ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ: ಇಲ್ಲಿನ ಪ್ರತಿಷ್ಠಿತ ಮದರ್ ತೆರೆಸಾಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಎರಡು ಪ್ರತ್ಯೇಕ ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಎರಡರಲ್ಲಿಯೂ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ಕುಂದಾಪುರದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನ.15ರಂದು ಆಯೋಜಿಸಿದ ಅಂತರ್ಕಾಲೇಜು ಸ್ಪರ್ಧೆ “ಉಗಮ-2024″ರ ಸಮಗ್ರ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಶಂಕರನಾರಾಯಣದ ಮದರ್ ತೆರೆಸಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘವಾದ ಸಾಧನೆಗೈದಿದ್ದಾರೆ.
ಇಂಗ್ಲಿಷ್ ಭಾಷಣದಲ್ಲಿ ಸಾನ್ವಿ ಶೆಟ್ಟಿ ಪ್ರಥಮ, ಪಾತ್ರ ಪ್ರವೀಣ (ಅಣಕು ಸಂದರ್ಶನ)ದಲ್ಲಿ ಸುಮಂತ್ ಶೆಟ್ಟಿ ದ್ವಿತೀಯ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಮ್ಯಾಡ್ ಆಡ್ ನಲ್ಲಿ ಪ್ರಥಮ ಕ್ಯಾಂಪಸ್ ರೀಲ್ಸ್ ನಲ್ಲಿ ತೃತೀಯ ಸ್ಥಾನವನ್ನು ಪಡೆಯುವುದರ ಮೂಲಕ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ಕುಂದಾಪುರದ ಮೂಡ್ಲಕಟ್ಟೆಯ ಐ ಎಮ್ ಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಕಾಮರ್ಸ್ ಇಲ್ಲಿ ನ.16ರಂದು ನಡೆದ “NAVONMESH” ಅಂತರ್ಕಾಲೇಜು ಸ್ಫರ್ಧೆಯಲ್ಲಿ, ಮದರ್ ತೆರೆಸಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಅತ್ಯುತ್ತಮ ಪ್ರತಿಭಾಭಿವ್ಯಕ್ತಿಯ ಮೂಲಕ ಸ್ಪರ್ಧೆಯ ಸಮಗ್ರ ಪ್ರಶಸ್ತಿ ನಗದು ಪುರಸ್ಕಾರವನ್ನು ತಮ್ಮದಾಗಿಸಿಕೊಂಡಿದ್ದಾರೆ
ಕರುನಾಡ ವೈಭವ ಎಂಬ ಶೀರ್ಷಿಕೆಯಡಿಯಲ್ಲಿದ್ದ ವೈವಿಧ್ಯಮಯ ಪ್ರದರ್ಶನದಲ್ಲಿ ಪ್ರಥಮ, ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ಭರತನಾಟ್ಯದಲ್ಲಿ ಪ್ರಥಮ ಕೊಲಾಜ್ ರಚನೆಯಲ್ಲಿ ಪ್ರಥಮ ಏಕಪಾತ್ರಾಭಿನಯದಲ್ಲಿ ಪ್ರಥಮ ವಿಡಿಯೋಗ್ರಫಿಯಲ್ಲಿ ಪ್ರಥಮ ಐಟಿ ರಸಪ್ರಶ್ನೆಯಲ್ಲಿ ದ್ವಿತೀಯ ಹಾಗೂ ಮ್ಯಾಡ್ ಆಡ್ ನಲ್ಲಿ ದ್ವಿತೀಯ ಸ್ಥಾನವನ್ನು ಪಡೆಯುವುದರ ಮೂಲಕ ಸಮಗ್ರ ಚಾಂಪಿಯನ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ವಿದ್ಯಾರ್ಥಿಗಳ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಶ್ಲಾಘಿಸಿದ್ದಾರೆ.















