಿ ದಿ. ರಾಮ ನಾರಿ ಇವರ ವ್ಯಕ್ತಿತ್ವ ಹಾಗೂ ಇವರೊಂದಿಗಿನ ದೀರ್ಘಕಾಲದ ವೃತ್ತಿ ಜೀವನದ ಒಡನಾಟಗಳನ್ನು ಸ್ಮರಿಸಿದರು.

    ಕಿರಿಮಂಜೇಶ್ವರ ಶ್ರೀ ಅಗಶ್ವೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ ಐತಾಳ್ ಅಧ್ಯಕ್ಷತೆವಹಿಸಿದ್ದರು. ತಾಳಮದ್ದಲೆ ಅರ್ಥಧಾರಿ ಉಜಿರೆ ಅಶೋಕ ಭಟ್, ಟಿ. ಸುನಂದಾ ಆನಂದರಾಯ ಶ್ಯಾನುಭಾಗ್ ನಾಗೂರು ಇದ್ದರು.

    Click here

    Click here

    Click here

    Call us

    Call us

    ಕಾರ್ತಿಕ್ ಧಾರೇಶ್ವರ್ ಸ್ವಾಗತಿಸಿ, ಗೋವಿಂದ ಎಂ. ಕಾರ್ಯಕ್ರಮ ನಿರ್ವಹಿಸಿದರು. ಜಿ. ರಾಘವೇಂದ್ರ ಮಯ್ಯ ಹಾಲಾಡಿ, ರಾಘವೇಂದ್ರ ಹೆಗಡೆ, ರಾಮಕೃಷ್ಣ ಮಂದಾರ್ತಿ ಇವರ ಹಿಮ್ಮೇಳದಲ್ಲಿ ಉಜಿರೆ ಅಶೋಕ ಭಟ್, ಮುರೂರು ರಮೇಶ ಭಂಡಾರಿ, ಸಂಕದಗುಂಡಿ ಗಣಪತಿ ಭಟ್, ಹರೀಶ ಬೊಳಂತಿಮೊಗರು, ಮೂಡುಬಗೆ ಸತೀಶ ಶೆಟ್ಟಿ ಇವರಿಂದ ಕೃಷ್ಣಾರ್ಜುನ ತಾಳಮದ್ದಲೆ ಜರುಗಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.