Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಕ್ವಾಡಿ ಗುರುಕುಲ ವಿದ್ಯಾಸಂಸ್ಥೆಯ 19ನೇ ವರ್ಷದ ವಾರ್ಷಿಕ ಕ್ರೀಡಾಕೂಟ
    ಊರ್ಮನೆ ಸಮಾಚಾರ

    ವಕ್ವಾಡಿ ಗುರುಕುಲ ವಿದ್ಯಾಸಂಸ್ಥೆಯ 19ನೇ ವರ್ಷದ ವಾರ್ಷಿಕ ಕ್ರೀಡಾಕೂಟ

    Updated:11/11/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ದೇಶ ಹಾಗೂ ವ್ಯಕ್ತಿಯ ಆರ್ಥಿಕ, ದೈಹಿಕ ಹಾಗೂ ಮಾನಸಿಕ ಆರೋಗ್ಯ ಚೆನ್ನಾಗಿದ್ದಾಗ ಮಾತ್ರ ವಾಸ್ತಾವಿಕ ಪರಿಸ್ಥಿತಿಗಳು ಆರೋಗ್ಯಕರವಾಗಿರುತ್ತದೆ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಎಸ್.ಪಿ ಸಿದ್ದಲಿಂಗಪ್ಪ ಎಸ್.ಟಿ ಅಭಿಪ್ರಾಯ ವ್ಯಕ್ತಪಡಿಸಿದರು.

    Click Here

    Call us

    Click Here

    ವಕ್ವಾಡಿಯ ಗುರುಕುಲ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ಗುರುಕುಲ ಪಬ್ಲಿಕ್ ಸ್ಕೂಲ್ ಹಾಗೂ ಪದವಿ ಪೂರ್ವ ಕಾಲೇಜಿನ 19 ವರ್ಷದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಗುರಿ, ತಾಳ್ಮೆ ಹಾಗೂ ನಿರಂತರ ಪರಿಶ್ರಮ ಇರಬೇಕು. ವಿದ್ಯಾರ್ಥಿಗಳಿಗೆ ಪಠ್ಯ ಅಭ್ಯಾಸಗಳ ಜೊತೆಯಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯವರ್ಧನೆಗೆ ಪೂರಕವಾಗಿರುವ ಪಠ್ಯೇತರ ಚಟುವಟಿಕೆಗಳು ಅಗತ್ಯವಾಗಿದೆ. ನಿರಂತರ ಕ್ರೀಡಾ ಅಭ್ಯಾಸಗಳನ್ನು  ಹೊಂದಿರುವ ಕ್ರೀಡಾಪಟುಗಳು ಜೀವನದಲ್ಲಿ ಯಶಸ್ಸು ಸಾಧಿಸುತ್ತಾರೆ. ಗೆಲ್ಲುವ ಗುರಿಯೊಂದಿಗೆ ಕ್ರೀಡೆಯಲ್ಲಿ ಭಾಗವಹಿಸುವುದೆ ಮುಖ್ಯ ಎನ್ನುವ ಮನೋಭಾವ ರೂಢಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಅವರು ಸಲಹೆ ನೀಡಿದರು.

    ಬಾಂಡ್ಯ ಎಜುಕೇಷನ್ ಟ್ರಸ್ಟ್ ನ ಜಂಟಿ ಆಡಳಿತ ಟ್ರಸ್ಟಿ ಬಾಂಡ್ಯ ಸುಭಾಶ್ಚಂದ್ರ ಶೆಟ್ಟಿ ಅವರು ಕ್ರೀಡೆಯಲ್ಲಿ ಭಾಗವಹಿಸುವುದೇ ಗುರಿಯಾಗಿರಬೇಕು. ಬದ್ದತೆ ಹಾಗೂ ಗುರಿಯನ್ನು ಹೊಂದಿರುವ ಪ್ರತಿಯೊಬ್ಬರೂ ಜೀವನದಲ್ಲಿ ಯಶಸ್ಸು ಸಾಧಿಸುತ್ತಾರೆ ಎಂದರು.

    ಈ ಸಂದರ್ಭದಲ್ಲಿ ಬಾಂಡ್ಯ ಎಜುಕೇಷನ್ ಟ್ರಸ್ಟ್ ನ ಜಂಟಿ ಕಾರ್ಯನಿರ್ವಾಹಕಿ ಅನುಪಮಾ ಎಸ್. ಶೆಟ್ಟಿ, ಗುರುಕುಲ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಕೆ.ಸಿ ರಾಜೇಶ್, ಗುರುಕುಲ ಪಿಯು ಕಾಲೇಜಿನ ಪ್ರಾಂಶುಪಾಲ ಅವಿನಾಶ್ ಆಚಾರ್ಯ, ಗುರುಕುಲ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲ ಸುನೀಲ್ ಪ್ಯಾಟ್ರಿಕ್ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಸಂಸ್ಥೆಯ ಧ್ವಜಾರೋಹಣ ನೆರವೇರಿಸಿ, ಪಥ ಸಂಚಲನ ತಂಡಗಳಿಂದ ಗೌರವ ರಕ್ಷೆ ಸ್ವೀಕರಿಸಿ, ಕ್ರೀಡಾ ಜ್ಯೋತಿಯನ್ನು ಹಸ್ತಾಂತರಿಸಿದ ಹೆಚ್ಚುವರಿ ಎಸ್.ಪಿ ಅವರು ಬಣ್ಣದ ಬಲೂನ್ ಗಳನ್ನು ಗಗನಕ್ಕೆ ಹಾರಿಸಿ ಬಿಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದ್ದರು.

    ಶಾಲೆಯ‌ ಕ್ರೀಡಾ ವಿದ್ಯಾರ್ಥಿಗಳ‌ ತಂಡದ ಕ್ಯಾಪ್ಟನ್ ಭರತ್ ಬಿ.ಎಸ್  ಪಥಸಂಚಲನಕ್ಕೆ ಅನುಮತಿ ಪಡೆದರು. ವಿದ್ಯಾರ್ಥಿಗಳು ವಿವಿಧ ತಂಡಗಳಲ್ಲಿ ಪದೇ ಸಂಚಲನ ನಡೆಸಿ ಗೌರವ ರಕ್ಷೆ ನೀಡಿದರು. ಶಾಲೆಯ ಕ್ರೀಡಾ ನಾಯಕ ಈಶ್ವರ ಎನ್.ಆರ್ ವಚನ ಸ್ವೀಕರಿಸಿದರು. ವಿದ್ಯಾರ್ಥಿಗಳ ಸಾಮೂಹಿಕ ಭಾಗವಹಿಸುವಿಕೆಯಲ್ಲಿ ಏರೋಬಿಕ್ಸ್ ಪ್ರದರ್ಶನ ನಡೆಯಿತು.

    ಸಹ ಶಿಕ್ಷಕಿ ಸುಜಾತ ಕಿರಣ್ ಶೆಟ್ಟಿ ನಿರೂಪಿಸಿ, ಉಪನ್ಯಾಸಕಿ ದೀಪಾ ಆರ್. ಕಾಮತ್ ಸ್ವಾಗತಿಸಿ, ಸಹ ಶಿಕ್ಷಕಿ ಚೇತನಾ ಶೆಣೈ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    14 + 7 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.