Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಲ್ಯಾಣಪುರ ತ್ರಿಶಾ ಪ.ಪೂ ಕಾಲೇಜಿನಲ್ಲಿ ಸಂಭ್ರಮದ ಕ್ರಿಯೇಟಿವ್ ಆವಿರ್ಭವ ವಾರ್ಷಿಕೋತ್ಸವ
    ಊರ್ಮನೆ ಸಮಾಚಾರ

    ಕಲ್ಯಾಣಪುರ ತ್ರಿಶಾ ಪ.ಪೂ ಕಾಲೇಜಿನಲ್ಲಿ ಸಂಭ್ರಮದ ಕ್ರಿಯೇಟಿವ್ ಆವಿರ್ಭವ ವಾರ್ಷಿಕೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ “ವಿವಿಧತೆಯಲ್ಲಿ ಏಕತೆ”ಯ ಪರಿಕಲ್ಪನೆಯ ಆವಿರ್ಭವ – 2024 ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.

    Click Here

    Call us

    Click Here

    ಮುಖ್ಯ ಅತಿಥಿಗಳಾಗಿ ಆಗಮಿಸಿದ ಖ್ಯಾತವಾಗ್ಮಿ, ನಿರೂಪಕರಾದ ಎನ್. ಆರ್. ದಾಮೋದರ ಶರ್ಮ ಬಾರ್ಕೂರು ಮಾತನಾಡಿ, ಶಿಕ್ಷಣದ ಉದ್ದೇಶ ಸಂಸ್ಕಾರವನ್ನು ಗಳಿಸುವುದು ಮಾತಾ ಪಿತೃಗಳು ಹಾಗೂ ಕಲಿಸಿದ ಗುರುಗಳ ಮೇಲೆ, ವಿದ್ಯೆ ಕಲಿತ ಸಂಸ್ಥೆಯ ಮೇಲೆ ಸದಾ ಗೌರವ ಇರಿಸಿಕೊಳ್ಳಬೇಕು. ವಿದ್ಯಾರ್ಥಿಗಳೆಲ್ಲರೂ ಭವ್ಯ ಭಾರತದ ಸತ್ಪ್ರಜೆಗಳಾಗಿ ಬಾಳಬೇಕು. ಕಷ್ಟಪಟ್ಟು ಕಲಿತಾಗ ಅದಕ್ಕೆ ತಕ್ಕ ಫಲ ಸಿಗುತ್ತದೆ. ಆದ್ದರಿಂದ ಎಲ್ಲರೂ ವಿದ್ಯಾ ವಿನಯ ಸಂಪನ್ನ ರಾಗಬೇಕೆಂದು ಕರೆ ನೀಡಿದರು.

    ಇನ್ನೋರ್ವ ಮುಖ್ಯ ಅತಿಥಿ ಮಿಲಾಗ್ರೀಸ್ ಚರ್ಚ್ನ ಧರ್ಮಗುರುಗಳಾದ ಫಾದರ್ ಫರ್ಡಿನಾಂಡ್ ಗೋನ್ಸಾಲ್ವೀಸ್ ಅವರು ಮಾತನಾಡುತ್ತಾ ಕಲಿಕೆಗೆ ಪೂರಕವಾದ ವಾತಾವರಣವಿರುವಾಗ ನಾವು ಅದರ ಸದುಪಯೋಗ ಪಡಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಅತಿ ಮುಖ್ಯವಾದದ್ದು ಆದ್ದರಿಂದ ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ತಾಳ್ಮೆ ಶಿಸ್ತಿನಿಂದ ಯಶಸ್ಸು ಪಡೆಯುವಂತಾಗಲಿ. ಬದ್ಧತೆಯಿಂದ ಕಾರ್ಯ ಸಾಧಿಸುವಂತಾಗಲಿ ಎಂದು ಶುಭ ಹಾರೈಸಿದರು.

    ತ್ರಿಶಾ ಫೌಂಡೇಶನ್ನ ಅಧ್ಯಕ್ಷರಾದ ಪ್ರಭಾಕರ್ ಭಂಡಾರಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಮ್ಮ ಕನಸುಗಳನ್ನು ನನಸು ಮಾಡಲು ಅವಿರತ ಶ್ರಮ ಇರಬೇಕು ಸ್ಪರ್ಧಾತ್ಮಕ ಯುಗದಲ್ಲಿ ನಾವು ಮುಂಚೂಣಿಯಲ್ಲಿ ರಬೇಕಾದರೆ ನಿರಂತರ ತರಬೇತಿ ಅವಶ್ಯಕ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಂದ ಅಮೋಘ ಪ್ರಯತ್ನ ಮತ್ತು ಸಾಧನೆ ಆಗಲಿ ಎಂದು ಆಶಿಸಿದರು.

    ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ ಕ್ರಿಯೇಟಿವ್ ವಿದ್ಯಾಸಂಸ್ಥೆಯ ವಿಶೇಷತೆ, ಕಲಿಕೆಗೆ ಪೂರಕ ವಾತಾವರಣ ಕಲ್ಪಿಸುವಿಕೆ ಮತ್ತು ವ್ಯವಸ್ಥೆಗಳ ಕುರಿತು ತಿಳಿಸಿ, ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆ ಹಗಲಿರಳೂ ಶ್ರಮಿಸುತ್ತಿದೆ ಎಂದರು.

    Click here

    Click here

    Click here

    Click Here

    Call us

    Call us

    ಸಭಾ ಕಾರ್ಯಕ್ರಮದಲ್ಲಿ ಕಳೆದ ವರ್ಷ ನಡೆದ ನೀಟ್, ಜೆಇಇ ಹಾಗೂ ಸಿಇಟಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆಗೈದು ಪ್ರತಿಷ್ಠಿತ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ “ಪ್ರತಿಭಾ ಪುರಸ್ಕಾರ” ನಡೆಯಿತು.

    ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ನ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್, ಅಶ್ವತ್ ಎಸ್. ಎಲ್., ಆದರ್ಶ್ ಎಂ.ಕೆ ಉಪಸ್ಥಿತರಿದ್ದರು.

    ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ. ಎಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ತ್ರಿಶಾ ಫೌಂಡೇಶನ್ ಕಾರ್ಯದರ್ಶಿ ಸರಿತಾ ಭಂಡಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಾಂಶುಪಾಲ ರಾಮಕೃಷ್ಣ ಹೆಗಡೆ ವಾರ್ಷಿಕ ವರದಿ ವಾಚಿಸಿದರು. ಹಿಂದಿ ಭಾಷಾ ಉಪನ್ಯಾಸಕ ಸುಧಾಕರ್ ಐಡಿ ಅತಿಥಿಗಳನ್ನು ಸ್ವಾಗತಿಸಿದರು. ಉಪಪ್ರಾಂಶುಪಾಲ ಜೋಯಲ್ ಫೆರ್ನಾಂಡಿಸ್ ವಂದನಾರ್ಪಣೆಗೈದರು. ಕನ್ನಡ ಉಪನ್ಯಾಸಕಿ ಪ್ರಿಯಾಂಕ ತೀರ್ಥರಾಮ್ ಕಾರ್ಯಕ್ರಮ ನಿರೂಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    11 − seven =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.