Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರಿನಲ್ಲಿ ಅವಳಿ ಅಪಘಾತ: ಈರ್ವ ಬೈಕ್ ಸವಾರರ ದುರ್ಮರಣ
    ಅಪಘಾತ-ಅಪರಾಧ ಸುದ್ದಿ

    ಬೈಂದೂರಿನಲ್ಲಿ ಅವಳಿ ಅಪಘಾತ: ಈರ್ವ ಬೈಕ್ ಸವಾರರ ದುರ್ಮರಣ

    Updated:22/11/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು: ಶನಿವಾರ ಮಧ್ಯಾಹ್ನದ ವೇಳೆಗೆ ಬೈಂದೂರಿನ ಹೊಸ ಬಸ್ ನಿಲ್ದಾಣದ ಬಳಿ ಹಾಗೂ ನಾಕಟ್ಟೆಯ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಬೈಂದೂರಿನ ಶಿಕ್ಷಕ ಹಾಗೂ ಹೋಟೆಲ್ ನೌಕರರೋರ್ವರು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.

    Click Here

    Call us

    Click Here

    ಘಟನೆಯ ವಿವರ:
    ನಾವುಂದದ ಗೋಪಾಲ ಪೂಜಾರಿ(೪೦) ಎಂಬುವವರು ಬೈಂದೂರು ತಹಶೀಲ್ದಾರರ ಕಛೇರಿ ರಸ್ತೆಯಿಂದ ಹೊಸ ಬಸ್ ನಿಲ್ದಾಣದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿರೂರು ಕಡೆಯಿಂದ ಬೈಕಿನಲ್ಲಿ ಬರುತ್ತಿದ್ದ ವೇಳೆ ಶಿರೂರು ಬದಿಯಿಂದ ಬರುತ್ತಿದ್ದ ಕಂಟೆನರ್ ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸಿರಸಿ ಮೂಲದವರಾದ ಗೋಪಾಲ ಪೂಜಾರಿ ಹೋಟೆಲೊಂದರಲ್ಲಿ ಉದ್ಯೋಗ ಮಾಡಿಕೊಂಡಿದ್ದು ಇತ್ತಿಚಿಗೆ ನಾವುಂದದ ತನ್ನ ಹೆಂಡತಿಯ ಮನೆಗೆ ಬಂದಿದ್ದರೆನ್ನಲಾಗಿದೆ. ಕೆಲಸದ ನಿಮಿತ್ತ ಬೈಂದೂರಿಗೆ ಬಂದು ನಾವುಂದಕ್ಕೆ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. (ಕುಂದಾಪ್ರ ಡಾಟ್ ಕಾಂ ಸುದ್ದಿ)

    ಈ ಅಪಘಾತ ನಡೆದ ಸ್ವಲ್ಪ ಹೊತ್ತಿನಲ್ಲೇ ಪಡುವರಿಯ ಜನಾರ್ಧನ ಆಚಾರ್ಯ(45) ಎಂಬುವವರು ಬೈಂದೂರು ಸಮೀಪದ ನಾಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಡ್ತರೆ ಕಡೆಗೆ ಹೋಗುತ್ತಿದ್ದಾಗ ಎದುರಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಬಿದ್ದು ಟಿಪ್ಪರ್ ಅವರ ಮೇಲೆ ಹೋದ ಪರಿಣಾಮ ತಲೆ ಛೀದ್ರಗೊಂಡು ಮೃತಪಟ್ಟಿದ್ದಾರೆ. ಮೈಕಳ ಶಾಲೆಯಲ್ಲಿ ಸಹಶಿಕ್ಷಕರಾಗಿರುವ ಜನಾರ್ಧನ ಆಚಾರ್ಯ ಬೈಂದೂರಿನ ಶಾಲೆಯೊಂದರಲ್ಲಿ ಕಾರ್ಯಕ್ರಮವನ್ನು ಮುಗಿಸಿಕೊಂಡು ಮತ್ತೆ ಮೈಕಳಕ್ಕೆ ತೆರಳುತ್ತಿದ್ದ ವೇಳೆಗೆ ಈ ಅವಘಡ ಸಂಭವಿಸಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

    ಸ್ಥಳಕ್ಕೆ ಬೈಂದೂರು ಠಾಣಾಧಿಕಾರಿ ಸಂತೋಷ್ ಕಾಯ್ಕಿಣಿ ಭೇಟಿನೀಡಿದ್ದಾರೆ ಪರಿಶೀಲಿಸಿದ್ದಾರೆ. ಘಟನೆಯಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯವಾಯಿತು. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    IMG-20151121-WA0001 IMG-20151121-WA0002 IMG-20151121-WA0003 IMG-20151121-WA0013 IMG-20151121-WA0018

    Click here

    Click here

    Click here

    Call us

    Call us

    Like this:

    Like Loading...

    Related

    accident Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.14 ರಿಂದ 21ರ ತನಕ ಸುರಭಿ ರಿ. ಬೈಂದೂರು ಆಯೋಜನೆಯಲ್ಲಿ ʼರಾಜ್ಯ ಮಟ್ಟದ ನಾಟಕ ಸ್ಪರ್ಧೆʼ

    04/12/2025

    ಎಲ್ಲೂರು ಕಂಬಳ ಸಂಪನ್ನ. 48 ಜೊತೆ ಕೋಣಗಳು ಭಾಗಿ

    28/11/2025

    ಕನ್ನಡ ನುಡಿಹಬ್ಬ, ರಾಜ್ಯ ಮಟ್ಟದ ಕಥಾ ಸ್ಪರ್ಧೆಯ ಬಹುಮಾನ ವಿತರಣೆ

    26/11/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d