Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಹಕಾರಿ ಸಂಘಗಳಿಂದ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸವಾಗಲಿ: ಶಾಸಕ ಗುರುರಾಜ ಗಂಟಿಹೊಳೆ
    ಊರ್ಮನೆ ಸಮಾಚಾರ

    ಸಹಕಾರಿ ಸಂಘಗಳಿಂದ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸವಾಗಲಿ: ಶಾಸಕ ಗುರುರಾಜ ಗಂಟಿಹೊಳೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು: ಇಂದು ಬ್ಯಾಂಕಿಂಗ್ ಕ್ಷೇತ್ರ ದೊಡ್ಡ ಮಟ್ಟದಲ್ಲಿ ವಿಸ್ತರಣೆಗೊಂಡರು, ಅವುಗಳಿಗೆ ಸವಾಲೆಸುವ ರೀತಿಯಲ್ಲಿ ಸಹಕಾರಿ ಕ್ಷೇತ್ರ ಬೆಳೆದಿದೆ, ಸಹಕಾರಿರಂಗ ಗ್ರಾಮೀಣ ಜನರ ಒಡನಾಡಿಯಾಗಿ ಕೆಲಸಮಾಡುತ್ತಿದ್ದು ಇದು ಸಾಲಶೂಲಕ್ಕೆ ಬದಲಾಗಿ ಉದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಹೊಸತನ ತಂದು ಅದರ ಲಾಭದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಜನರಿಗೆ ಸ್ಪಂದಿಸುವ ಕೆಲಸಮಾಡಬೇಕು ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.

    Click Here

    Call us

    Click Here

    ಭಾನುವಾರ ನಾಗೂರು ಲಲಿತಾಕೃಷ್ಣ ಸಭಾಭವನದಲ್ಲಿ ಕರ್ನಾಟಕ ಸಹಕಾರಿ ಮಹಾಮಂಡಲ ರಿ. ಬೆಂಗಳೂರು, ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ ಕಂಬದಕೊಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಹಾಗೂ ಪ್ರತಿಭಾ ಪುರಸ್ಕಾರ, ಸನ್ಮಾನ, ಗೌರವಧನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಸಹಕಾರಿರಂಗವು ಸಹಕಾರ ಮತ್ತು ನಂಬಿಕೆಯ ಮೇಲೆ ನಡೆಯುತ್ತಿದ್ದು, ಬ್ಯಾಂಕಿಂಗ್ ಕ್ಷೇತ್ರಕ್ಕಿಂತಲೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬಿಗಿ ಕಾನೂನಿನ ಹಿಡಿತಕ್ಕೆ ಒಳಪಟ್ಟಿದೆ. ಸಂಘಗಳು ಬಡವರಿಗೆ ಹತ್ತಿರವಾಗಿ ಕೆಲಸಮಾಡಿ ಅವರ ನಿರೀಕ್ಷೆ ಹೆಚ್ಚಿಸಬೇಕು ಎಂದ ಅವರು ತನ್ನ ಲಾಭಾಂಶದಲ್ಲಿ ಪ್ರತಿಭಾ ಪುರಸ್ಕಾರ, ಸರ್ಕಾರಿ ಶಾಲಾ ಶಿಕ್ಷಕರಿಗೆ ಗೌರವಧನ ವಿತರಣೆ, ಸೇರಿದಂತೆ ನಾನಾ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿರುವ ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಕಾರ್ಯವೈಖರಿಯನ್ನು ಶ್ಲಾಘಿಸಿದರು.

    ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಈಶ್ವರ ಹಕ್ಲತೋಡ್ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಪ್ರತಿಭಾ ಪುರಸ್ಕಾರ ವಿತರಿಸಿ ಹಾಗೂ ಸಾಧಕರನ್ನು ಸನ್ಮಾನಿಸಿದರು. ದಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಎಸ್. ರಾಜ ಪೂಜಾರಿ, ಎಂ. ಮಹೇಶ್ ಹೆಗ್ಡೆ, ಕಿರಿಮಂಜೇಶ್ವರ ಗ್ರಾ.ಪಂ. ಅಧ್ಯಕ್ಷ ಶೇಖರ ಖಾರ್ವಿ, ಸಹಕಾರಿ ಸಂಘಗಳ ಉಪ ನಿಬಂದಕಿ ಲಾವಣ್ಯ ಕೆ.ಆರ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕಿ ಲಲಿತಾಕ್ಷಿ, ವ್ಯವಸ್ಥಾಪಕ ವಿಶ್ವನಾಥ, ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ಬಿ. ರಘುರಾಮ ಶೆಟ್ಟಿ, ಮೋಹನ್ ಪೂಜಾರಿ, ಬಿ.ಎಸ್. ಸುರೇಶ ಶೆಟ್ಟಿ, ಗುರುರಾಜ್ ಹೆಬ್ಬಾರ್, ವೀರೇಂದ್ರ ಶೆಟ್ಟಿ, ಮಂಜು ದೇವಾಡಿಗ, ನಾಗರಾಜ ಖಾರ್ವಿ, ಭರತ್ ದೇವಾಡಿಗ, ಹೂವ ನಾಯ್ಕ, ದಿನಿತಾ ಶೆಟ್ಟಿ, ಜಲಜಾಕ್ಷಿ ಪೂಜಾರಿ ಉಪಸ್ಥಿತರಿದ್ದರು.

    ಕೋಟ ಶ್ರೀ ವಿವೇಕ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ ನರೇಂದ್ರಕುಮಾರ್ ಕೋಟ ಸಹಕಾರಿ ಉದ್ಯಮಗಳಲ್ಲಿ ಪರಿವರ್ತನೆ ಎಂಬ ವಿಷಯದ ಬಗ್ಗೆ ದಿಕ್ಸೂಚಿ ಭಾಷಣ ಮಾಡಿದರು.

    Click here

    Click here

    Click here

    Click Here

    Call us

    Call us

    ಈ ಸಂದರ್ಭ  ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ವತಿಯಿಂದ ಮಹಾಮಂಡಲದ ಶಿಕ್ಷಣನಿಗೆ 9,02,172 ಚೆಕ್‌ನ್ನು ವಿತರಿಸಲಾಯಿತು. ಇತ್ತೀಚಿಗೆ ನಿವೃತ್ತರಾದ ಶಿಕ್ಷಕ ಗಿರೀಶ್ ಶ್ಯಾನುಭಾಗ್ ಹಾಗೂ ಬೈಂದೂರು ಕ್ಷೇತ್ರ ಶಿಕ್ಷಣಾಕಾರಿ ಕಚೇರಿಯ ಸಿಬ್ಬಂದಿ ಗೋವಿಂದ ಗಾಣಿಗ ಅವರನ್ನು ಸನ್ಮಾನಿಸಲಾಯಿತು. ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ವ್ಯಾಪ್ತಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು, ಸಂಘದ ವ್ಯಾಪ್ತಿಯ ಸರ್ಕಾರಿ ಶಾಲಾ ಗೌರವ ಶಿಕ್ಷಕರಿಗೆ ಗೌರವಧನ ವಿತರಿಸಲಾಯಿತು.

    ಸಂಘದ ಮುಖ್ಯ ಕಾರ್ಯನಿರ್ವಹಣಾಕಾರಿ ವಿಷ್ಣು ಪೈ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು, ಹಿರಿಯ ವ್ಯವಸ್ಥಾಪಕ ಚಂದ್ರಯ್ಯ ಶೆಟ್ಟಿ ವಂದಿಸಿ,  ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    two × one =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.