Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಲು ನಿರ್ಧರಿಸಿದೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ
    ಉಡುಪಿ ಜಿಲ್ಲೆ

    ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಲು ನಿರ್ಧರಿಸಿದೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಡಾ. ಕೆ. ಕಸ್ತೂರಿ ರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ಆಧಾರದ ಮೇಲೆ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಿರುವ ಕರಡು ಅಧಿಸೂಚನೆ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಸದ್ಯದ ಪರಿಸ್ಥಿತಿಯಲ್ಲಿ ಜನರಲ್ಲಿ ಆತಂಕ ಬೇಡ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಮತ್ತು ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಸರ್ಕಾರದ ಅರಣ್ಯ ಕಾಯಿದೆಗಳು ಅರಣ್ಯ ಇಲಾಖೆಯ ನೀತಿ ನಿಯಮಗಳಿಂದ ನಿರಂತರ ತೊಂದರೆಗೊಳಗಾಗುತ್ತಿರುವ ಕಾಡಂಚಿನ ಭಾಗದ ನಿವಾಸಿಗಳಿಗೆ ಇನ್ನೂ ಕಸ್ತೂರಿ ರಂಗನ್ ವರದಿ ಜಾರಿಯಾದರೆ ವಿದ್ಯುತ್, ರಸ್ತೆ, ಸೇತುವೆ, ಕುಡಿಯುವ ನೀರು, ಜನವಸತಿ ಪ್ರದೇಶ, ವಸತಿ ಪ್ರದೇಶ, ಮನೆಗಳ ನಿರ್ಮಾಣ ಸೇರಿದಂತೆ ಮತ್ತಿತರ ಮೂಲಸೌಕರ್ಯಗಳಿಗೆ ಕುತ್ತು ಬಂದು ಭವಿಷ್ಯದಲ್ಲಿ ಜನರ ಜೀವನೋಪಾಯಕ್ಕೆ ಅನಾನುಕೂಲ ಉಂಟಾಗಬಹುದೆಂಬ ಆತಂಕ ಮಡುಗಟ್ಟಿದೆ. ಸದ್ಯದ ಪರಿಸ್ಥಿತಿಯಲ್ಲಿ ಪಶ್ಚಿಮ ಘಟ್ಟದ ಪರಿಸರ ಸೂಕ್ಷö್ಮ ಪ್ರದೇಶವೆಂದು ಘೋಷಿಸುವ ಬಗ್ಗೆ ಡಾ. ಕೆ. ಕಸ್ತೂರಿ ರಂಗನ್ ವರದಿ  ಆಧಾರಿಸಿದ ಕರಡು ಅಧಿಸೂಚನೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ ಎಂದರು.

    ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿಯನ್ನು ಆಧಾರಿಸಿ, ಸೂಕ್ಷ್ಮ ಪ್ರದೇಶವೆಂದು ಘೋಷಿಸಲು ಈಗಾಗಲೇ 6 ಬಾರಿ ಅಧಿಸೂಚನೆಯನ್ನು ಹೊರಡಿಸಿದೆ. ಆದರೆ ಈವರೆಗೂ ಅದು ಜಾರಿಗೆ ಬಂದಿರುವುದಿಲ್ಲ. ಮುಂದಿನ ದಿನಗಳಲ್ಲಿ ಜಾರಿ ಮಾಡಲು ಮುಂದಾಗಬಹುದು. ಇದರಿಂದ ಜನರಿಗೆ ಸಮಸ್ಯೆ ಉಂಟಾಗುತ್ತದೆ. ಸ್ಥಳೀಯವಾಗಿ ವಾಸಿಸುವ ಜನರ ಆಕ್ಷೇಪಣೆಗಳು, ಅವರಿಗೆ ಆಗುವ ಅನಾನುಕೂಲಗಳನ್ನು ಮೇಲ್ಮಟ್ಟದಲ್ಲಿ ತಿಳಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು ಎಂದರು.

    ಪ್ರಸ್ತುತ ಜಾರಿಯಲ್ಲಿರುವ ಇಕೋ ಸೆನ್ಸಿಟೀವ್ ಝೋನ್ ನಿಂದ ಕಾಡಂಚಿನ ಸುರಕ್ಷಿತ ಅರಣ್ಯ ಪ್ರದೇಶ ಹಾಗೂ ವನ್ಯಜೀವಿ ಅಭಯಾರಣ್ಯ ಪ್ರದೇಶ ವ್ಯಾಪ್ತಿಯಿಂದ ಒಂದು ಕಿ.ಮೀ ವ್ಯಾಪ್ತಿಯ ಬಫರ್ ಝೋನ್‌ಗಳಲ್ಲಿ ಜನರು ಯಾವುದೇ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಳ್ಳಲು ಇಕೋ ಸೆನ್ಸಿಟೀವ್ ಝೋನ್‌ನ ಮಾನಿಟರಿಂಗ್ ಕಮಿಟಿಯ ಪೂರ್ವಾನುಮತಿ ಪಡೆಯುವುದು ಅವಶ್ಯಕತೆ ಇದ್ದು, ಇದರಿಂದ ಜನರ ದೈನಂದಿನ ಜೀವನಗಳ ಆಗು-ಹೋಗುಗಳಿಗೆ ತೊಂದರೆ ಉಂಟಾಗುತ್ತಿದೆ. ಇದನ್ನು ಸ್ಥಳೀಯವಾಗಿ ಅನುಮತಿ ನೀಡುವ ಕೆಲವೊಂದು ತಿದ್ದುಪಡಿಗಳು ಆಗಬೇಕಿದೆ ಎಂದರು.

    Click here

    Click here

    Click here

    Call us

    Call us

    ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ಸರಕಾರಗಳು ಜಾರಿಗೆ ತರುವ ನೀತಿ ನಿಯಮಗಳು ಹಾಗೂ ಕಾನೂನುಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ಅಧಿಕಾರಿಗಳ ಮೇಲೆ ಇರುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಿದೆ ಎಂದ ಅವರು, ಪ್ರಸ್ತುತ ಜಾರಿಯಲ್ಲಿರುವ ಇಕೋ ಸೆನ್ಸಿಟಿವ್ ಝೋನ್‌ನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಮಾನಿಟರಿಂಗ್ ಕಮಿಟಿಯ ಪೂರ್ವಾನುಮತಿ ಪಡೆಯುವುದು ಅವಶ್ಯವಿರುತ್ತದೆ. ಪರಿಸರಕ್ಕೆ ಹಾನಿಯಾಗದೇ ಇರುವ ಬಗ್ಗೆ ಪರಿಶೀಲಿಸಿ, ಅನುಮತಿಯನ್ನು ನೀಡುತ್ತಿದೆ ಎಂದರು.

    ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಸರಕಾರಗಳು ಜಾರಿಗೆ ತರುವ ಕಾನೂನುಗಳಿಂದ ಜನಸಾಮಾನ್ಯರ ಮೇಲೆ ದುಷ್ಪರಿಣಾಮಗಳು ಉಂಟಾಗುತ್ತವೆ. ಜನರ ಇವುಗಳನ್ನು ಜಾರಿಗೆ ತರುವ ಮುನ್ನ ಜನರ ಆಕ್ಷೇಪಣೆಗಳ ಬಗ್ಗೆಯೂ ಆಲಿಸಿ, ಸಾಧಕ-ಬಾಧಕಗಳನ್ನು ಪರಾಮರ್ಶಿಸಿ, ಜಾರಿಗೆ ತರಬೇಕು ಎಂದ ಅವರು, ಇಕೋ-ಸೆನ್ಸಿಟಿವ್ ಝೋನ್‌ನ ವ್ಯಾಪ್ತಿಯ ಒಂದು ಕಿ.ಮೀ ಬಫರ್ ಝೋನ್ ಪ್ರದೇಶವು ಯಾವ-ಯಾವ ಗ್ರಾಮಗಳಲ್ಲಿ, ಯಾವ ಯಾವ ಸರ್ವೇ ನಂಬರ್ ಒಳಗೊಂಡಿವೆ ಎಂಬುದರ ಬಗ್ಗೆ ನಿಖರ ಮಾಹಿತಿಯನ್ನು ಜನರಿಗೆ ತಿಳಿಸಬೇಕು. ಆದರೆ ಪ್ರಸ್ತುತ ಈ ಬಗ್ಗೆ ಸರಿಯಾದ ಮಾಹಿತಿ ಇರುವುದಿಲ್ಲ. ಕಂದಾಯ ಹಾಗೂ ಅರಣ್ಯ ಇಲಾಖೆಯು ಜಂಟಿ ಸರ್ವೆಯನ್ನು ಮಾಡಿ, ಇದರ ಗಡಿಯನ್ನು ಗುರುತಿಸಬೇಕಿದೆ ಎಂದರು.

    ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಮಾತನಾಡಿ, ಯಾವುದೇ ವರದಿಯನ್ನು ಜಾರಿಗೆ ತರುವ ಮುನ್ನ ಜನರಿಗೆ ಆಗುವ ತೊಂದರೆಗಳು, ಅನುಕೂಲಗಳು ಹಾಗೂ ಸಿಗುವ ಸೌಲಭ್ಯಗಳ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಬೇಕು. ಕಸ್ತೂರಿ ರಂಗನ್ ವರದಿಯ ಜಾರಿಗೆ ಮುಂದಾಗಿರುವುದು ಕಾಡಂಚಿನ ಜನರಿಗೆ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಅಥವಾ ವರದಿ ಜಾರಿ ಮಾಡಲು ಸೂಚಿಸಿರುವ ಸರ್ವೋಚ್ಚ ನ್ಯಾಯಾಲಯದ ಗಮನಕ್ಕೆ ತರಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿರುತ್ತದೆ. ಈ ಕಾರ್ಯವನ್ನು ತಪ್ಪದೇ ಮಾಡಬೇಕು ಎಂದರು.    

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು ಎಂ, ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು, ತಾಲೂಕು ಪಂಚಾಯತ್ ಇ.ಓ ಗಳು, ಅಧಿಸೂಚಿತ ಗ್ರಾಮ ಪ್ರದೇಶಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮತ್ಸ್ಯಸಂಪದ ಯೋಜನೆಯಡಿ ಸಹಾಯಧನ ಸೌಲಭ್ಯ: ಮೀನುಗಾರರಿಂದ ಅರ್ಜಿ ಆಹ್ವಾನ

    09/12/2025

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿನಿಯರು ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಚಾಂಪಿಯನ್‌ಶಿಪ್
    • ಕೊಡಿ ಹಬ್ಬಕ್ಕೆ ಹೋದ ಮಹಿಳೆ ನಾಪತ್ತೆ
    • ಕುಂದಾಪುರ: ಇನಿದನಿ ಆಮಂತ್ರಣ ಪತ್ರಿಕೆ ಅನಾವರಣ
    • ಮತ್ಸ್ಯಸಂಪದ ಯೋಜನೆಯಡಿ ಸಹಾಯಧನ ಸೌಲಭ್ಯ: ಮೀನುಗಾರರಿಂದ ಅರ್ಜಿ ಆಹ್ವಾನ
    • ಆನೆಗುಡ್ಡೆ: ನೂತನವಾಗಿ ನಿರ್ಮಾಣವಾದ ಶ್ರೀ ವಿನಾಯಕ ಬಿತ್ತಿ ಶಿಲ್ಪ ಲೋಕಾರ್ಪಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d