Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಕಾಲೇಜಿನಲ್ಲಿ ́ಸಂಸ್ಥೆಯ ಆವರಣದಲ್ಲಿ ಜವಾಬ್ದಾರಿಯುತ ಸಂಸ್ಕೃತಿಯ ನಿರ್ಮಾಣ’ ಕಾರ್ಯಾಗಾರ
    alvas nudisiri

    ಆಳ್ವಾಸ್ ಕಾಲೇಜಿನಲ್ಲಿ ́ಸಂಸ್ಥೆಯ ಆವರಣದಲ್ಲಿ ಜವಾಬ್ದಾರಿಯುತ ಸಂಸ್ಕೃತಿಯ ನಿರ್ಮಾಣ’ ಕಾರ್ಯಾಗಾರ

    Updated:18/11/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ದೌರ್ಜನ್ಯ ಕುರಿತು ಕೇವಲ ನೊಂದ ಮಹಿಳೆ ಮಾತ್ರವಲ್ಲ, ಅವರ ಪರವಾಗಿ ಯಾರು ಬೇಕಾದರೂ ದೂರು ನೀಡಬಹುದು. ಮಹಿಳೆ ಮೇಲೆ ಮಹಿಳೆಯೇ ದೌರ್ಜನ್ಯ ಎಸಗಿದರೂ ಅಪರಾಧ ಎಂದು ಹೊಳ್ಳ ಆ್ಯಂಡ್ ಹೊಳ್ಳ ಅಸೋಸಿಯೇಟ್ಸ್‌ನ ಮೇಘನಾ ಆರ್. ಬಲ್ಲಾಳ್ ಹೇಳಿದರು.

    Click Here

    Call us

    Click Here

    ಆಳ್ವಾಸ್ (ಸ್ವಾಯತ್ತ) ಕಾಲೇಜು ಆಂತರಿಕ ಗುಣಮಟ್ಟ  ಮೌಲ್ಯಮಾಪನ ಘಟಕ (ಐಕ್ಯೂಎಸಿ), ಲೈಂಗಿಕ ದೌರ್ಜನ್ಯ ತಡೆ ಘಟಕ, ಸಮಾಜಕಾರ್ಯ ವಿಭಾಗವು ಬೋಧನಾಂಗ ಅಭಿವೃದ್ಧಿ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡ ‘ಸಂಸ್ಥೆಯ ಆವರಣದಲ್ಲಿ ಜವಾಬ್ದಾರಿಯುತ ಸಂಸ್ಕೃತಿಯ ನಿರ್ಮಾಣ’ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

    ಮೂಡುಬಿದಿರೆ ಮನೆತನದ ಅಬ್ಬಕ್ಕ ನಮ್ಮ ಹೆಮ್ಮೆ. ಆಕೆಯ ಸಾಧನೆ ಎಲ್ಲರಿಗೂ ಮಾದರಿಯಾಗಬೇಕು. ದೇಶದಲ್ಲಿ 1990 ಬಳಿಕ ಮಹಿಳೆಯರು ಕೆಲಸಕ್ಕೆ ಬರುವ ಸಂಖ್ಯೆ ಹೆಚ್ಚಾಯಿತು. ರಾಜಸ್ಥಾನದ ಭವಾರಿ ದೇವಿ ಅತ್ಯಾಚಾರಕ್ಕೆ ಒಳಗಾದ ಸಂದರ್ಭದಲ್ಲಿ  ವಿಶಾಖ ಸಂಸ್ಥೆಯ ಹೋರಾಟದ ಫಲವಾಗಿ ಕಾಯಿದೆ ರೂಪಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿತು. ಹೀಗಾಗಿ ‘ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ (ತಡೆ, ಮುಂಜಾಗ್ರತೆ ಹಾಗೂ ಪುನರ್ವಸತಿ) ಕಾಯಿದೆ -2013′ ಜಾರಿಗೆ ಬಂತು. ಈ ಕಾಯಿದೆ ಎಲ್ಲಾ ಮಹಿಳೆಯರಿಗೆ ಅನ್ವಯಿಸುತ್ತದೆ. ಪುರುಷರು ಮಾತ್ರವಲ್ಲ, ಯಾರೇ ದೌರ್ಜನ್ಯ ನಡೆಸಿದರೂ ಶಿಕ್ಷೆಗೆ ಒಳಗಾಗುತ್ತಾರೆ. ದೌರ್ಜನ್ಯ ತಿಳಿದರೆ ತಕ್ಷಣವೇ ದೂರು ನೀಡಿ ಎಂದರು.

    ಭೌತಿಕ ಸಂಪರ್ಕ ಮಾತ್ರವಲ್ಲ ಮಾನಸಿಕವಾಗಿ ಎಸಗುವ ಲೈಂಗಿಕ ದೌರ್ಜನ್ಯವೂ ಶಿಕ್ಷೆಗೆ ಅರ್ಹ. ಸಹೋದ್ಯೋಗಿಗಳ ಕುರಿತು ಗಾಸಿಪ್ ಮಾಡುವುದೂ ದೌರ್ಜನ್ಯ. ಭಾವನಾತ್ಮಕ ಮತ್ತು ಮಾನಸಿಕ ನೋವು ನೀಡುವುದೂ ದೌರ್ಜನ್ಯ. ಭೌತಿಕ, ನೋಟ, ಮಾತು, ಆನ್ ಲೈನ್ ಸಂದೇಶ- ಕರೆ ಇತ್ಯಾದಿಗಳೂ ದೌರ್ಜನ್ಯದ ಭಾಗ. ಪ್ರತಿ ಸಂಸ್ಥೆಯಲ್ಲಿ ಮಹಿಳಾ ದೌರ್ಜನ್ಯ ತಡೆ ಘಟಕ ಕಡ್ಡಾಯವಾಗಿ ಇರಬೇಕು. ಸಾರ್ವಜನಿಕವಾಗಿಯೂ ಘಟಕಗಳಿವೆ. ಈ ಬಗ್ಗೆ ಕಾರ್ಮಿಕ ನ್ಯಾಯಾಲಯದಲ್ಲೂ ದೂರು ದಾಖಲಿಸಬಹುದು. ದೌರ್ಜನ್ಯ ಪ್ರಕರಣದಲ್ಲಿ  ಸಂಧಾನ ಒಳ್ಳೆಯದಲ್ಲ. ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಕಾಯಿದೆ ಪ್ರಕಾರ ವಿದ್ಯಾರ್ಥಿನಿಯರೂ ದೂರು ನೀಡಬಹುದು ಎಂದರು.

    ಆಳ್ವಾಸ್ ಶಿಕ್ಷಣ  ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟ್ ವಿವೇಕ್ ಆಳ್ವ ಮಾತನಾಡಿ,  ಮಹಿಳೆಯರ ಭೌತಿಕ ಸುರಕ್ಷತೆಯಷ್ಟೇ ಮಾನಸಿಕ ಸುರಕ್ಷತೆಯು ಮುಖ್ಯ.  ಭಾರತವು ಸೇರಿದಂತೆ ಪ್ರಪಂಚದ ವಿವಿಧ ದೇಶಗಳಲ್ಲಿ ಮಹಿಳೆ, ಪುರುಷರಿಗೆ ಸಮನಾಂತರವಾಗಿ ಕೆಲಸ ನಿರ್ವಹಿಸುತ್ತಿದ್ದು, ಸಹಜವಾಗಿ ಆ ದೇಶಗಳ ಒಟ್ಟು ದೇಶಿಯ ಉತ್ಪನ್ನ(ಜಿಡಿಪಿ)ದ ವೃದ್ಧಿಯಲ್ಲಿ ಮಹಿಳೆಯರ ಕೊಡುಗೆ ಅಪಾರ. ಯಾವ ದೇಶ ಮಹಿಳೆಯರನ್ನು ನಿರ್ಲಕ್ಷಿಸುತ್ತಿದೆಯೋ ಅಲ್ಲಿ ನಿರೀಕ್ಷಿತ ಪ್ರಗತಿ ಸಾಧ್ಯವಾಗಿಲ್ಲ. ಸಮಾಜದಲ್ಲಿ ಉಸಿರುಗಟ್ಟುವಿಕೆ ವಾತಾವರಣ ದೂರವಾಗಬೇಕು. ಸಮಸ್ಯೆಗಳ ಬಗ್ಗೆ ಮಾತನಾಡಿ, ಜಾಗೃತರಾಗಿ, ಸಮಾಜವನ್ನು ಎಚ್ಚರಿಸಿ. ಮಹಿಳೆಯರಿಗೆ ಗೌರವ ನೀಡುವ ಮೌಲ್ಯಯುತ ಸಂಸ್ಕೃತಿಯ ಸಮಾಜದ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ ಎಂದರು.

    ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ತಾಯಿಯ ಅಸುರಕ್ಷಿತ ಭಯವು ಒಂದು ಸಮುದಾಯವನ್ನೇ ಹಲವು ಶತಮಾನಗಳ ಹಿಂದೆ ಕೊಂಡೊಯ್ಯಬಹುದು. ಮಹಿಳೆ ರಾತ್ರಿ ಅಡ್ಡಾಡಲು ಯಾಕೆ ಸಾಧ್ಯವಾಗುತ್ತಿಲ್ಲ ಎಂಬುದರ ಬಗ್ಗೆ ಪುರುಷರು ಯೋಚಿಸಬೇಕಾಗಿದೆ. ಸುರಕ್ಷತೆಯ ಪಟ್ಟಿಯಲ್ಲಿ ಭಾರತವು 190 ರಾಷ್ಟ್ರಗಳ ಪೈಕಿ 134ನೇ ಸ್ಥಾನದಲ್ಲಿದೆ. ಮಹಿಳೆಯ ಸುರಕ್ಷತೆ ನಿಟ್ಟಿನಲ್ಲಿ ಪುರುಷರು ಜವಾಬ್ದಾರಿ ವಹಿಸಬೇಕು ಎಂದರು.

    ಘಟಕ ಸಂಯೋಜಕಿ ಡಾ. ಸ್ವಪ್ನಾ ಆಳ್ವ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಆಡಳಿತ ಅಧಿಕಾರಿ ಬಾಲಕೃಷ್ಣ ಶೆಟ್ಟಿ ಇದ್ದರು.

    Click here

    Click here

    Click here

    Call us

    Call us

    ಲೂಯಿಸ್ ಕಾರ್ಯಕ್ರಮ ನಿರೂಪಿಸಿದರು. ಅಬ್ದುಲ್ ರೆಹಮಾನ್ ಸ್ವಾಗತಿಸಿದರು. ಇಂಶಾ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    19/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025

    ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.